ಅತನೂರ ಗ್ರಾಮದಲ್ಲಿ ಜಲಕ್ಷಾಮ-ನಿಲ್ಲದ ಜನರ ಪರದಾಟ


Team Udayavani, Jul 25, 2019, 9:56 AM IST

25-JUly-2

ಅಫಜಲಪುರ: ಅತನೂರ ಗ್ರಾಮಸ್ಥರೊಬ್ಬರು ಪಿಕ್‌ಅಪ್‌ನಲ್ಲಿ ನೀರು ಹೊತ್ತು ತರುತ್ತಿರುವುದು.

ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ:
ಬೇಸಿಗೆ ಕಳೆದು ಮಳೆಗಾಲ ಶುರುವಾಗಿ ಎರಡು ತಿಂಗಳವಾದರೂ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಯುವ ಲಕ್ಷಣ ಕಾಣುತ್ತಿಲ್ಲ. ಮಳೆ ಕೊರತೆಯಿಂದಾಗಿ ತಾಲೂಕಿನ ಅತನೂರ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆಯಿಂದ ಮುಕ್ತಿ ಇಲ್ಲದಂತಾಗಿದೆ.

ಅತನೂರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ನಿತ್ಯ ಜನರು ಪರದಾಡುತ್ತಿದ್ದಾರೆ. ಗ್ರಾಮದಲ್ಲಿರುವ ಬಹುತೇಕ ಜಲ ಮೂಲಗಳಲ್ಲಿ ಅಂತರ್ಜಲ ಕೊರತೆಯಿಂದಾಗಿ ನೀರು ಬತ್ತಿ ಹೋಗಿದ್ದರಿಂದ ಈಗಲೂ ಮೈಲುಗಟ್ಟಲೇ ಅಲೆದಾಡಿ ನೀರು ಹೊತ್ತು ತರಬೇಕಾದ ಸಂದರ್ಭ ಎದುರಾಗಿದೆ. ಅದರಲ್ಲೂ ಎತ್ತಿನ ಬಂಡಿ ಮತ್ತು ಪಿಕ್‌ಅಪ್‌ಗ್ಳನ್ನು ಬಳಸಿ ಜನ ನೀರು ತರುತ್ತಿದ್ದಾರೆ. ಅನುಕೂಲಸ್ಥರು ವಾಹನ, ಎತ್ತಿನ ಬಂಡಿ ಬಳಸಿ ನೀರು ತರುತ್ತಾರೆ. ಆದರೆ ಅನುಕೂಲವಿಲ್ಲದವರು, ನಿರ್ಗತಿಕರು, ವೃದ್ಧರು ಎಲ್ಲಿಂದ ನೀರು ತರಬೇಕು?.

ನೀರಿಗಾಗಿ ಕಾದು ಕುಳಿತ ಮಹಿಳೆ: ಅತನೂರ ಗ್ರಾಮದಲ್ಲಿ ಸದ್ಯ ನೀರಿನ ಸಮಸ್ಯೆ ಕಾಡುತ್ತಿದ್ದು, ನಲ್ಲಿಗಳು, ಕೊಳವೆ ಬಾವಿಗಳ ಬಳಿ ನೀರಿಗಾಗಿ ನಿತ್ಯ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ. ಅತನೂರ ಗ್ರಾಮದಲ್ಲಿ 15 ಕೊಳವೆ ಬಾವಿಗಳು, 5 ತೆರೆದ ಬಾವಿಗಳಿವೆ. ಎಲ್ಲದರಲ್ಲೂ ನೀರಿನ ಪ್ರಮಾಣ ಕ್ಷೀಣವಾಗಿದೆ. ಅಲ್ಲದೆ ಗ್ರಾಮದ ಸುತ್ತಲೂ ಸಹ ಯಾವ ಖಾಸಗಿಯವರ ಹೊಲ ಗದ್ದೆಗಳಲ್ಲೂ ನೀರಿನ ಮೂಲಗಳು ಇಲ್ಲ. ಹೀಗಾಗಿ ಗ್ರಾಮದಿಂದ ಐದಾರು ಕಿ.ಮೀ. ಅಲೇದಾಡಿ ನೀರು ಹೊತ್ತು ತರಬೇಕಾಗಿದೆ.

8 ದಿನಕ್ಕೊಮ್ಮೆ ಹಳ್ಳದ ನೀರು ಪೂರೈಕೆ: ಸದ್ಯ ಗ್ರಾಮದಲ್ಲಿ 8 ದಿನಕ್ಕೊಮ್ಮೆ ಹಳ್ಳದ ನೀರನ್ನು ಓವರ್‌ ಹೆಡ್‌ ಟ್ಯಾಂಕ್‌ನಲ್ಲಿ ಸಂಗ್ರಹಿಸಿ, ನಂತರ ಗ್ರಾಮಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಅತನೂರ ಗ್ರಾಮದಲ್ಲಿ ನೀರಿನ ಸಮಸ್ಯೆ ಬಹಳಷ್ಟಿದೆ. ಇನ್ನಾದರೂ ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಸಂಬಂಧಪಟ್ಟವರು ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಾರೆ.

ಅತನೂರ ಗ್ರಾಪಂ ವ್ಯಾಪ್ತಿಯ ಭೋಗನಳ್ಳಿಯಲ್ಲಿ ಖಾಸಗಿಯವರಿಂದ ನೀರು ಖರೀದಿ ಮಾಡಲಾಗಿದ್ದು, ಅಲ್ಲಿ ನೀರಿನ ಅಷ್ಟೊಂದು ಸಮಸ್ಯೆ ಇಲ್ಲ. ಅತನೂರ ಗ್ರಾಮದಲ್ಲಿ ನೀರಿನ ಸಮಸ್ಯೆ ಬಹಳಷ್ಟಿದೆ. ಗ್ರಾಮದ ಸುತ್ತಮುತ್ತ ನೀರು ಖರೀದಿ ಮಾಡಲು ಅಂತರ್ಜಲ ಇಲ್ಲದಂತಾಗಿದೆ.
ಚಿದಾನಂದ ಅಲೇಗಾಂವ, ಪಿಡಿಒ

ಗ್ರಾಮದಲ್ಲಿ ನೀರಿನ ಸಮಸ್ಯೆ ಇದೆ. ಅಂತರ್ಜಲ ಮಟ್ಟ ಕುಸಿದು ಸಾಕಷ್ಟು ಸಮಸ್ಯೆಯಾಗುತ್ತಿದೆ. ಹೀಗಾಗಿ ಸದ್ಯ 8 ದಿನಕ್ಕೊಮ್ಮೆ ಹಳ್ಳದ ನೀರನ್ನು ಓವರ್‌ ಹೆಡ್‌ ಟ್ಯಾಂಕ್‌ಗೆ ಏರಿಸಿ ಸರಬರಾಜು ಮಾಡಲಾಗುತ್ತಿದೆ.
ಕಲ್ಯಾಣಿ ದೇವಣಗಾಂವ ಅತನೂರ ಗ್ರಾಪಂ ಅಧ್ಯಕ್ಷ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.