ನಾಗೋಡಿ ಘಾಟಿ ; ಹಲವೆಡೆ ಕುಸಿತ; ಸಂಚಾರ ಸಂಕಷ್ಟ


Team Udayavani, Jul 29, 2019, 1:03 PM IST

nagodi

ಕುಂದಾಪುರ: ಹುಲಿಕಲ್‌, ಆಗುಂಬೆ ಘಾಟಿ ಬಿಟ್ಟರೆ ಕರಾವಳಿಯಿಂದ ಮಲೆನಾಡು ಮತ್ತು ಅದರಾಚೆಗೆ ಕುಂದಾಪುರ – ಕೊಲ್ಲೂರು ಮಾರ್ಗವಾಗಿ ಸಂಪರ್ಕಿಸುವ ನಾಗೋಡಿ ಘಾಟಿ ಭಾರೀ ಮಳೆಗೆ ಅಲ್ಲಲ್ಲಿ ಕುಸಿದಿದೆ. ಕುಸಿತ ಮುಂದುವರಿಯುತ್ತಲೇ ಇದ್ದು, ಮಳೆ ಹೆಚ್ಚಾದಂತೆ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ.

ಮಳೆಗಾಲಕ್ಕೂ ಮೊದಲೇ ಈ ಘಾಟಿ ರಸ್ತೆಯ ಹಲವೆಡೆ ಹೊಂಡ – ಗುಂಡಿಗಳಾಗಿದ್ದವು. ಈಗ ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವು ದರಿಂದ ಘಾಟಿ ರಸ್ತೆ ಜರ್ಝರಿತಗೊಂಡಿದೆ. ಅಲ್ಲಲ್ಲಿ ಗುಡ್ಡ ಕುಸಿದು ರಸ್ತೆಗೆ ಬೀಳುತ್ತಿದೆ. ತಿರುವುಗಳಲ್ಲಿ ರಸ್ತೆಗೆ ಬಾಗಿರುವ ಮರಗಳ ಗೆಲ್ಲು, ಪೊದೆಗಳನ್ನು ಮಳೆಗಾಲಕ್ಕೆ ಮುನ್ನ ತೆರವು ಮಾಡದ್ದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ರಾತ್ರಿ ವೇಳೆ ವಾಹನ ಸಂಚಾರಕ್ಕೆ ಇದು ದೊಡ್ಡ ಅಡಚಣೆ, ಅಪಘಾತ ಸಂಭವಿಸುವ ಸಾಧ್ಯತೆಗಳೂ ಇವೆ.

4 ವರ್ಷಗಳ ಹಿಂದೆ 10 ಕೋ.ರೂ. ವೆಚ್ಚದಲ್ಲಿ ಈ ರಸ್ತೆಯ ಸುಮಾರು 7 ಕಿ.ಮೀ. ದೂರವನ್ನಷ್ಟೇ ಕಾಂಕ್ರೀಟೀಕರಣಗೊಳಿಸಲಾ ಗಿತ್ತು. ಘಾಟಿರಸ್ತೆ ಕೊಲ್ಲೂರು ಸಮೀಪದಿಂದ ಒಟ್ಟು 14 ಕಿ.ಮೀ. ಇದೆ. ದುರಸ್ತಿ ಕಾಣದೇ ಇರುವ ಈ ರಸ್ತೆಯ ಅಭಿವೃದ್ಧಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಬೈಂದೂರು – ಹೊನ್ನಾಳಿ ರಾಜ್ಯ ಹೆದ್ದಾರಿಯನ್ನು ಮುಂದಿನ 10 ವರ್ಷ ಅವಧಿಗೆ ಅಭಿವೃದ್ಧಿ ಪಡಿಸಲು ರಾ. ಹೆದ್ದಾರಿ ಇಲಾಖೆಗೆ ವರ್ಗಾಯಿಸಲಾಗಿದ್ದು, ರಸ್ತೆ, ಘಾಟಿ ಎಲ್ಲದರ ನಿರ್ವಹಣೆ ಹೊಣೆ ವಹಿಸ ಲಾಗಿದೆ. ಆದರೆ ಈವರೆಗೆ ಯಾವುದೇ ಕಾಮಗಾರಿ ಮಾಡಿಲ್ಲ ಎನ್ನುವ ಆರೋಪ ಕೇಳಿ ಬಂದಿವೆ.

ಪ್ರಮುಖ ಘಾಟಿ
ಈಗ ಈ ಘಾಟಿಯಲ್ಲಿ ಹಿಂದಿಗಿಂತ ವಾಹನಗಳ ಒತ್ತಡ ಹೆಚ್ಚಿದೆ. ಗುಡ್ಡ ಕುಸಿತದಿಂದಾಗಿ ಈ ಮಾರ್ಗದಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತಾಗಿದೆ. ಇತಿಹಾಸ ಪ್ರಸಿದ್ಧ ದೇವಸ್ಥಾನಗಳಾದ ಕೊಲ್ಲೂರಿನಿಂದ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದು. ಶಿವಮೊಗ್ಗದಿಂದ ಕೊಲ್ಲೂರಿಗೂ ಹತ್ತಿರದ ಮಾರ್ಗ. ಹೊನ್ನಾಳಿ – ಬೈಂದೂರು ರಾಜ್ಯ ಹೆದ್ದಾರಿ ಕೂಡ ಇದೇ ಘಾಟಿ ಮೂಲಕ ಹಾದು ಹೋಗುತ್ತದೆ. ಇದಲ್ಲದೆ ಕೊಲ್ಲೂರಿನಿಂದ ಶಿವಮೊಗ್ಗ ಮೂಲಕವಾಗಿ ಬೆಂಗಳೂರಿಗೂ ಈ ಮಾರ್ಗವಾಗಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಕುಂದಾಪುರದಿಂದ ನಿತ್ಯ ಸಾಗರಕ್ಕೆ ಇದೇ ಘಾಟಿ ಮೂಲಕ ಬಸ್‌ಗಳು ಸಂಚರಿಸುತ್ತವೆ.

ಸಂಸದರ ಗಮನಕ್ಕೆ ತಂದು ದುರಸ್ತಿ
ಘಾಟಿ ರಸ್ತೆ ಸಾಗರ ಮತ್ತು ಬೈಂದೂರು ಎರಡು ವಿಧಾನಸಭಾ ಕ್ಷೇತ್ರಗಳ ಮಧ್ಯೆ ಹಾದು ಹೋಗುತ್ತಿದ್ದು, ಅಭಿವೃದ್ಧಿಪಡಿಸುವ ಸಂಬಂಧ ಸಂಸದರ ಗಮನಕ್ಕೆ ತರಲಾಗುವುದು. ಈಗ ಕುಸಿದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ತತ್‌ಕ್ಷಣ ಸ್ಥಳಕ್ಕೆ ಭೇಟಿ ನೀಡಲು ತಿಳಿಸುತ್ತೇನೆ.
– ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.