ಅತಿ ಲಾಭದ ಆಸೆಗೆ ಮರುಳಾಗಬೇಡಿ


Team Udayavani, Jul 24, 2019, 3:00 AM IST

ati-labha

ಮೈಸೂರು: ಗ್ರಾಹಕರು ಹಕ್ಕುಗಳ ಜೊತೆಗೆ ತಮ್ಮ ಜವಾಬ್ದಾರಿಯ ಬಗ್ಗೆಯೂ ತಿಳಿವಳಿಕೆ ಹೊಂದಿರಬೇಕು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಪಿ. ಶಿವಣ್ಣ ಹೇಳಿದರು. ನಗರದ ದಿ ಇನ್‌ಸ್ಟಿಟ್ಯೂಟ್‌ ಆಫ್ ಎಂಜಿನಿಯರ್ ಸಭಾಂಗಣದಲ್ಲಿ ನಡೆದ ಮೈಸೂರು ಜಿಲ್ಲಾ ಮಟ್ಟದ ಶಾಲಾ ಗ್ರಾಹಕರ ಕ್ಲಬ್‌ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವಂಚನೆ: ಗ್ರಾಹಕರ ಹಕ್ಕುಗಳ ಸಂರಕ್ಷಣೆ ಸಂವಿಧಾನದಲ್ಲೇ ಅಡಕವಾಗಿದೆ. ಇತ್ತೀಚೆಗೆ ಐಎಂಎ ಗ್ರಾಹಕರಿಂದ ದುಡ್ಡು ಪಡೆದು ವಂಚನೆ ಮಾಡಿತ್ತು. ಅತಿ ಲಾಭದ ಆಸೆ ತೋರಿಸಿ ಸಾರ್ವಜನಿಕರನ್ನು ಶೋಷಣೆ ಮಾಡಲಾಗುತ್ತಿದೆ. ಇದೆಲ್ಲದ್ದಕ್ಕೂ ಸಂವಿಧಾನದಲ್ಲಿ ಕಾಯಿದೆ ರೂಪಿಸಲಾಗಿದೆ. ಅಲ್ಲದೆ, ಸರಕಾರ ಶಾಲಾ ಹಂತದಲ್ಲೇ ಗ್ರಾಹಕರ ಕ್ಲಬ್‌ ರಚಿಸಿ, ಅರಿವು ಮೂಡಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಪಠ್ಯಪುಸ್ತಕದಲ್ಲಿ ಗ್ರಾಹಕರ ಜಾಗೃತಿ ವಿಷಯವನ್ನು ಸೇರಿಸುವ ಚಿಂತನೆ ಸರಕಾರದ ಮುಂದಿದೆ ಎಂದು ಹೇಳಿದರು.

ಕಾಯಿದೆ: ದಿನನಿತ್ಯ ಸಾಕಷ್ಟು ಅಗತ್ಯ ವಸ್ತುಗಳನ್ನು ಗ್ರಾಹಕರು ಖರೀದಿ ಮಾಡಬೇಕಿರುತ್ತದೆ. ಅಲ್ಲದೆ, ಭವಿಷ್ಯದ ಹಿತದೃಷ್ಟಿಯಿಂದ ಇತರ ಸಂಘ ಸಂಸ್ಥೆಗಳಲ್ಲಿ ಒಂದಷ್ಟು ಹಣವನ್ನು ವಿನಿಯೋಗಿಸುತ್ತಾರೆ. ಆದರೆ, ಅಲ್ಲಿ ಮೋಸ, ವಂಚನೆಗೆ ಒಳಗಾಗುತ್ತಾರೆ. ಈ ನಿಟ್ಟಿನಲ್ಲಿ 1986ರಲ್ಲಿ ಗ್ರಾಹಕರ ಸಂರಕ್ಷಣೆ ಕಾಯಿದೆ ಬಂತು. ಆದರೂ ಇಂದಿಗೂ ಸಾವಿರಾರು ಮಂದಿ ಗ್ರಾಹಕರು ವಂಚನೆ, ಶೋಷಣೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಗ್ರಾಹಕರ ಹಕ್ಕುಗಳ ರಕ್ಷಣೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಬೇಕಿದೆ. ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

