ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು

ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನರೇಂದ್ರ ಅಭಿಮತ

Team Udayavani, Jul 26, 2019, 10:39 AM IST

cn-tdy-2

ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ನರೇಂದ್ರ ಭೂಮಿಪೂಜೆ ನೆರವೇರಿಸಿದರು.

ಹನೂರು: ತಾಲೂಕಿನ ಗಂಗನದೊಡ್ಡಿ ಗ್ರಾಮಕ್ಕೆ ಆದರ್ಶ ಗ್ರಾಮ ಯೋಜನೆಯಡಿ 50 ಲಕ್ಷ, ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ 40 ಲಕ್ಷ ಮತ್ತು ಗ್ರಾಮದ ಸಂಪರ್ಕ ರಸ್ತೆಗೆ 30 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು ಒಟ್ಟು 1.2 ಕೋಟಿ ಅನುದಾನವನ್ನು ಗಂಗನದೊಡ್ಡಿ ಗ್ರಾಮಕ್ಕೆ ನೀಡಲಾಗಿದೆ ಎಂದು ಶಾಸಕ ಆರ್‌.ನರೇಂದ್ರ ಹೇಳಿದರು.

ತಾಲೂಕಿನ ಗಂಗನದೊಡ್ಡಿ ಗ್ರಾಮದಲ್ಲಿ 40 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

1.2 ಕೋಟಿ ರೂ. ಅನುದಾನ: ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು ಕುಗ್ರಾಮವಾದ ಗಂಗನದೊಡ್ಡಿ ಗ್ರಾಮಕ್ಕೆ 1.2 ಕೋಟಿ ರೂ. ಅನುದಾನ ನೀಡಲಾಗಿದೆ. ಕಳೆದ 6 ವರ್ಷಗಳ ಅವಧಿಯಲ್ಲಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕ್ಷೇತ್ರ ವ್ಯಾಪ್ತಿಯ ಪ.ಜಾತಿ ಮತ್ತು ಪಂಗಡದ ಸಮುದಾಯದವರು ವಾಸಿಸುವ ಶೇ.90ರಷ್ಟು ಬಡಾವಣೆಗಳಲ್ಲಿ ಕಾಂಕ್ರೀಕ್‌ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡುವ ಮೂಲಕ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದರು.

ಈ ಹಿಂದೆ ಯಾವುದೇ ಒಂದು ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿದ್ದರೆ ಇದು ಎಸ್‌.ಸಿ ಅಥವಾ ಎಸ್‌.ಟಿ ಸಮುದಾಯದವರು ವಾಸ ಮಾಡುವ ಬಡಾವಣೆಯೇ ಎಂದು ಪ್ರಶ್ನಿಸುವಂತಹ ಪರಿಸ್ಥಿತಿಯಿತ್ತು. ಆದರೆ ಇಂದು ಸುಸಜ್ಜಿತ ರಸ್ತೆ ಮತ್ತು ಚರಂಡಿ ಕಂಡರೆ ಇದು ಎಸ್‌.ಸಿ ಅಥವಾ ಎಸ್‌.ಟಿ ಜನಾಂಗದವರು ವಾಸಿಸುವ ಬಡಾವಣೆಯೇ ಎಂದು ಪ್ರಶ್ನಿಸುವಂತಾಗಿದೆ ಎಂದು ತಿಳಿಸಿದರು.

ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ: ಓರ್ವ ಜನಪ್ರತಿನಿಧಿಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ತರುವುದು ನನ್ನ ಕರ್ತವ್ಯವಾಗಿರುತ್ತದೆ. ಆದರೆ ಇಲಾಖೆಗಳಿಗೆ ತೆರಳಿ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳನ್ನು ಸಂಪರ್ಕಿಸಿ ತಂದಂತಹ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾದ ಜವಾಬ್ದಾರಿ ಆಯಾ ಗ್ರಾಮಗಳ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಜವಾಬ್ದಾರಿಯಾಗಿರುತ್ತದೆ ಎಂದರು.

