ಇಂಗ್ಲಿಷ್‌ನಂತೆ ಹಿಂದಿ ಹೇರಿಕೆಯೂ ಅಪಾಯಕಾರಿ

| ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ | ಸರಕಾರದಿಂದ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ವಿರೋಧ

Team Udayavani, Jul 29, 2019, 8:15 AM IST

hubali-tdy-2

ಹುಬ್ಬಳ್ಳಿ: ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಸಾಪ ಕೇಂದ್ರ ಸಮಿತಿ ಅಧ್ಯಕ್ಷ ಡಾ| ಮನು ಬಳಿಗಾರ ಉದ್ಘಾಟಿಸಿದರು.

ಹುಬ್ಬಳ್ಳಿ: ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಷಾ ವೈಭವ ಬಗ್ಗೆ ಹೆಮ್ಮೆಯ ಮಾತನಾಡುವ ಬದಲು, ಭಾಷಾ ಆತಂಕದ ಬಗ್ಗೆ ಚರ್ಚೆ ಮಾಡುವ ದುರ್ದೈವದ ಸ್ಥಿತಿ ನಿರ್ಮಾಣಗೊಂಡಿದೆ. ಇಂಗ್ಲಿಷ್‌ನಂತೆ ಹಿಂದಿ ಹೇರಿಕೆಯೂ ಅಷ್ಟೇ ಅಪಾಯಕಾರಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಅಧ್ಯಕ್ಷ ಡಾ| ಮನು ಬಳಿಗಾರ ಹೇಳಿದರು.

ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಟ್ಟದಲ್ಲಿ ಎರಡು ದಿನ ಕಾಲ ಆಯೋಜಿಸಿರುವ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯಲ್ಲಿ ಹಿಂದಿಗೆ ಅಗ್ರಸ್ಥಾನ ನೀಡಿಕೆ ಯತ್ನಗಳಿದ್ದವು. ನಮ್ಮೆಲ್ಲರ ಹೋರಾಟದಿಂದಾಗಿ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳು ಸೇರ್ಪಡೆಗೊಂಡಿವೆ ಎಂದರು.

ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ನಮ್ಮ ಸ್ಪಷ್ಟ ವಿರೋಧವಿದೆ. ಇಂಗ್ಲಿಷ್‌ ಅನ್ನು ಒಂದು ಭಾಷೆಯಾಗಿ ಕಲಿಸಿ ಎಂಬುದು ನಮ್ಮ ಒತ್ತಾಯ. ಕನ್ನಡ ಭಾಷೆಗೆ ತನ್ನದೇಯಾದ ಇತಿಹಾಸ, ವೈಭವ ಇದೆ. 1ರಿಂದ 10ನೇ ಶತಮಾನದವರೆಗೂ ದಕ್ಷಿಣ ಭಾರತದ ಎಲ್ಲ ಭಾಷೆಗಳಿಗೆ ಕನ್ನಡ ಲಿಪಿಯೇ ಆಧಾರವಾಗಿತ್ತು. ಸಂಸ್ಕೃತ ಸಹ ದಕ್ಷಿಣ ಭಾರತಕ್ಕೆ ಬಂದಾಗ ಕನ್ನಡದ ಲಿಪಿಯನ್ನೇ ಆಧರಿಸಿತ್ತು. ಪುರಾತನ ಗ್ರೀಕ್‌ ನಾಟಕಗಳಲ್ಲಿ ಕನ್ನಡ ಶಬ್ದಗಳ ಉಲ್ಲೇಖವಿದೆ. 10ನೇ ಶತಮಾನದ ನಂತರದಲ್ಲಿ ಕನ್ನಡದ ಹಿಂದುಳಿವಿಕೆ ಆರಂಭವಾಯಿತಲ್ಲದೆ, ಇದೀಗ ಆಂಗ್ಲಮೋಹದ ಆರ್ಭಟಕ್ಕೆ ಕನ್ನಡ ನಲುಗುವಂತಾಗಿದೆ ಎಂದು ವಿಷಾದಿಸಿದರು.

