![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 15, 2019, 5:01 AM IST
ಭೋಪಾಲ: ಕರ್ನಾಟಕ ಮತ್ತು ಗೋವಾದ ಬೆಳವಣಿಗೆಗಳಿಂದ ಭೀತಿಗೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು ಬುಧವಾರ ತುರ್ತು ಸಭೆ ನಡೆಸಲಿದ್ದಾರೆ.
ಕಮಲ್ನಾಥ್ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದರೂ, ಅತ್ಯಂತ ಸರಳ ಬಹುಮತದಲ್ಲಿಯೇ ಇದೆ.230ರ ಪೈಕಿ 114 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದ್ದರೆ, ಪ್ರತಿಪಕ್ಷ ಬಿಜೆಪಿ 109 ಸ್ಥಾನಗಳನ್ನು ಹೊಂದಿದೆ. ಸರಳ ಬಹುಮತಕ್ಕೆ 116 ಸ್ಥಾನಗಳು ಬೇಕು. 11 ದಿನಗಳ ಅವಧಿಯಲ್ಲಿ ಬುಧವಾರದ ಸಭೆ ಮೂರನೇಯದ್ದಾಗಿರಲಿದೆ.
ಗೋವಾದಲ್ಲಿನ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದಂತೆ, ಕರ್ನಾ ಟಕ ದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನಾಯಕತ್ವಕ್ಕೆ ಸೆಡ್ಡು ಹೊಡೆದು 15 ಮಂದಿ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಅದೇ ಮಾದರಿ ಪರಿಸ್ಥಿತಿ ಉಂಟಾದರೆ ಸಂಭಾವ್ಯ ಕ್ರಮಗಳೇನು ಎಂಬುದರ ಬಗ್ಗೆ ನಾಡಿದ್ದಿನ ಸಭೆಯಲ್ಲಿ ಮತ್ತೂಮ್ಮೆ ಸಮಗ್ರವಾಗಿ ಚರ್ಚಿಸಲು ನಿರ್ಧರಿಸಿದ್ದಾರೆ. ಮೂಲಗಳ ಪ್ರಕಾರ ಮುಖ್ಯಮಂತ್ರಿ ಕಮಲ್ನಾಥ್ ತಮ್ಮ ಶಾಸಕರನ್ನು ಭೇಟಿಯಾಗಿ ಅಹವಾಲು ಆಲಿಸಲಿದ್ದಾರೆ. ಸರಕಾರಕ್ಕೆ ಬೆಂಬಲ ನೀಡಿರುವ ಎಸ್ಪಿ, ಬಿಎಸ್ಪಿ ಮತ್ತು ಪಕ್ಷೇತರ ಶಾಸಕರೂ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಿಎಸ್ಪಿ ಶಾಸಕ ರಾಮ್ ಭಾಯ್ ಕೂಡ ಸಭೆಗೆ ಆಹ್ವಾನ ಇರುವುದನ್ನು ಖಚಿತ ಪಡಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.