ಶಸ್ತ್ರಚಿಕಿತ್ಸೆ ಅನವಶ್ಯಕವಾಗಬಾರದು

ಭೀಕರ ಕಾಯಿಲೆ ಹೆಸರು ಹೇಳಿ ಗರ್ಭಾಶಯ ಶಸ್ತ್ರಚಿಕಿತ್ಸೆಗೆ ರೋಗಿಗಳನ್ನು ಪುಸಲಾಯಿಸಲಾಗುತ್ತದೆ

Team Udayavani, Jul 22, 2019, 9:50 AM IST

hubali-tdy-3

ಧಾರವಾಡ: ಉಪನ್ಯಾಸ ಕಾರ್ಯಕ್ರಮದಲ್ಲಿ ವೈದ್ಯ ಡಾ| ಸಂಜೀವ ಕುಲಕರ್ಣಿ ಮಾತನಾಡಿದರು.

ಧಾರವಾಡ: ಗರ್ಭಾಶಯ ತೆಗೆಯುವ ಶಸ್ತ್ರಚಿಕಿತ್ಸೆ ಹಲವು ಪ್ರಸಂಗಗಳಲ್ಲಿ ಮಹಿಳೆಯರಿಗೆ ವರದಾನವಾಗಿದೆ. ಆದರೆ ಹಲವು ಪ್ರಸಂಗಗಳಲ್ಲಿ ಶಸ್ತ್ರಚಿಕಿತ್ಸೆ ಅನಾವಶ್ಯಕವಾಗಬಾರದು ಎಂದು ಎಸ್‌ಡಿಎಂ ವೈದ್ಯ ಕಾಲೇಜಿನ ಹೆರಿಗೆ ಮತ್ತು ಸ್ತ್ರೀಆರೋಗ್ಯ ವಿಭಾಗದ ಮುಖ್ಯಸ್ಥೆ ಡಾ| ರತ್ನಮಾಲಾ ದೇಸಾಯಿ ಹೇಳಿದರು.

ನಗರದ ಕವಿಸಂನಲ್ಲಿ ವಿಜ್ಞಾನ ಮಂಟಪದ ಆಶ್ರಯದಲ್ಲಿ ‘ಗರ್ಭಾಶಯ ತೆಗೆಯುವ ಶಸ್ತ್ರಚಿಕಿತ್ಸೆ’ ವಿಷಯ ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಪೈಕಿ ತರುಣಿಯರಿಗೆ ವ್ಯಾಪಾರೀಕರಣ ಉದ್ದೇಶದಿಂದ ಇಂತಹ ಶಸ್ತ್ರಚಿಕಿತ್ಸೆ ಮಾಡಿದರೆ ಅದು ವೈದ್ಯಕೀಯ ವೃತ್ತಿಗೆ ಬಗೆದ ಅನ್ಯಾಯ. ಗುಳಿಗೆ, ಇಂಜೆಕ್ಷನ್‌ ಮತ್ತಿತರ ವಿಧಾನಗಳ ಮೂಲಕ ರೋಗ ನಿಯಂತ್ರಿಸಲು ಬರುತ್ತದೆ. ಎಲ್ಲ ಹಾದಿಗಳು ಮುಗಿದು ಶಸ್ತ್ರಚಿಕಿತ್ಸೆಯೊಂದೇ ಜೀವ ಉಳಿಸುವ ಸಾಧನವಾಗಬೇಕು ಎಂಬ ಅರಿವು ವೈದ್ಯರಿಗೆ ಬೇಕು ಎಂದರು.

ವೈದ್ಯ ಡಾ| ಸಂಜೀವ ಕುಲಕರ್ಣಿ ಮಾತನಾಡಿ, ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪೂರ್ವದ ಮತ್ತು ನಂತರದ ವಿಷಯ ಕುರಿತಾಗಿ ರೋಗಿಯ ಸಂಪೂರ್ಣ ವಿವರ ತಿಳಿಸುವ ಟಿಪ್ಪಣಿ, ಅಭಿಪ್ರಾಯ ಲಭ್ಯವಾಗುತ್ತವೆ. ಇವೆಲ್ಲ ವಿವರಗಳನ್ನು ಕಡ್ಡಾಯವಾಗಿ ಅಲ್ಲಿನ ವೈದ್ಯರು ಸರಕಾರಕ್ಕೆ ಸಲ್ಲಿಸುತ್ತಾರೆ. ಆದರೆ ಕರ್ನಾಟಕದಲ್ಲಿ ಅಂತಹ ವ್ಯವಸ್ಥೆಯೇ ಇಲ್ಲ. ಗರ್ಭಾಶಯ ಶಸ್ತ್ರಚಿಕಿತ್ಸೆ ಯಾಕೆ ಮಾಡುತ್ತಾರೆಂಬ ಕಲ್ಪನೆ ರೋಗಿಗಳಿಗೆ ಇರಲ್ಲ, ಇಲ್ಲವೆ ವೈದ್ಯರು ಅದನ್ನು ಮನದಟ್ಟು ಮಾಡಿಕೊಡಲ್ಲ. ಜತೆಗೆ ಭೀಕರ ಕಾಯಿಲೆಗಳ ಹೆಸರು ಹೇಳಿ ಗರ್ಭಾಶಯ ಶಸ್ತ್ರಚಿಕಿತ್ಸೆಗೆ ರೋಗಿಗಳನ್ನು ಪುಸಲಾಯಿಸಲಾಗುತ್ತದೆ ಎಂದರು.

ವೈದ್ಯಕೀಯ ವೃತ್ತಿಯ ವ್ಯಾಪಾರೀಕರಣ ಮತ್ತು ಸರಕಾರ ಮೇಲ್ವಿಚಾರಣೆಯ ಲೋಪದ ಕಾರಣದಿಂದ ಅನವಶ್ಯಕವಾಗಿ ಅದರಲ್ಲಿ ತರುಣಿಯರಿಗೆ ಗರ್ಭಾಶಯ ತೆಗೆಯುವ ಶಸ್ತ್ರಚಿಕಿತ್ಸೆಗಳು ಅಡೆತಡೆ ಇಲ್ಲದೇ ಸಾಗಿದ್ದು, ಈ ಬಗ್ಗೆ ಜನಜಾಗೃತಿ ಮತ್ತು ವೈದ್ಯರಲ್ಲಿ ಆತ್ಮ ವಿಮರ್ಶೆ ಅಗತ್ಯವಿದೆ ಎಂದು ಹೇಳಿದರು.

ಕೃಷ್ಣ ಜೋಶಿ ಸ್ವಾಗತಿಸಿದರು. ಮನೋಜ್‌ ಪಾಟೀಲ ಪ್ರಾಸ್ತಾವಿಕ ಮಾತನಾಡಿ, ನಿರೂಪಿಸಿದರು. ಶಿವಣ್ಣ ಬೆಲ್ಲದ ಇದ್ದರು. ಮಹಾಂತೇಶ ನರೇಗಲ್ಲ ವಂದಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.