ಕಸಾಪದಿಂದ 14 ಜಿಲ್ಲೆಗಳಲ್ಲಿ ಶಾಸ್ತ್ರೀಯ ಸ್ಥಾನಮಾನ ಕುರಿತು ಕಮ್ಮಟ ಕೈಗೊಳ್ಳಲಾಗಿದ್ದು, ಪರಿಷತ್ತು ಒತ್ತಾಯದಿಂದಾಗಿ ರಾಜ್ಯದಲ್ಲಿ ಹೊರನಾಡ ಕನ್ನಡಿಗರ ಮಕ್ಕಳಿಗೆ ನೌಕರಿಯಲ್ಲಿ ಶೇ.5 ಮೀಸಲು ಕಲ್ಪಿಸಲಾಗಿದೆ. ರಾಜ್ಯ ಸರಕಾರ ಕೆಲ ದಿನಗಳ ಹಿಂದೆಯಷ್ಟೇ 5 ಕೋಟಿ ರೂ. ಡುಗಡೆ ಮಾಡಿದೆ. ಯಾವುದೇ ಪ್ರದೇಶದಲ್ಲಿ 5 ಗುಂಟೆಯಷ್ಟು ಜಾಗ ದಾನವಾಗಿ ನೀಡಿದಲ್ಲಿ ಅಂದಾಜು 25 ಲಕ್ಷ ರೂ.ವೆಚ್ಚದಲ್ಲಿ ಸಾಹಿತ್ಯ ಭವನ ನಿರ್ಮಾಣಕ್ಕೆ ಪರಿಷತ್ತು ಹಣ ನೀಡಲಿದೆ ಎಂದರು.

ಡಾ| ಬಸವರಾಜ ಸಾದರ ಅವರ ಸ್ವಗ್ರಾಮ ಹುಲ್ಲಂಬಿಯಲ್ಲಿ 5 ಗುಂಟೆ ಜಾಗ ನೀಡಲು ಸಿದ್ಧ ಎಂದು ಗ್ರಾಮದ ಮುಖಂಡರು ಹೇಳಿದ್ದರಿಂದ ಆದಷ್ಟು ಶೀಘ್ರ 10 ಲಕ್ಷ ರೂ. ಮಂಜೂರು ಮಾಡುವುದಾಗಿ ಡಾ| ಮನು ಬಳಿಗಾರ ಹೇಳಿದರು.

ಸಾಹಿತಿ ಡಾ| ಜಿ.ಎಂ. ಹೆಗಡೆ ಮಾತನಾಡಿ, ಬಹುತೇಕ ವಾಹಿನಿಗಳು ಸಾಹಿತ್ಯದ ಕಾರ್ಯಕ್ರಮಗಳನ್ನು ಬಿತ್ತರಿಸದೆ ಯುವಕರ ಮನಸ್ಸು ಕಲುಷಿತಗೊಳಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ನೀಡುತ್ತಿವೆ. 1,000 ಆಂಗ್ಲ ಶಾಲೆಗಳ ಆರಂಭ ಕನ್ನಡಕ್ಕೆ ಕುತ್ತು ತರಲಿದೆ. ಹೊಸ ಸರಕಾರ ಕನ್ನಡವನ್ನು ಉಳಿಸುವ ಕಾರ್ಯ ಮಾಡಲಿ ಎಂದು ಒತ್ತಾಯಿಸಿದರು.

ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಹಿರಿಯ ಸಾಹಿತಿ ಡಾ| ಗುರುಲಿಂಗ ಕಾಪಸೆ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಡಿ.ಎಂ. ಹಿರೇಮಠ, ಜಿಲ್ಲೆಯ ಎಂಟು ತಾಲೂಕುಗಳ ಕಸಾಪ ಅಧ್ಯಕ್ಷರು ಇನ್ನಿತರರಿದ್ದರು. ಪ್ರೊ| ಕೆ.ಎಸ್‌. ಕೌಜಲಗಿ ನಿರೂಪಿಸಿದರು. ವಿವಿದ ಕೃತಿಗಳ ಲೋಕಾರ್ಪಣೆ ನಡೆಯಿತು. ಇದಕ್ಕೂ ಮೊದಲು ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಅವರು ಪರಿಷತ್ತು ಧ್ವಜಾರೋಹಣ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.