ಲೋಪದೋಷ ಕಂಡರೆ ತಿಳಿಸಿ:ಆದ್ದರಿಂದ ಕಾಮ ಗಾರಿಗಳು ಜರುಗುವ ವೇಳೆ ಯಾವುದೇ ಲೋಪ ದೋಷಗಳು ಕಂಡುಬಂದಲ್ಲಿ ಕೂಡಲೇ ತಮ್ಮ ಗಮನಕ್ಕೆ ತರಬೇಕು ಹಾಗೂ ಸಂಬಂಧಪಟ್ಟ ಗುತ್ತಿಗೆದಾರರೂ ಸಹ ಸಮರ್ಪಕವಾಗಿ ಕಾಮಗಾರಿ ನಿರ್ವಹಿಸಿ ಉತ್ತಮ ಗುಣಮಟ್ಟದ ಸಾಮಗ್ರಿಗಳನ್ನು ಬಳಕೆ ಮಾಡಬೇಕು ಮತ್ತು ಕ್ಯೂರಿಂಗ್‌ ಸಹ ಸಮರ್ಪಕವಾಗಿ ಜರುಗಬೇಕು. ಒಂದೊಮ್ಮೆ ಲೋಪದೋಷಗಳು ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.

ಭೂಮಿಪೂಜೆ: ಇದೇ ವೇಳೆ ಗೋಪಿಶೆಟ್ಟಿಯೂರು ಗ್ರಾಮದಲ್ಲಿ 25 ಲಕ್ಷ ವೆಚ್ಚದ ಕಾಮಗಾರಿಗೆ, ನಲ್ಲೂರು ಗ್ರಾಮದಲ್ಲಿ 16 ಲಕ್ಷ ವೆಚ್ಚದ ಕಾಮಗಾರಿಗೆ, ಹೂಗ್ಯಂ ಗ್ರಾಮದಲ್ಲಿ 40 ಲಕ್ಷ ವೆಚ್ಚದ ಕಾಮಗಾರಿಗೆ ಹಾಗೂ ಚಿನ್ನಾರಿ ದೊಡ್ಡಿ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಮೃತರ ಕುಟುಂಬಸ್ಥರಿಗೆ ಸಾಂತ್ವನ: ಅನಾರೋಗ್ಯದಿಂದ ಗ್ರಾಪಂ ಸದಸ್ಯ ಕೂಡ್ಲೂರು ಸಿದ್ಧರಾಜು ಅವರ ತಂದೆ ಮೃತ ಪಟ್ಟಿದ್ದ ಹಿನ್ನೆಲೆ ಅವರ ಮನೆಗೆ ಭೇಟಿ ನೀಡಿದ ಶಾಸಕ ನರೇಂದ್ರ ಮೃತರ ಭಾವಚಿತ್ರಕ್ಕೆ ಪುಷ್ಪಮಾಲಿಕೆ ಹಾಕಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಜಿಪಂ ಅಧ್ಯಕ್ಷೆ ಶಿವಮ್ಮ ಕೃಷ್ಣ, ಸದಸ್ಯ ಬಸವರಾಜು, ತಾಪಂ ಅಧ್ಯಕ್ಷ ರಾಜೇಂದ್ರ, ಸದಸ್ಯರಾದ ನಟರಾಜು, ಹೂಗ್ಯಂ ಗ್ರಾಪಂ ಅಧ್ಯಕ್ಷೆ ರಾಜೇಶ್ವರಿ ಮಾದರಾಜು, ರಾಮಾಪುರ ಅಧ್ಯಕ್ಷೆ ನಲ್ಲಮ್ಮ, ಮುಖಂಡರಾದ ಪಾಳ್ಯ ಕೃಷ್ಣ, ಗುಂಡಾಪುರ ಜಯರಾಜು, ರಾಮಾಪುರ ನಾಗ ರಾಜು, ಗುತ್ತಿಗೆದಾರರಾದ ಅಜ್ಜೀಪುರ ನಾಗರಾಜು, ಕೊಳ್ಳೇಗಾಲ ಲೋಕೇಶ್‌, ಸತೀಶ್‌ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.