ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ ಇಲ್ಲ

ತಿಂಗಳಿಗೊಮ್ಮೆ ಭೇಟಿ ನೀಡಿ ಕುಂದುಕೊರತೆ ಪರಿಶೀಲನೆ: ಡಿಸಿ

Team Udayavani, Jul 20, 2019, 11:28 AM IST

20-July-13

ಹರಪನಹಳ್ಳಿ: ಪಟ್ಟಣದ ಪ್ರವಾಸಿ ಮಂದಿರ ಕಟ್ಟಡ ಹಾಗೂ ಜಾಗವನ್ನು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ಪರಿಶೀಲನೆ ನಡೆಸಿದರು.

ಹರಪನಹಳ್ಳಿ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಅರ್ಜಿ ಸ್ವೀಕಾರದ ಪ್ರತ್ಯೇಕ ಕೌಂಟರ್‌ ತೆರೆಯುವುದಿಲ್ಲ, ಬದಲಿಗೆ ನಾನೇ ತಿಂಗಳಿಗೊಮ್ಮ ಭೇಟಿ ನೀಡಿ ಕುಂದುಕೊರತೆಗಳ ಅರ್ಜಿ ಸ್ವೀಕರಿಸುತ್ತೇನೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ತಿಳಿಸಿದರು.

ಪಟ್ಟಣಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿ ಕಂದಾಯ ಇಲಾಖೆ ಸಿಬ್ಬಂದಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಬಳ್ಳಾರಿ ದೂರವಾಗುವ ಹಿನ್ನೆಲೆಯಲ್ಲಿ ಹರಪನಹಳ್ಳಿ ಮಿನಿವಿಧಾನಸೌಧದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕಾರಕ್ಕೆ ಜಿಲ್ಲಾಧಿಕಾರಿಗಳ ಪ್ರತ್ಯೇಕ ಕೌಂಟರ್‌ ತೆರೆದು ಇಲ್ಲಿಯೇ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡುವುದಾಗಿ ಹಿಂದಿನ ಜಿಲ್ಲಾಧಿಕಾರಿಗಳು ಭರವಸೆ ನೀಡಿರುವುದು ನನ್ನ ಗಮನಕ್ಕೆ ಇಲ್ಲ. ಇಂತಹ ವ್ಯವಸ್ಥೆ ಎಲ್ಲಿಯೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹರಪನಹಳ್ಳಿ ತಾಲೂಕು ದಾವಣಗೆರೆ ಜಿಲ್ಲೆಯಿಂದ ಬೇರ್ಪಟ್ಟು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ಎಲ್ಲ ಇಲಾಖೆಗಳ ಸಿಬ್ಬಂದಿ ವೇತನಕ್ಕೆ ಬಿಡುಗಡೆ ವಿಳಂಬವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ಕಂದಾಯ ಇಲಾಖೆ ಕೋಡ್‌ ಕೊಟ್ಟು ಅನುದಾನ ಕೂಡ ಬಿಡುಗಡೆಯಾಗಿದೆ. ತೋಟಗಾರಿಕೆ ಮತ್ತು ಕೃಷಿ ಇಲಾಖೆ ವೇತನಕ್ಕೆ ಸಂಬಂಧಿಸಿದಂತೆ ಸಿಇಒ ಅವರು ನಾಳೆ ಸಂಜೆವೊಳಗೆ ಸಮಸ್ಯೆ ಪರಿಹಾರ ಮಾಡಲಿದ್ದಾರೆ. ಆರೋಗ್ಯ ಇಲಾಖೆ ಸಂಬಂಧಿಸಿದಂತೆ ಕೆಲವೊಂದು ಪ್ರಕ್ರಿಯೆ ನಡೆಯಬೇಕಾಗಿದೆ ಎಂದರು.

ಬರಗಾಲದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಈಗಾಗಲೇ ಮೇವು ಬ್ಯಾಂಕ್‌ ತೆರೆಯಲಾಗಿದೆ. ಇದಲ್ಲದೇ ಅಗತ್ಯವಿರುವ ವಿವಿಧ ಗ್ರಾಮಗಳಲ್ಲಿ 60 ಖಾಸಗಿ ಬೋರ್‌ವೆಲ್ ಹಾಗೂ 10 ಕಡೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮಳೆಯಾಗಿರುವ ಹಿನ್ನೆಲೆಯಲ್ಲಿ ಬೋರ್‌ವೆಲ್ಗಳು ಅಂತರ್ಜಲ ಹೆಚ್ಚಳವಾಗಿರಬಹುದು. ಹೀಗಾಗಿ ಮುಂದುವರೆಸಬೇಕಾ ಅಥವಾ ಬೇಡವಾ ಎನ್ನುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹರಪನಹಳ್ಳಿ, ಕೊಟ್ಟೂರು, ಹಡಗಲಿ ಮೂರು ತಾಲೂಕುಗಳನ್ನು ಒಳಗೊಂಡ ಕಂದಾಯ ಉಪವಿಭಾಗ ಕಚೇರಿ ಹರಪನಹಳ್ಳಿಯಲ್ಲಿ ಮುಂದುವರೆಸುವ ಕುರಿತು ಇದೀಗ ಆಕ್ಷೇಪಣೆಗೆ ಕಾಲಾವಕಾಶವಿದ್ದು, ಜು. 25ರಂದು ಅಂತಿಮ ಆದೇಶ ಹೊರ ಬೀಳಲಿದೆ ಎಂದು ತಿಳಿಸಿದರು. ನಂತರ ಪಟ್ಟಣದ ಪ್ರವಾಸಿ ಮಂದಿರ ಕಟ್ಟಡ ಹಾಗೂ ಜಾಗವನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಪ್ರಸನ್ನಕುಮಾರ್‌, ತಹಶೀಲ್ದಾರ್‌ ಡಾ| ನಾಗವೇಣಿ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.