ಫ‌ುಟ್ಪಾತ್‌ ತೆರವಿಗೆ ನಗರಸಭೆ ಮೀನಮೇಷ


Team Udayavani, Jul 16, 2019, 1:11 PM IST

tk-tdy-1..

ತಿಪಟೂರಿನ ಬಿ.ಎಚ್.ರಸ್ತೆಯ ಫ‌ುಟ್ಪಾತ್‌ನ್ನು ಆವರಿಸಿಕೊಂಡಿರುವ ಅಂಗಡಿ ಮಳಿಗೆಗೆಳು.

ತಿಪಟೂರು: ತಿಪಟೂರು ಜಿಲ್ಲಾ ಕೇಂದ್ರವಾಗುವ ಎಲ್ಲ ಅರ್ಹತೆ ಹೊಂದಿದ್ದರೂ ಸಾಕಷ್ಟು ಸಮಸ್ಯೆಗಳ ಸುಳಿ ಯಲ್ಲಿ ಸಿಲುಕಿ ನಲುಗುತ್ತಿದೆ. ನಗರ ಬೆಳೆದಂತೆಲ್ಲಾ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದುಪ್ಪಟ್ಟಾಗು ತ್ತಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಜಾಗವೇ ಇಲ್ಲದಂತಾಗಿದೆ. ನಗರಸಭೆ ಕೂಡಲೆ ಫ‌ುಟ್ಪಾತ್‌ ತೆರವು ಮಾಡುವ ಮೂಲಕ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬುದು ನಾಗರಿಕರ ಒತ್ತಾಯವಾಗಿದೆ.

ನಗರದ ಮಧ್ಯೆ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206 ಹಾಗೂ ಕೆಲ ಮುಖ್ಯ ರಸ್ತೆಗಳ ಎರಡೂ ಬದಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ಈವರೆಗೂ ಸರಿಯಾದ ಪುಟ್ಪಾತ್‌ ನಿರ್ಮಾಣ ಮಾಡಿಲ್ಲ. ಹೆದ್ದಾರಿಯ ಅಕ್ಕಪಕ್ಕದಲ್ಲಿದ್ದ ಚರಂಡಿಗಳ ಮೇಲೆ ಸಾರ್ವಜನಿಕರು ಓಡಾಡುತ್ತಿದ್ದು ಇದಕ್ಕೆ ಕಂಬಿಗಳನ್ನು ಅಳವಡಿಸಿ ಅನುಕೂಲ ಮಾಡಿದ್ದರೂ, ಆ ಸ್ಥಳಗಳಲ್ಲಿ ತರಕಾರಿ ಅಂಗಡಿ, ಬಟ್ಟೆ ಮಾರುವವರು, ಹಣ್ಣಿನ ಅಂಗಡಿಗಳು, ಟೀ-ಕಾಫಿ ಗೂಡಂಗಡಿ ಹೋಟೆಲ್ಗಳು, ಪಾನಿಪೂರಿ, ಗೋಬಿ ಸ್ಟಾಲ್ಗಳವರು ಬಹು ಪಾಲು ಫ‌ುಟ್ಪಾತ್‌ ಅತಿಕ್ರಮಣ ಮಾಡಿ ನಿತ್ಯ ವ್ಯಾಪಾರ-ವಹಿವಾಟು ನಡೆಸುತ್ತಿದ್ದಾರೆ. ಇದರಿಂದ ದಿನನಿತ್ಯ ಓಡಾಡುವ ಸಾವಿರಾರು ಪಾದಚಾರಿಗಳು ಹಾಗೂ ವಿದ್ಯಾರ್ಥಿಗಳು ಪಾದಚಾರಿ ಮಾರ್ಗವನ್ನು ಬಿಟ್ಟು ರಸ್ತೆಯಲ್ಲಿಯೇ ನಡೆದದಾಡುವಂತಾಗಿದೆ. ಇದರ ಪರಿಣಾಮ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಿದ್ದು ಇದಕ್ಕೆ ನಗರಸಭೆ, ಪೊಲೀಸ್‌ ಇಲಾಖೆಯ ಅಧಿಕಾರಿಗಳೇ ನೇರ ಹೊಣೆ ಎಂದು ಸಾರ್ವಜನಿಕರ ಆರೋಪವಾಗಿದೆ.

