ನಮ್ಮ ತಾಯಿ ಭಾಷೆ ಕುಂದಾಪ್ರ ಕನ್ನಡಕ್ಕೆ ಸಂಬಂಧ ಬೆಸೆಯುವ ವಿಶೇಷ ಶಕ್ತಿ ಇದೆ

ಯಕ್ಷಗಾನ "ನರಹರಿ ಹೊಯ್‌ ಕಯ್‌' ಪ್ರಸಂಗ ಕೃತಿ ಅನಾವರಣ

Team Udayavani, Aug 3, 2019, 5:56 AM IST

0208TKE2

ತೆಕ್ಕಟ್ಟೆ: ಭಾಷೆ ಒಂದು ಅಭಿವ್ಯಕ್ತಿ ಮಾಧ್ಯಮ. ಒಂದು ಪ್ರದೇಶದ ಭಾಷೆ ಅಲ್ಲಿನ ಸಂಸ್ಕೃತಿಯ ಪ್ರತಿಬಿಂಬ ಎಂದು ಬಹು ಮೇಳಗಳ ಯಜಮಾನರು, ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ ಪಿ. ಕಿಶನ್‌ ಹೆಗ್ಡೆ ಹೇಳಿದರು.

ಆ.1ರಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಮಲ್ಯಾಡಿಯ ಯಕ್ಷದೀಪ ಕಲಾ ಟ್ರಸ್ಟ್‌ ಹಾಗೂ ತೆಕ್ಕಟ್ಟೆ ಯಶಸ್ವಿ ಕಲಾವೃಂದದ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪ್ರ ಕನ್ನಡದ ಚೊಚ್ಚಲ ಯಕ್ಷಗಾನ ನರಹರಿ ಹೊಯ್‌ ಕಯ್‌ ಪ್ರಸಂಗ ಕೃತಿಯನ್ನು ಅನಾವರಣಗೊಳಿಸಿ ಮಾತನಾಡಿದರು.

ಗ್ರಾಮೀಣ ಜನರ ಬದುಕಿನ ಜತೆಗೆ ಅವರಾಡುವ ಭಾಷೆ ಕೂಡಾ ಬೆಸೆದುಕೊಂಡಿರುತ್ತದೆ. ಪ್ರತಿ ಭಾಷೆಗೂ ಅದರದ್ದೇ ಆದ ಸೊಗಡು ಇದ್ದೇ ಇದೆ. ನಮ್ಮ ತಾಯಿ ಭಾಷೆ ಕುಂದಾಪ್ರ ಕನ್ನಡಕ್ಕೆ ಸಂಬಂಧವನ್ನು ಬೆಸೆಯುವ ವಿಶೇಷ ಶಕ್ತಿ ಇದೆ ಎಂದು ಅವರು ತಿಳಿಸಿದರು.

ಕುಂದಾಪುರ ಕನ್ನಡದಲ್ಲಿ ಪೂರ್ಣಪ್ರಮಾಣದಲ್ಲಿ ಮೊತ್ತಮೊದಲಿಗೆ ಯಕ್ಷಗಾನ ಪ್ರಸಂಗ ರಚಿಸಿದ ಪ್ರಸಂಗಕರ್ತ ಪ್ರಸಾದ ಕುಮಾರ್‌ ಮೊಗೆಬೆಟ್ಟು ಅವರನ್ನು ಗೌರವಿಸಲಾಯಿತು.
ಕನ್ನಡ ಉಪನ್ಯಾಸಕ ಎಚ್‌. ಸುಜಯೀಂದ್ರ ಹಂದೆ ಮಾತನಾಡಿ, ಕುಂದಾಪುರ ಭಾಷೆ ಸತ್ವಯುತವಾಗಿದ್ದು ಅದನ್ನು ನಾಟಕ, ಸಿನೆಮಾಗಳಲ್ಲಿ ಹಾಸ್ಯಪಾತ್ರಗಳಿಗೆ ಮಾತ್ರ ಬಳಸುತ್ತಿರುವುದು ವಿಷಾದನೀಯ, ಇಂತಹ ಗ್ರಾಮೀಣ ಭಾಷೆ ಉಳಿಸುವುದೆಂದರೆ ಪ್ರವಾಹದ ವಿರುದ್ಧವಾಗಿ ಈಜಿದಂತೆ. ಆಧುನಿಕತೆಯ ಭಾರಾಟೆಯ ನಡುವೆಯೂ ನಮ್ಮ ಭಾಷೆ ಬದುಕಿನೊಂದಿಗೆ ಬೆರೆತು ಬೆಳಗಿಸಬೇಕಾದದ್ದು
ಜವಾಬ್ದಾರಿ ಎಂದರು.