7 ವರ್ಷ ಶಿಕ್ಷೆ: ಗ್ರಾಹಕರನ್ನು ಯಾರಾದರೂ ವಂಚಿಸಿದರೆ ಅವರಿಗೆ ಗ್ರಾಹಕರ ಕೋರ್ಟ್‌ನಿಂದ 7 ವರ್ಷ ಶಿಕ್ಷೆ ವಿಧಿಸಲಾಗುತ್ತದೆ. ಅಲ್ಲದೆ, ಜಿಲ್ಲಾ ಗ್ರಾಹಕರ ಸಂರಕ್ಷಣಾ ಪರಿಷತ್ತು ಗ್ರಾಹಕರಿಗೆ ಸುಲಭ ಮತ್ತು ತ್ವರಿತವಾಗಿ ಪರಿಹಾರ ಒದಗಿಸುತ್ತದೆ. ವಂಚನೆಗೊಳಗಾದ ಯಾರುಬೇಕಾದರೂ ಇಲ್ಲಿ ದೂರು ನೀಡಬಹುದು. ಅಲ್ಲದೆ, ಶಾಲಾ, ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಿಗೆ ಈ ಬಗ್ಗೆ ಅರಿವು ಮೂಡಿಸಲು ಗ್ರಾಹಕರ ಕ್ಲಬ್‌ ಸ್ಥಾಪನೆ ಮಾಡಲಾಗಿದೆ. ಅನ್ಯಾಯ, ಶೋಷಣೆ ವಿರುದ್ಧ ಶಾಲಾಹಂತದಲ್ಲೇ ತಿಳಿವಳಿಕೆ ನೀಡಿದರೆ ಭವಿಷ್ಯದಲ್ಲಿ ಮೋಸ ಹೋಗುವುದನ್ನು ತಡೆಯಬಹುದು ಎಂಬುದು ಇದರ ಉದ್ದೇಶ.

ಹಾಗಾಗಿ ಸಾಮಾನ್ಯ ಶಿಕ್ಷಣದ ಜತೆಗೆ ಗ್ರಾಹಕರ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದರು. ದಿ ಇನ್‌ಸ್ಟಿಟ್ಯೂಟ್‌ ಆಫ್ ಎಂಜಿನಿಯರ್ ಅಧ್ಯಕ್ಷ ಡಾ.ಸುರೇಶ್‌, ಜೆಎಸ್‌ಎಸ್‌ ಕಾನೂನು ಕಾಲೇಜು ಡಾ.ನಟರಾಜ್‌, ಮಾಹಿತಿ ಹಕ್ಕು ಕಾರ್ಯಕರ್ತ ಜಿ.ಆರ್‌.ವಿದ್ಯಾರಣ್ಯ, ಅಖೀಲ ಭಾರತೀಯ ಗ್ರಾಹಕ ಪಂಚಾಯಿತಿ ಅಧ್ಯಕ್ಷ ಎಚ್‌.ಆರ್‌. ಸುಂದರೇಶನ್‌ ಇದ್ದರು.

ಪ್ರತಿ ಶಾಲೆಯಲ್ಲೂ ಗ್ರಾಹಕರ ಕ್ಲಬ್‌: ಸರಕಾರ ಎಲ್ಲಾ ಶಾಲೆಗಳಲ್ಲಿ ಗ್ರಾಹಕರ ಕ್ಲಬ್‌ ಇರಬೇಕೆಂದು ಆದೇಶ ಮಾಡಿದೆ. ಇದಕ್ಕಾಗಿ ವರ್ಷದಲ್ಲಿ 20 ಶಾಲೆಗಳಿಗೆ 10 ಸಾವಿರ ಸಹಾಯಧನ ನೀಡುತ್ತಿದೆ. ಆದರೂ ಶೇ.50ರಷ್ಟು ಮಾತ್ರ ಯಶಸ್ಸು ಸಾಧಿಸಲಾಗಿದೆ. ನಗರ, ತಾಲೂಕು, ಹೋಬಳಿಯಂತೆ ಗ್ರಾಮೀಣ ಭಾಗಗಳಲ್ಲೂ ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಬೇಕಿದೆ. ಪ್ರಬಂಧ, ಚರ್ಚಾಸ್ಪರ್ಧೆ, ಗುಂಪು ಚರ್ಚೆ ಮಾಡಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಪಿ. ಶಿವಣ್ಣ ಹೇಳಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.