ವಾರದೊಳಗೆ ಯಕ್ಷಗಾನ ಪಠ್ಯಪುಸ್ತಕ ಸಿದ್ಧ


Team Udayavani, Jul 18, 2019, 3:08 AM IST

varadolage

ಬೆಂಗಳೂರು: ಯಕ್ಷಗಾನವನ್ನು ಕ್ರಮಬದ್ಧವಾಗಿ ಕಲಿಸುವ ಉದ್ದೇಶದಿಂದ ಪಠ್ಯಪುಸ್ತಕ ರಚನೆ ಕಾರ್ಯ ಪ್ರಗತಿಯಲ್ಲಿದ್ದು, ಈಗ ಮುದ್ರಣ ಕಾರ್ಯವೂ ಪೂರ್ಣಗೊಂಡಿದ್ದು, ವಾರದೊಳಗೆ ಪಠ್ಯಪುಸ್ತಕ ಬಿಡುಗಡೆಗೆ ಸಿದ್ಧಗೊಳ್ಳಲಿದೆ. ಇದರೊಂದಿಗೆ ಯಕ್ಷಗಾನ ಅಕಾಡೆಮಿಯ 12 ವರ್ಷಗಳ ಹಿಂದಿನ ಕನಸೊಂದು ಈಡೇರುವ ಕಾಲ ಸನ್ನಿಹಿತವಾಗಿದೆ.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪಠ್ಯಪುಸ್ತಕ ಸಂಘಕ್ಕೆ ಈ ಯಕ್ಷಗಾನ ಪಠ್ಯ ಪುಸ್ತಕವನ್ನು ಮುದ್ರಣ ಮಾಡುವ ಹೊಣೆ ವಹಿಸಲಾಗಿದ್ದು, 5-6 ತಿಂಗಳ ಹಿಂದೆಯೇ ಈ ಕುರಿತಂತೆ ಸರಕಾರದಿಂದ ಆದೇಶವೂ ಬಂದಿದೆ. ಈಗಾಗಲೇ ಪ್ರತ್ಯೇಕವಾಗಿ ಇದಕ್ಕೊಂದು ಪಠ್ಯಪುಸ್ತಕ ರಚನೆ ಸಮಿತಿಯನ್ನು ರಚಿಸಲಾಗಿತ್ತು.

12 ವರ್ಷಗಳ ಹಿಂದಿನ ಯೋಜನೆ: 2007ರಲ್ಲಿ ಕುಂಬ್ಳೆ ಸುಂದರ್‌ ರಾವ್‌ ಅವರು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದ ವೇಳೆ ಯಕ್ಷಗಾನವನ್ನು ವ್ಯವಸ್ಥಿತ ರೀತಿಯಲ್ಲಿ ಕಲಿಯಲು ಇಚ್ಛಿಸುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಠ್ಯಪುಸ್ತಕವೊಂದನ್ನು ರಚಿಸುವ ಯೋಜನೆಯನ್ನು ಹಾಕಿಕೊಂಡಿದ್ದು, ಆ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೂ ಪ್ರಸ್ತಾವನೆ ಕಳುಹಿಸಿದ್ದರು.

ಅವರ ಅವಧಿ ಮುಗಿದ ಬಳಿಕ ಅಧ್ಯಕ್ಷರಾದ ಎಂ.ಎಲ್‌. ಸಾಮಗ ಅವರು ಸಹ ಇದರ ಕುರಿತಂತೆ ಸಾಕಷ್ಟು ಪ್ರಯತ್ನ ಮುಂದುವರಿಸಿದ್ದರು. ಬಳಿಕ ಪಠ್ಯಪುಸ್ತಕ ರಚನೆ ಸಂಬಂಧ ಯಕ್ಷಗಾನ ತಜ್ಞರ ಸಮಿತಿಯೊಂದನ್ನು ರಚಿಸಲಾಗಿತ್ತು. ಈಗ ಬಿಡುಗಡೆ ಹೊಸ್ತಿಲಲ್ಲಿರುವ ಪಠ್ಯಪುಸ್ತಕ ಸುಮಾರು 12 ವರ್ಷಗಳ ಹಿಂದಿನ ಯೋಜನೆಯಾಗಿದೆ.