ಬೇಜವಾಬ್ದಾರಿ ನಗರಸಭೆ : ಫ‌ುಟ್ಪಾತ್‌ ಅಂಗಡಿ ಗಳನ್ನು ತೆರವು ಕಾರ್ಯದಲ್ಲಿ ನಗರಸಭೆ ಮೀನಮೇಷ ಎಣಿಸುತ್ತಿದ್ದು, ಈ ಬಗ್ಗೆ ಸಾಮಾನ್ಯ ಸಭೆ, ವಿಶೇಷ ಸಭೆ ಗಳಲ್ಲಿ ಮಾತ್ರ ಶೀಘ್ರದಲ್ಲಿಯೆ ಫ‌ುಟ್ಪಾತ್‌ ತೆರವು ಮಾಡಲಾಗುತ್ತದೆ ಎಂದು ಅಧಿಕಾರಿಗಳು ಬಾಯಿ ಮಾತಿಗೆ ಹೇಳುತ್ತಾರೆ. ಆದರೆ ವರ್ಷಗಳೆ ಕಳೆದರೂ ತೆರವು ಕಾರ್ಯ ಮಾತ್ರ ಮಾಡಿಲ್ಲ. ನಗರದಾದ್ಯಂತ ಬಹುತೇಕ ನಗರಸಭೆ ಜಾಗವನ್ನು ಫ‌ುಟ್ಪಾತ್‌ ವ್ಯಾಪಾರಿಗಳೇ ಆಕ್ರಮಿಸಿಕೊಂಡಿದ್ದು, ಸುಗಮ ಸಂಚಾರಕ್ಕೆ ತೊಂದರೆಯೊಡ್ಡಿದ್ದಾರೆ. ಇದಕ್ಕೆ ಪೊಲೀಸ್‌ ಇಲಾಖೆಯೂ ಸಾಥ್‌ ನೀಡುತ್ತಿದೆ. ನಗರಸಭೆ, ಪೊಲೀಸ್‌ ಇಲಾಖೆ ಬೇಜವಾಬ್ದಾರಿ ತನ ದಿಂದಾಗಿ ಅಕ್ರಮವಾಗಿ ಫ‌ುಟ್ಪಾತ್‌ ವ್ಯಾಪಾರಕ್ಕೆ ಅನುವು ಮಾಡಿ ಕೊಟ್ಟು ಸಾರ್ವಜನಿಕರ ಹಿತಕ್ಕೆ ಎಳ್ಳುನೀರು ಬಿಟ್ಟಿದೆ. ಇನ್ನು ಪೊಲೀಸರು ಗೂಡಂಗಡಿ ಗಳಿಂದ ಮಾಮೂಲಿ ಪಡೆದು ಕಣ್ಮುಚ್ಚಿ ಕುಳಿತಿರುವುದು ಜಗಜ್ಜಾಹಿರವಾದ ವಿಷಯವಾಗಿದೆ.

ಜಿಲ್ಲಾಧಿಕಾರಿಗಳಿಗೆ ಒತ್ತಾಯ: ನಗರದ ಹೆದ್ದಾರಿ ಅಕ್ಕಪಕ್ಕದ ಫ‌ುಟ್ಪಾತ್‌ ಮಾತ್ರ ಒತ್ತುವರಿಯಾಗಿದೆ. ನಗರದ ಪ್ರಮುಖ ಟಿ.ಬಿ. ಸರ್ಕಲ್, ಹಾಸನ ಸರ್ಕಲ್, ಕೋಡಿ ಸರ್ಕಲ್, ಸಿಂಗ್ರಿ ನಂಜಪ್ಪ ಸರ್ಕಲ್ಗಳಲ್ಲಂತೂ ಜನರ ಹಾಗೂ ವಾಹನಗಳ ಓಡಾಟಕ್ಕೆ ಸ್ವಲ್ಪವೂ ಜಾಗ ಬಿಡದಂತೆ ರಸ್ತೆಗಳನ್ನೇ ಅತಿಕ್ರಮಿಸಿ ಪೆಟ್ಟಿಗೆ ಅಂಗಡಿ ಗಳವರು ವ್ಯಾಪಾರ-ವಹಿವಾಟು ನಡೆಸುತ್ತಿದ್ದು ಇದ ರಿಂದ ನಿತ್ಯ ಅಪಘಾತಗಳಾಗುತ್ತಿವೆ. ಇದು ನಗರ ಸಭೆ ಅಧಿಕಾರಿಗಳು ಹಾಗೂ ಪೊಲೀಸರ ಎದುರಿನಲ್ಲೇ ನಡೆಯುತ್ತಿದ್ದರೂ ಯಾವುದೇ ಕಠಿಣ ಕ್ರಮ ತೆಗದು ಕೊಳ್ಳದಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಸದ್ಯ ನಗರಸಭೆಗೆ ಜಿಲ್ಲಾಧಿಕಾರಿಗಳೇ ಆಡಳಿತಾಧಿಕಾರಿ ಆಗಿರುವುದರಿಂದ ತಿಪಟೂರು ನಗರದ ಒಳಗೆ ಹಾಗೂ ಪ್ರಮುಖ ಸರ್ಕಲ್ಗಳ ರಸ್ತೆಗಳ ಒತ್ತುವರಿ ಯನ್ನು ಖುದ್ದು ಪರಿಶೀಲಿಸಿ, ತೆರವುಗೊಳಿಸುವ ದಿಟ್ಟ ಕ್ರಮ ಜರುಗಿಸಬೇಕೆಂಬುದು ನಗರದ ಸಾರ್ವಜನಿಕರ ಒತ್ತಾಯವಾಗಿದೆ.

 

● ಬಿ. ರಂಗಸ್ವಾಮಿ, ತಿಪಟೂರು

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.