ಬಿಜೆಪಿ ಶಾಸಕರಲ್ಲಿ ಸಂತಸ, ಹೆಚ್ಚಿದ ಆತ್ಮವಿಶ್ವಾಸ


Team Udayavani, Jul 18, 2019, 3:05 AM IST

bjp-shasa

ಬೆಂಗಳೂರು: ಸುಪ್ರೀಂಕೋರ್ಟ್‌ನ ಮಧ್ಯಂತರ ತೀರ್ಪು ಹೊರ ಬೀಳುತ್ತಿದ್ದಂತೆ ಬಿಜೆಪಿ ಶಾಸಕರು ನೆಲೆಸಿರುವ ಯಲಹಂಕ ಸಮೀಪದ ರಮಡಾ ರೆಸಾರ್ಟ್‌ನಲ್ಲಿ ಸಂಭ್ರಮ ಮನೆ ಮಾಡಿತು.

ಸುಪ್ರೀಕೋರ್ಟ್‌ ತೀರ್ಪು ಅತೃಪ್ತ ಶಾಸಕರ ಪರವಾಗಿದೆ ಎಂಬ ಕಾರಣಕ್ಕೆ ಸಂತಸದಲ್ಲಿದ್ದ ಬಿಜೆಪಿಗೆ ಸರ್ಕಾರ ರಚನೆಯ ವಿಶ್ವಾಸ ಹೆಚ್ಚಾಗಿತ್ತು. ಶಾಸಕರು ಪರಸ್ಪರ ಅಭಿನಂದನೆ ಹೇಳಿಕೊಳ್ಳುವುದರ ಜತೆಗೆ ಹಿರಿಯ ನಾಯಕರಿಗೂ ಶುಭ ಕೋರಿದರು. ಶಾಸಕ ಎಸ್‌.ರಘು ಅವರು ಲಾಡು ತರಿಸಿ ಎಲ್ಲರಿಗೂ ಹಂಚಿದರು.

ಗವಿ ಗಂಗಾಧರಸ್ವಾಮಿ ದೇವಸ್ಥಾನದಲ್ಲಿ ನಡೆದ ಹೋಮದಲ್ಲಿ ಪಾಲ್ಗೊಂಡು ರೆಸಾರ್ಟ್‌ಗೆ ಹಿಂತಿರುಗಿದ ಯಡಿಯೂರಪ್ಪ ಅವರು ಮಧ್ಯಾಹ್ನ 1.30ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಗುರುವಾರದ ಕಲಾಪವು ಬಿಜೆಪಿಗೆ ಮಹತ್ವದ್ದಾಗಿದ್ದು, ಎಲ್ಲ ಶಾಸಕರು ತಾಳ್ಮೆಯಿಂದ ವರ್ತಿಸಬೇಕು.

ಮುಖ್ಯಮಂತ್ರಿಗಳ ನಡೆ ಆಧರಿಸಿ ಮುಂದಿನ ಹೆಜ್ಜೆ ಇರಿಸಲಾಗುವುದು. ಇದಕ್ಕೆ ಎಲ್ಲ ಶಾಸಕರೂ ಬದ್ಧವಾಗಿರಬೇಕು. ಯಾರೊಬ್ಬರೂ ಪ್ರಚೋದನೆಗೆ ಒಳಗಾಗಿ ತಾಳ್ಮೆ ಕಳೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು ಎನ್ನಲಾಗಿದೆ.

ಹುಟ್ಟುಹಬ್ಬ ಆಚರಣೆ: ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್‌ ಅವರ ಹುಟ್ಟುಹಬ್ಬವನ್ನು ರೆಸಾರ್ಟ್‌ನಲ್ಲೇ ಶಾಸಕರು ಆಚರಿಸಿದರು. ಬಳಿಕ ಹಿರಿಯ ನಾಯಕರು ಶಾಸಕರೊಂದಿಗೆ ಒಟ್ಟಿಗೆ ಭೋಜನ ಸೇವಿಸಿ, ಕೆಲಹೊತ್ತು ವಿಶ್ರಾಂತಿ ಪಡೆದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಬುಧವಾರ ಮೊದಲ ಬಾರಿಗೆ ರೆಸಾರ್ಟ್‌ಗೆ ಭೇಟಿ ನೀಡಿದ್ದರು.

ಸುಗಮ ಸಂಗೀತ: ರೆಸಾರ್ಟ್‌ನಲ್ಲಿ ಬುಧವಾರ ಸಂಜೆ ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಡಬಗೆರೆ ಮುನಿರಾಜು ಮತ್ತು ತಂಡ ಸುಗಮ ಸಂಗೀತ ಪ್ರಸ್ತುತಪಡಿಸಿತು.

ರೆಸಾರ್ಟ್‌ನಲ್ಲಿ ಎನ್‌.ಆರ್‌.ಸಂತೋಷ್‌: ಕಾಂಗ್ರೆಸ್‌, ಜೆಡಿಎಸ್‌ನ 12 ಶಾಸಕರು ರಾಜೀನಾಮೆ ನೀಡುವಾಗ ವಿಧಾನಸೌಧ ಹಾಗೂ ರಾಜಭವನದಲ್ಲಿ ಕಾಣಿಸಿಕೊಂಡಿದ್ದ, ಬಳಿಕ ಹಲವು ಶಾಸಕರು ಮುಂಬೈಗೆ ತೆರಳುವಾಗಲೂ ಪ್ರತ್ಯಕ್ಷರಾಗಿದ್ದ ಯಡಿಯೂರಪ್ಪ ಅವರ ಆಪ್ತ ಸಹಾಯಕ ಎನ್‌.ಆರ್‌.ಸಂತೋಷ್‌ ಬುಧವಾರ ಮೊದಲ ಬಾರಿಗೆ ರೆಸಾರ್ಟ್‌ಗೆ ಭೇಟಿ ನೀಡಿ, ಕೆಲ ಹೊತ್ತು ಕಳೆದರು. ಬಳಿಕ ಅವರು ರೆಸಾರ್ಟ್‌ನಿಂದ ತೆರಳಿದರು ಎಂದು ಮೂಲಗಳು ತಿಳಿಸಿವೆ.

ಶಾಸಕರಿಂದ ದೇವರ ದರ್ಶನ: ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಸಿದ್ದು ಸವದಿ, ಮಹದೇವ ಯಾದವಾಡ ಅವರು ಮುಳಬಾಗಿಲು ಸಮೀಪದ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

“ವಿಪ್‌’ ಜಾರಿ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಗುರುವಾರ ಸದನದಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಪಕ್ಷೇತರ ಶಾಸಕರಾದ ಆರ್‌.ಶಂಕರ್‌, ಎಚ್‌.ನಾಗೇಶ್‌ ಅವರೊಂದಿಗೆ ಸದನಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.