ಧ್ಯಾನ, ದುಡಿಮೆಯಿಂದ ಯಶಸ್ಸು: ಶಿವಸುಜ್ಞಾನಶ್ರೀ
Meditation, success with work: Shivasugastri Shree
Team Udayavani, Jul 18, 2019, 5:26 AM IST
ಬ್ರಹ್ಮಾವರ: ಮನುಷ್ಯನ ಜೀವನದಲ್ಲಿ ಬಡತನ ಹೋಗಲಾಡಿಸಲು ಕಠಿಣ ದುಡಿಮೆಯ ಪ್ರಯತ್ನ ಮುಖ್ಯ. ಜತೆಗೆ ಭಗವಂತನ ಕೃಪಾಕಟಾಕ್ಷಕ್ಕೆ ಪಾತ್ರನಾಗಿ ಮೋಕ್ಷ ಪಡೆಯುವಂತಹ ಇನ್ನೊಂದು ಪ್ರಯತ್ನವನ್ನೂ ಆತ ಮಾಡಬೇಕು ಎಂದು ವಿಶ್ವಕರ್ಮ ಜಗದ್ಗುರು ಪೀಠ ಹಾಸನ ಅರೇ ಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾ ಸಂಸ್ಥಾನದ ಪೀಠಾಧಿಪತಿ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಹೇಳಿದರು.
ಅವರು ಮುದ್ದೂರು ಕಜ್ಕೆಯ ಶಾಖಾ ಮಠದಲ್ಲಿ ತಮ್ಮ 37ನೇ ಚಾತುರ್ಮಾಸ್ಯ ವ್ರತಾನುಷ್ಠಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ವಿಶ್ವಕರ್ಮರು ಧಾರ್ಮಿಕ ಪ್ರಪಂಚಕ್ಕೆ ಕೊಟ್ಟ ಕೊಡುಗೆ ಸಾಕಷ್ಟಿದೆ. ಎಲ್ಲ ಧರ್ಮಗಳವರ ಧಾರ್ಮಿಕ ಕೇಂದ್ರಗಳ ಕಟ್ಟಡ ರಚನೆ, ಕೆತ್ತನೆ, ಮೂರ್ತಿ ರಚನೆಯನ್ನು ಮಾಡುವ ವಿಶ್ವಕರ್ಮರು ಸರ್ವಧರ್ಮಕ್ಕೂ ಬೇಕಾದವರು ಎಂದರು.
ಚಾತುಮಾಸ್ಯ ವ್ರತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಸಾೖಬ್ರಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಭೀಮಸೇನ ಬಡಿಗೇರ ಧಾರ್ಮಿಕ ಉಪನ್ಯಾಸ ನೀಡಿದರು. ಪ್ರಮುಖರಾದ ಕೆ. ವಾದಿರಾಜ ರಾವ್ ನೇಜಾರು, ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ ಮಾರ್ನಬೈಲು, ಕಾರ್ಕಳದ ಪ್ರಕಾಶ್ ಆಚಾರ್ಯ, ನಾಗರಾಜ ಆಚಾರ್ಯ ಅಲೆವೂರು, ಚಿನ್ನಪ್ಪ ಪತ್ತಾರ್, ಚಂದ್ರಶೇಖರ ಆಚಾರ್ಯ ಹಾಸನ, ನರೇಂದ್ರ ಆಚಾರ್ಯ ಹಾಸನ, ಸುಬ್ರಹ್ಮಣ್ಯ ಆಚಾರ್ಯ ಮೈಸೂರು, ಬೆಂಗಳೂರಿನ ಕೃಷ್ಣವೇಣಿ, ಪ್ರಕಾಶ ಆಚಾರ್ಯ ನೇರಂಬಳ್ಳಿ, ಜಿ.ಎಸ್. ಚಂದ್ರ ಆಚಾರ್ಯ ಗೋಳಿಯಂಗಡಿ ಮೊದಲಾದವರು ಉಪಸ್ಥಿತರಿದ್ದರು.
ಕಜ್ಕೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷ ಅಲೆವೂರು ಯೋಗೀಶ ಆಚಾರ್ಯ ಪ್ರಾಸ್ತಾವನೆಗೈದರು. ರವಿಚಂದ್ರ ಆಚಾರ್ಯ ಮಾರಾಳಿ ಸ್ವಾಗತಿಸಿ, ಶಿಲ್ಪಿ ಶ್ರೀಧರ ಆಚಾರ್ಯ ಬಂಡಿಮಠ ವಂದಿಸಿದರು. ಬಾರ್ಕೂರು ಪುರೋಹಿತ್ ದಾಮೋದರ ಶರ್ಮ, ಚಿತ್ತೂರು ಪ್ರಭಾಕರ ಆಚಾರ್ಯ ನಿರೂಪಿಸಿದರು.ಚಾತುರ್ಮಾಸ್ಯ ಸಂಕಲ್ಪದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.