ಮುಂಗಾರು ಬೆಳೆಗೆ ಸಿಕ್ಕೀತೆ ಜಲಾಶಯದ ನೀರು?

ಜುಲೈನಲ್ಲಿ ಕೇವಲ 14.30 ಟಿಎಂಸಿ ನೀರು ಸಂಗ್ರಹ •ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ

Team Udayavani, Jul 18, 2019, 11:27 AM IST

18-July-12

ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು.

ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ಅಂತಾರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ ಈ ಬಾರಿಯೂ ಮುಂಗಾರು ಹಂಗಾಮು ಬೆಳೆಗೆ ನೀರು ದೊರೆಯುವುದು ಅನುಮಾನವಾಗಿದೆ.

ಜುಲೈ ತಿಂಗಳು ಕಳೆಯುತ್ತಿದ್ದು, ಈ ವರೆಗೂ ಜಲಾನಯನ ಪ್ರದೇಶದಲ್ಲಿ ಸಮರ್ಪಕವಾಗಿ ನಿರಂತರ ಮಳೆಯಾಗದ್ದರಿಂದ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದ ನೀರು ಹರಿದು ಬಂದಿಲ್ಲ. ಅಲ್ಲದೆ ಒಳಹರಿವಿನ ಪ್ರಮಾಣವೂ ಕುಸಿದಿದ್ದು, ಮಳೆ ಬಾರದಿದ್ದಲ್ಲಿ ಸಮಸ್ಯೆ ಉಲ್ಬಣಗೊಳ್ಳಲಿದೆ.

ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳ 6 ಜಿಲ್ಲೆಗಳ ಒಟ್ಟು 12 ಲಕ್ಷ ಎಕರೆಗೂ ಹೆಚ್ಚು ಜಮೀನುಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸುತ್ತದೆ. ಜಲಾನಯನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ತುಂಗಾ ಜಲಾಶಯದಿಂದಲೂ ನದಿಗೆ ಹರಿದುಬರುವ ನೀರಿನ ಪ್ರಮಾಣ ಕುಸಿದಿದೆ. ಜುಲೈ ತಿಂಗಳು ಮುಗಿಯುತ್ತಿದ್ದರೂ ಜಲಾಶಯಕ್ಕೆ ಗರಿಷ್ಠ ಪ್ರಮಾಣದ ನೀರು ಹರಿದು ಬರುತ್ತಿಲ್ಲ. ಹೀಗಾಗಿ ಈ ಬಾರಿ ಮುಂಗಾರು ಬೆಳೆಗೆ ಜಲಾಶಯದಿಂದ ನೀರು ದೊರಕುವುದು ಅನುಮಾನ ಎನ್ನಲಾಗುತ್ತಿದ್ದು ರೈತರನ್ನು ಆತಂಕಕ್ಕೀಡು ಮಾಡಿದೆ.

60-70 ಟಿಎಂಸಿ ಇದ್ದರೆ ಭತ್ತಕ್ಕೆ ನೀರು: ಮೂರು ಜಿಲ್ಲೆಗಳಲ್ಲಿ ಬೆಳೆಯಲಾಗುವ ಭತ್ತಕ್ಕೆ ಕನಿಷ್ಠ 70ರಿಂದ 80 ಟಿಎಂಸಿ ನೀರು ಬೇಕಾಗಲಿದ್ದು, ಕನಿಷ್ಠ 60ಕ್ಕೂ ಹೆಚ್ಚು ಟಿಎಂಸಿ ನೀರು ಸಂಗ್ರಹವಾದಾಗ ಭತ್ತಕ್ಕೆ ನೀರು ಕೊಡಲಾಗುತ್ತದೆ ಎಂದು ಜಲಾಶಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮೊದಲ ಬೆಳೆಗೇ ನೀರಿಲ್ಲ: ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಸುರಿಯುವ ನಿರೀಕ್ಷೆಯಿದ್ದರೂ, ಗಾಳಿಗೆ ಮೋಡಗಳು ಚದುರಿದ್ದರಿಂದ ಮುಂಬೈ, ಗುಜರಾತ್‌ನಲ್ಲಿ ನಿರಂತರ ಮಳೆ ಸುರಿದಿದೆ. ಈ ವರೆಗೆ ಇದ್ದ ಎಲ್ಲ ನಿರೀಕ್ಷೆಗಳು ಹುಸಿಯಾಗಿದ್ದು, ಇದೀಗ ಜುಲೈ 1 ರಿಂದ ಇನ್ನೂ ಎರಡು ಮಳೆ ಸುರಿಯುವ ನಿರೀಕ್ಷೆಯಿದೆ.ಅವೂ ಕೈಕೊಟ್ಟರೆ, ಮೊದಲನೇ ಬೆಳೆಗೆ ನೀರು ಹರಿಸುವುದು ಕಷ್ಟವಾಗಲಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.