ಸ್ವರೂಪ ಹೇಗೆ?: ಪಠ್ಯಪುಸ್ತಕವು ಜೂನಿಯರ್‌ ಹಾಗೂ ಸೀನಿಯರ್‌ ಎನ್ನುವ ಎರಡು ಬೇರೆ ಬೇರೆ ಸಿಲೆಬಸ್‌ ಇಟ್ಟುಕೊಂಡು ಸಿದ್ಧಪಡಿಸಲಾಗುತ್ತಿದೆ. ಯಕ್ಷಗಾನದ ಸಾಹಿತ್ಯ ಚರಿತ್ರೆ, ಬಯಲಾಟದ ಪ್ರಕಾರಗಳ ಸ್ವರೂಪ, ವಿವೇಚನೆಗಳ ಬಗ್ಗೆ ಈ ಪುಸ್ತಕದಲ್ಲಿರಲಿದೆ. ಕರಾವಳಿಯ ತೆಂಕು ತಿಟ್ಟು, ಬಡಗು ತಿಟ್ಟು ಯಕ್ಷಗಾನ ಪ್ರಕಾರ, ಉತ್ತರ ಕನ್ನಡದ ಬಯಲಾಟಕ್ಕೆ ಸಂಬಂಧಿಸಿದ ಪಠ್ಯವನ್ನು ಇದು ಒಳಗೊಂಡಿರಲಿದೆ.

ಈವರೆಗೆ ಯಕ್ಷಗಾನ ತರಬೇತಿ ನೀಡುವವರು ತಾವೇ ಒಂದು ಮಾದರಿ ಇಟ್ಟುಕೊಂಡು ಕಲಿಸುತ್ತಿದ್ದರು. ಜೂನಿಯರ್‌, ಸೀನಿಯರ್‌ ಹಾಗೂ ವಿದ್ವತ್‌ ಪರೀಕ್ಷೆ ಬರೆಯುವವರಿಗೆ ಇದು ಅನುಕೂಲವಾಗಲಿದೆ. ಆದರೆ ಈ ಪಠ್ಯಪುಸ್ತಕದಿಂದ ಯಕ್ಷಗಾನ ಕಲಿಕೆಗೆ ಅನುಕೂಲವಾಗಲಿದೆ. ಈ ಪುಸ್ತಕದ ಕುರಿತು ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ. ಭವಿಷ್ಯದಲ್ಲಿ ಶಾಲಾ -ಕಾಲೇಜು ಮಟ್ಟದಲ್ಲಿಯೂ ಇದನ್ನೊಂದು ಪಠ್ಯವಾಗಿ ಕಲಿಸಲು ಕೂಡ ಅನುಕೂಲವಾಗುತ್ತದೆ.

ಕೇಂದ್ರ ಕಚೇರಿ ಸ್ಥಳಾಂತರವಿಲ್ಲ..!: ಬೆಂಗಳೂರಿನಲ್ಲಿರುವ ಯಕ್ಷಗಾನ ಅಕಾಡೆಮಿಯ ಕೇಂದ್ರ ಕಚೇರಿಯನ್ನು ಮಂಗಳೂರಿಗೆ ಸ್ಥಳಾಂತರಿಸುವ ಕುರಿತಂತೆ ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸದ್ಯ ಈ ಪ್ರಕ್ರಿಯೆಗೆ ಬ್ರೇಕ್‌ ಬಿದ್ದಿದೆ. ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಉಮಾಶ್ರೀ ಅವರು ಕೇಂದ್ರ ಕಚೇರಿಯನ್ನು ಮಂಗಳೂರಿಗೆ ಸ್ಥಳಾಂತರಿಸುವ ಕುರಿತು ಮೌಖೀಕ ಆದೇಶ ನೀಡಿದ್ದರು.

