![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 17, 2019, 3:00 AM IST
ಹುಣಸೂರು: ಪ್ರಾಥಮಿಕ ಹಂತದಿಂದಲೇ ಪರಿಸರ, ಶಿಸ್ತು, ಸಮಯಪ್ರಜ್ಞೆ ರೂಢಿಸಿಕೊಳ್ಳಬೇಕು ಎಂದು ಡಿವೈಎಸ್ಪಿ ಭಾಸ್ಕರ್ ರೈ ಸಲಹೆ ನೀಡಿದರು.
ತಾಲೂಕಿನ ಮರದೂರು ಲಾ ಸಲೆಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಸತ್ನ ಪದಗ್ರಹಣ ಸಮಾರಂಭದಲ್ಲಿ ಆಕರ್ಷಕ ಪಥ ಸಂಚಲನದ ಮೂಲಕ ವಿದ್ಯಾರ್ಥಿಗಳು ನೀಡಿದ ಗೌರವ ವಂದನೆ ಸ್ವೀಕರಿಸಿ, ವಿದ್ಯಾರ್ಥಿ ನಾಯಕರಿಗೆ ಪದಗ್ರಹಣ ನೆರವೇರಿಸಿ ಮಾತನಾಡಿದರು.
ದುಶ್ಚಟದಿಂದ ದೂರವಿರಿ: ಕಲಿಕೆಯಲ್ಲಿ ಆಸಕ್ತಿ ತೋರಬೇಕು, ಶಾಲೆಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತನ್ಮೂಲಕ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು, ಗುರಿ ಇಟ್ಟುಕೊಂಡು ಛಲದಿಂದ ಸಾಧಿಸುವ ಛಾತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ನಾಯಕತ್ವ ಗುಣ: ಸಂಸ್ಥೆಯ ನಿರ್ದೇಶಕ ಫಾ.ಜೋಬಿಟ್, ಶಾಲಾ ಸಂಸತ್ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ತಿಳಿವಳಿಕೆ ಹಾಗೂ ಲೀಡರ್ಶಿಪ್ ಬೆಳೆಯಲಿದೆ. ಸಂಸ್ಥೆಯ ಎಲ್ಲಾ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.
ಸಂಸ್ಥೆಯ ವ್ಯವಸ್ಥಾಪಕ ಫಾ.ಜೋಜೋ, ಸಹಾಯಕ ವ್ಯವಸ್ಥಾಪಕ ಫಾ.ಅನಿತ್, ಫಾ.ಜಾನಿ, ಪ್ರಾಚಾರ್ಯ ರವಿದೀಪಕ್, ಮುಖ್ಯ ಶಿಕ್ಷಕಿ ಸಿಸ್ಟರ್ ಕರುಣಾ, ಶಾಲಾ-ಕಾಲೇಜು ಶಿಕ್ಷಕರು ಹಾಗೂ ಪೋಷಕರು ಪಾಲ್ಗೊಂಡಿದ್ದರು. ಮಕ್ಕಳು ಆಕರ್ಷಕ ಸಾಮೂಹಿಕ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಉತ್ತಮ ಪಥಸಂಚಲನ ನಡೆಸಿದ ತಂಡಕ್ಕೆ ಟ್ರೋಫಿ ವಿತರಿಸಲಾಯಿತು.
ಶಾಲಾ ಸಂಸತ್: ಶಾಲಾ ಸಂಸತ್ಗೆ ಎಂ.ಐ.ನಿಜಾಂ -ಹೆಡ್ಬಾಯ್, ಸಿ.ಮೋನಿಕಾ-ಹೆಡ್ಗರ್ಲ್, ಸಹನಾ ಎಂ.ಎಸ್ -ಶಿಕ್ಷಣಮಂತ್ರಿ, ಯು.ಎಂ.ಭೂಮಿಕಾ-ಶಿಸ್ತು ಮಂತ್ರಿ, ಎಂ.ಆರ್.ಸಿಂಚನಾ-ವಾರ್ತಾ ಮತ್ತು ಸಂಪರ್ಕ ಸಚಿವೆ, ಎಚ್.ಆರ್.ಮನೋಜ್ -ಕ್ರೀಡಾಮಂತ್ರಿ, ಮಹಮದ್ ಫಯಾಜ್- ಸಾಂಸ್ಕೃತಿಕ ಸಚಿವ ಹಾಗೂ ಪ್ರಮೋದ್ ಕುಮಾರ್ -ಆರೋಗ್ಯ ಮತ್ತು ಶುಚಿತ್ವ ಸಚಿವರಾಗಿ ಆಯ್ಕೆಯಾಗಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.