ಸುರತ್ಕಲ್‌ ಟೋಲ್: ಸ್ಥಳೀಯ ವಾಹನಗಳಿಗೆ ಮೂರು ದಿನ ಟೋಲ್‌ ಸಂಗ್ರಹವಿಲ್ಲ: ಡಿಸಿ ಆದೇಶ


Team Udayavani, Jul 16, 2019, 9:07 AM IST

tol-3

ಸುರತ್ಕಲ್:‌ ಎನ್ ಐಟಿಕೆ ಟೋಲ್ ಗೇಟ್ ನಲ್ಲಿ ಸ್ಥಳೀಯ ವಾಹನಗಳಿಗೆ ಸುಂಕ ವಿಧಿಸಬಾರದೆಂದು ಅಗ್ರಹಿಸಿ ವಿವಿಧ ಪಕ್ಷಗಳ ಮತ್ತು ನಾಗರಿಕ ಸಂಘಟನೆಗಳ ಮುಖಂಡರು ನೀಡಿದ ಮನವಿಯನ್ನು ಪುರಸ್ಕರಿಸಿರುವ ಜಿಲ್ಲಾಧಿಕಾರಿಗಳು, ಸುಂಕ ವಸೂಲಿ ಕ್ರಮಕ್ಕೆ ಮೂರು ದಿನಗಳ ಕಾಲ ತಾತ್ಕಾಲಿಕ ತಡೆ ನೀಡಿದ್ದಾರೆ.

ಈ ಕಾರಣ ಇಂದಿನಿಂದ ಸ್ಥಳೀಯ ವಾಹನಗಳಿಂದಲೂ ಒಂದು ಬಾರಿಗೆ 25 ರೂ. ನಂತೆ ವಸೂಲು ಮಾಡುವ ಕ್ರಮವನ್ನು ಗುತ್ತಿಗೆ ವಹಿಸಿಕೊಂಡ ಕಂಪೆನಿ ಕೈಬಿಟ್ಟಿದೆ.

ಪ್ರತಿಭಟನೆ
ರಾಷ್ಟ್ರೀಯ ಹೆದ್ದಾರಿ ಎನ್‌ ಐಟಿಕೆ ಬಳಿಯ ಟೋಲ್‌ ಗೇಟ್‌ ನಲ್ಲಿ ಸ್ಥಳಿಯ ವಾಹನಗಳಿಗೂ (ಕೆಎ 19 ನೋಂದಣಿ) ಸುಂಕ ಸಂಗ್ರಹಿಸಿಸುವ ನಿರ್ಧಾರವನ್ನು ವಿರೋಧಿಸಿ ಟೋಲ್‌ ಗೇಟ್‌ ಬಳಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ನಂತರವೂ ಮುಂದುವರಿದಿದೆ.

ಮಂಗಳವಾರ ಬೆಳಗ್ಗೆ 7.30ರಿಂದ ವಿವಿಧ ಸಂಘಟನೆಗಳು, ಪಕ್ಷಾತೀತ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸುಂಕ ವಿರೋಧಿ ಪ್ರತಿಭಟನೆಗೆ ನಾಗರಿಕರ ಬೆಂಬಲವೂ ವ್ಯಕ್ತವಾಗಿದ್ದು ಟೋಲ್‌ ಗೇಟ್‌ ಬಳಿ ಭಾರಿ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ಬಳಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗಮಿಸಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಗೆ ದ.ಕ ಬಿಜೆಪಿ ಬೆಂಬಲ ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತ ರು ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ವಿಜಯಕುಮಾರ್ ಶೆಟ್ಟಿ, ಮುನೀರ್ ಕಾಟಿಪಳ್ಳ, ರಮೇಶ್ ಟಿ ಎನ್, ಮಿಥುನ್ ರೈ ಶಾಲೆಟ್ ಪಿಂಟೋ, ಈಶ್ವರ್ ಕಟೀಲ್, ತಿಲಕ್ ರಾಜ್ ಕೃಷ್ಣಾಪುರ, ಅಶೋಕ್ ಕೃಷ್ಣಾಪುರ, ಗಣೇಶ್ ಹೊಸಬೆಟ್ಟು, ರಜನಿ ದುಗ್ಗಣ್ಣ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.