ಆದರೆ ಈ ಅಕಾಡೆಮಿ ಅಡಿಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಪಡುವಲಪಾಯ ಕಲಾವಿದರು ಮಾತ್ರವಲ್ಲದೆ ಬೆಂಗಳೂರು, ತುಮಕೂರು, ಮೈಸೂರು ಸೇರಿ ಸುಮಾರು 12 ಜಿಲ್ಲೆಗಳ ಮೂಡಲಪಾಯ, ಘಟ್ಟದ ಕೋರೆ, ಕೇಳಿಕೆ ಪ್ರಕಾರಗಳು ಕೂಡ ಬರುವುದರಿಂದ ಸ್ಥಳಾಂತರ ಮಾಡಿದರೆ ಅಕಾಡೆಮಿ ಕೆಲಸಕ್ಕೆ ಬರುವವರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಅಕಾಡೆಮಿಯಿಂದಲೂ ಸರಕಾರಕ್ಕೆ ಪತ್ರ ಬರೆಯಲಾಗಿದ್ದು, ಇದರಿಂದ ಸ್ಥಳಾಂತರ ಪ್ರಕ್ರಿಯೆಯನ್ನು ಕೈಬಿಡಲಾಗಿದ್ದು, ಇದರ ಅಧಿಕೃತ ಆದೇಶ ಮಾತ್ರ ಇನ್ನಷ್ಟೇ ಹೊರಬೀಳಬೇಕಿದೆ.

ಈಗಾಗಲೇ ಪಠ್ಯಪುಸ್ತಕ ಪ್ರಕ್ರಿಯೆ ಅಂತಿಮಗೊಂಡು, ಮುದ್ರಣ ಕೆಲಸವೂ ಅಂತಿಮ ಹಂತದಲ್ಲಿದೆ. ತ್ವರಿತಗತಿಯಲ್ಲಿ ಮುದ್ರಣ ಕಾರ್ಯ ಮುಗಿಸಲು ಯಕ್ಷಗಾನ ಅಕಾಡೆಮಿ ವತಿಯಿಂದ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿತ್ತು. ಇನ್ನು ಕೆಲವೇ ದಿನಗಳಲ್ಲಿ ಯಕ್ಷಗಾನ ಪಠ್ಯಪುಸ್ತಕ ಬಿಡುಗಡೆಗೆ ಸಿದ್ಧಗೊಳ್ಳಲಿದೆ. ಇದರಿಂದ ಯಕ್ಷಗಾನ ತರಬೇತಿ ನೀಡುವವರಿಗೆ, ಯಕ್ಷಗಾನ ಕಲಿಕೆಗೆ ಪ್ರಯೋಜನವಾಗಲಿದೆ.
-ಎಂ.ಎಂ. ಹೆಗಡೆ, ಅಧ್ಯಕ್ಷರು, ರಾಜ್ಯ ಯಕ್ಷಗಾನ ಅಕಾಡೆಮಿ

ಯಕ್ಷಗಾನ ಪಠ್ಯಪುಸ್ತಕ ಮುದ್ರಣ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ವಾರದೊಳಗೆ ಈ ಕುರಿತ ಎಲ್ಲ ಪ್ರಕ್ರಿಯೆಗಳು ಮುಕ್ತಾಯಗೊಳ್ಳಲಿದ್ದು, ಮುಂದಿನ ಸಭೆಯಲ್ಲಿ ಈ ಅಂತಿಮಗೊಳಿಸಲಾಗುವುದು. ಪ್ರಥಮ ಹಂತದಲ್ಲಿ 5 ಸಾವಿರ ಪುಸ್ತಕ ಮುದ್ರಣಗೊಳಿಸಲಾಗಿದೆ.
-ಗೋಪಾಲಕೃಷ್ಣ ಎಚ್‌.ಎನ್‌., ವ್ಯವಸ್ಥಾಪಕ ನಿರ್ದೇಶಕರು, ರಾಜ್ಯ ಪಠ್ಯಪುಸ್ತಕ ಸಂಘ

* ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.