ಯಕ್ಷದೀಪ ಕಲಾ ಟ್ರಸ್ಟ್‌ ನ ಅಧ್ಯಕ್ಷ ಸತೀಶ್ಚಂದ್ರ ಕಾಳಾವರ್ಕರ್‌ ಅಧ್ಯಕ್ಷತೆ ವಹಿಸಿದ್ದರು.

ಕುಂದಗನ್ನಡದ ಸಾಹಿತಿ ಪಡುಕರೆ ಉದಯ ಶೆಟ್ಟಿ, ತೆಕ್ಕಟ್ಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಸುದರ್ಶನ ಉರಾಳ, ವೆಂಕಟೇಶ ವೈದ್ಯ, ಯಕ್ಷ ದೀಪ ಕಲಾ ಟ್ರಸ್ಟ್‌ನ ಕಾರ್ಯದರ್ಶಿ ಪ್ರಶಾಂತ ಮಲ್ಯಾಡಿ ಉಪಸ್ಥಿತರಿದ್ದರು.ಯಶಸ್ವಿ ಕಲಾವೃಂದದ ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ ಸ್ವಾಗತಿಸಿ, ಅಧ್ಯಾಪಕ ಹೆರಿಯ ಮಾಸ್ಟರ್‌ ಕೊಮೆ ಕಾರ್ಯಕ್ರಮ ನಿರೂಪಿಸಿ,ಯಕ್ಷ ಗುರು ಕೊçಕೂರು ಸೀತಾರಾಮ ಶೆಟ್ಟಿ ವಂದಿಸಿದರು.

ಯಕ್ಷಗಾನ ಪ್ರದರ್ಶನ
ಕೆ.ಪಿ. ಹೆಗಡೆ, ಎಚ್‌. ಪ್ರಸಾದ ಕುಮಾರ್‌, ಲಂಬೋದರ ಹೆಗಡೆ, ದೇವದಾಸ್‌ ರಾವ್‌, ಎನ್‌.ಜಿ. ಹೆಗಡೆ, ಕೃಷ್ಣಾನಂದ ಶೆಣೈ, ಭರತ್‌, ಶಶಿಕಾಂತ ಶೆಟ್ಟಿ, ಉಪ್ಪುಂದ ನಾಗೇಂದ್ರ, ಶಿವಾನಂದ ಕೋಟ, ಸಂಜೀವ ಹೆನ್ನಾಬೆ„ಲ್‌, ಉಪ್ಪುಂದ ಗಣೇಶ್‌, ಭದ್ರಾಪುರ ಶ್ರೀಧರ ಭಂಡಾರಿ, ಹರೀಶ ಜಪ್ತಿ ಮೊದಲಾದವರ ಕೂಡುವಿಕೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕುಂದಾಪುರ ಕನ್ನಡದ ಯಕ್ಷಗಾನ “ನರಹರಿ ಹೊಯ್‌ಕಯ್‌’ ಪ್ರದರ್ಶನಗೊಂಡಿದ್ದು ಎಲ್ಲರ ಗಮನ ಸೆಳೆಯಿತು.

ಟಾಪ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.