ಕಸ ಸುರಿದರೆ ವಾಹನ ಪರವಾನಗಿ ರದ್ದು

ಗಾರೆ ನರಸಯ್ಯನಕಟ್ಟೆ-ಅಕ್ಕತಂಗಿಯರ ಕೆರೆಯಂಗಳದಲ್ಲಿ 2 ಆಟೋಗಳ ಜಪ್ತಿ ಮಾಡಿ 2 ಸಾವಿರ ರೂ. ದಂಡ: ಆಯುಕ್ತ

Team Udayavani, Jul 31, 2019, 2:39 PM IST

tk-tdy-1

ತುಮಕೂರು: ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮುಂದೆ ಕಸ ಸುರಿಯಲು ಯತ್ನಿಸಿದರೆ ಅಂತಹ ವಾಹನಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್‌ ಎಚ್ಚರಿಕೆ ನೀಡಿದರು.

ನಗರದ ಹೊರವಲಯದ ಗಾರೆ ನರಸಯ್ಯನಕಟ್ಟೆ ಹಾಗೂ ಅಕ್ಕತಂಗಿಯರ ಕೆರೆಯಂಗಳದಲ್ಲಿ ಕಸ ಸುರಿಯಲು ಯತ್ನಿಸುತ್ತಿದ್ದ 2 ಲಗೇಜ್‌ ಆಟೋಗಳನ್ನು ಪಾಲಿಕೆ ಅಧಿಕಾರಿಗಳು ವಶಕ್ಕೆ ಪಡೆದು 2 ಸಾವಿರ ರೂ.ದಂಡ ವಿಧಿಸಿದ್ದಾರೆಂದರು.

2 ಆಟೋ ವಶಕ್ಕೆ: ಇದೇ ರೀತಿ ಗಾರೆ ನರಸಯ್ಯನಕಟ್ಟೆ ಬಳಿ ಖಾಸಗಿ ಬ್ಯಾಂಕ್‌ವೊಂದರ ಸಿಬ್ಬಂದಿ ಲಗೇಜ್‌ ಆಟೋದಲ್ಲಿ ಪೇಪರ್‌ ಸೇರಿದಂತೆ ಇತರೆ ಕಸ ತುಂಬಿ ಕೊಂಡು ಬಂದು ಕಸ ಹಾಕಲು ಮುಂದಾ ಗಿದ್ದರು. ಈ ಬಗ್ಗೆ ಮಾಹಿತಿ ಅರಿತ ಪಾಲಿಕೆ ಅಧಿಕಾರಿಗಳು, ದಾಳಿ ನಡೆಸಿ ಆಟೋ ವಶಪಡಿಸಿಕೊಂಡು ಎರಡೂ ಆಟೋಗಳನ್ನು ಪಾಲಿಕೆ ಕಚೇರಿಗೆ ಕರೆ ತಂದು ಆಯುಕ್ತರ ಮುಂದೆ ಹಾಜರು ಪಡಿಸಿದ್ದಾರೆ.

ಸ್ವಚ್ಛತೆ ಕಾಪಾಡಲು ಮುಂದಾಗಿ: ಎರಡೂ ಕಡೆ ಆಟೋಗಳಲ್ಲಿ ಕಸ ಸುರಿಯಲು ಬಂದಿದ್ದವರಿಗೆ ನಗರದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಅರಿವು ಮೂಡಿಸಿದ ಆಯುಕ್ತ ಟಿ.ಭೂಬಾಲನ್‌, ತುಮಕೂರು ನಗರವನ್ನು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛ ತುಮಕೂರನ್ನಾಗಿ ಮಾ ಡಲು ಶ್ರಮಿಸಲಾಗುತ್ತಿದೆ. ಕಸವನ್ನು ಎಲ್ಲೆಂ ದರಲ್ಲಿ ಸ್ಥಳಗಳಲ್ಲಿ ಎಸೆಯಬಾರದು. ಸಾರ್ವ ಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡದೆ ಅನೈರ್ಮಲ್ಯ ಸೃಷ್ಟಿಸುವ ರೀತಿಯಲ್ಲಿ ಕಸವನ್ನು ಎಸೆದರೆ ಅಂತಹವರಿಗೆ ದಂಡ ಹಾಕಲಾಗುವುದು ಎಂದರು.

ಜಿಲ್ಲಾಧಿಕಾರಿಗೆ ಶಿಫಾರಸು ಮಾಡುವೆ: ರಸ್ತೆ, ಕೆರೆಯಂಗಳ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕಬಾರದು. ಒಂದು ವೇಳೆ ಪಾಲಿಕೆ ಆದೇಶ ಉಲ್ಲಂಘಿಸಿ ಕಸ ಹಾಕಿದರೆ ಅಂತಹ ವಾಹನ ಗಳಿಗೆ ಹೆಚ್ಚಿನ ಮೊತ್ತದಲ್ಲಿ ದಂಡ ವಿಧಿಸಿ, ವಾಹನಗಳ ಲೈಸೆನ್ಸ್‌ ರದ್ದುಪಡಿಸಲು ಜಿಲ್ಲಾಧಿ ಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು. ಗಾರೆ ನರಸಯ್ಯನಕಟ್ಟೆಗೆ ಖಾಸಗಿ ಬ್ಯಾಂಕ್‌ನವರು ಪೇಪರ್‌ ತುಂಬಿಕೊಂಡು ಕಸ ಹಾಕಲು ಬಂದಿದ್ದರು. ಅದೇ ರೀತಿ ಅಕ್ಕತಂಗಿ ಯವರ ಕೆರೆ ಬಳಿಗೆ ತರಕಾರಿ ತುಂಬಿಕೊಂಡು ಮತ್ತೂಂದು ವಾಹನ ಬಂದಿತ್ತು. ಈ ಎರಡೂ ವಾಹನವನ್ನು ಪಾಲಿಕೆ ಸಿಬ್ಬಂದಿ ಹಿಡಿದು ಪಾಲಿಕೆ ಆವರಣಕ್ಕೆ ಕರೆ ತಂದಿದ್ದರು. ಈ ಎರಡೂ ವಾಹನಗಳಿಗೆ ತಲಾ 2 ಸಾವಿರ ರೂ.ದಂಡ ವಿಧಿಸಿ, ಸ್ವಚ್ಛತೆ ಕಾಪಾಡುವಂತೆ ಅರಿವು ಮೂಡಿಸಲಾಗಿದೆ ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.