ಕಲಾಕ್ಷೇತ್ರ:ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ


Team Udayavani, Aug 3, 2019, 5:04 AM IST

0208KDLM11PH

ಕುಂದಾಪುರ: ಭಾರತದಲ್ಲಿ ವೈವಿಧ್ಯತೆಯಲ್ಲಿ ಏಕತೆ ಇರುವುದನ್ನು ಮಣಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಬಹುಭಾಷಾ, ಬಹುಸಂಸ್ಕೃತಿಯ ನಮ್ಮ ನಾಡಿನಲ್ಲಿ ಪ್ರತಿಭಾಷೆಗೂ ಅದರದ್ದೇ ಸಂಸ್ಕೃತಿಯ ಹಿನ್ನೆಲೆ, ಗೌರವ ಇದೆ ಎಂದು ಸಹಾಯಕ ಕಮಿಷನರ್‌ ಡಾ| ಎಸ್‌.ಎಸ್‌. ಮಧುಕೇಶ್ವರ್‌ ಹೇಳಿದರು.

ಗುರುವಾರ ರಾತ್ರಿ ಕಲಾಕ್ಷೇತ್ರ- ಕುಂದಾಪುರ ವತಿಯಿಂದ, ದಶಮ ಸಂಭ್ರಮದ ಪ್ರಯುಕ್ತ ವಿಶ್ವದ ಮೂಲೆ ಮೂಲೆಯಲ್ಲಿ ನೆಲೆಸಿರುವ ಕುಂದಾಪ್ರ ಕನ್ನಡಿಗರು ಸೇರಿ ಬಹುತೇಕ ಕಡೆ ಆಚರಿಸಿದ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಕುಂದಾಪುರದ ಶ್ರೀ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು.

ಭಾಷೆ ಎನ್ನುವುದು ಶಕ್ತಿಯೂ ಹೌದು, ಅಂತಶ್ಶಕ್ತಿಯೂ ಹೌದು. ಅಂತಸ್ಸತ್ವವೂ ಹೌದು. ಪ್ರತಿ ಮೂವತ್ತು ಕಿ.ಮೀ.ಗೊಮ್ಮೆ ಬದಲಾಗುವ ಭಾಷೆ, ಅದರ ಜತೆಗೆ ವೇಷಭೂಷಣ, ಸಂಸ್ಕೃತಿ ಬದಲಾಗುವುದು ಭಾರತದಲ್ಲಿ ಮಾತ್ರ ಎಂದರು.

ಕುಂದಾಪ್ರ ಕನ್ನಡದ ಇತಿಹಾಸ ಮತ್ತು ಅದು ನಡೆದು ಬಂದ ದಾರಿಯ ಬಗ್ಗೆ ಉಡುಪಿ ಎಂ.ಜಿ.ಎಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ| ಸುರೇಂದ್ರನಾಥ ಶೆಟ್ಟಿ ಕೊಕ್ಕರ್ಣೆ, ಭಾಷೆ ಮೂಲಸತ್ವವನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕವಿದೆ. ಕುಂದಾಪ್ರ ಭಾಷೆಯ ಜತೆಗೆ ಬೇರೆ ಭಾಷೆಯ ಪದಗಳು ಮಿಶ್ರವಾಗುತ್ತಿವೆ. ಅಕಾಡೆಮಿ ಮಾಡಿದ ಕೂಡಲೇ ಭಾಷೆ ಬೆಳೆಯುವುದಿಲ್ಲ. ನಾವಾಡಿದರೆ ಮಾತ್ರ ಭಾಷೆ ಬೆಳೆಯುತ್ತದೆ. ಕುಂದಾಪ್ರ ಕನ್ನಡದ ಕಂಪು ಎಲ್ಲೆಡೆ ಹಬ್ಬಬೇಕು. ಏಕೆಂದರೆ ಕುಂದಾಪ್ರ ಕನ್ನಡ ಉದ್ಯೋಗದ ಭಾಷೆ ಅಲ್ಲ ಬದುಕಿನ ಭಾಷೆ, ನಮ್ಮೊಳಗಿನ ಭಾಷೆ. ಅಹಂಕಾರ ತೊರೆದರೆ ಈ ಭಾಷೆ ಸುಲಲಿತವಾಗುತ್ತದೆ ಎಂದರು.

ಅಪ್ಪಟ ಕುಂದಾಪ್ರ ಕನ್ನಡಿಗ ಸಾಲಿಗ್ರಾಮ ಗುಂಡ್ಮಿಯ ವಿನಯ ಕುಮಾರ್‌ ಕಬಿಯಾಡಿ ಮಾತೃ ಭಾಷೆಯ ಕುರಿತು ಮಾತನಾಡಿದರು.

ಮನೋರಂಜನೆಯ ಅಂಗವಾಗಿ ಕಲಾಸ್ಪೂರ್ತಿ ಕಲಾತಂಡ ಕುಂದಾಪ್ರ ಮತ್ತು ಹೇರಂಭಾ ಕಲಾವಿದರು ಸಾಲಿಗ್ರಾಮ ಇವರಿಂದ ಜಂಟಿಯಾಗಿ ಕುಂದಾಪ್ರ ಕನ್ನಡ ಭಾಷೆಯಲ್ಲಿ ಹಾಸ್ಯ ಪ್ರಧಾನ ನಾಟಕದ ಆಯ್ದ ಭಾಗಗಳ ಪ್ರದರ್ಶನ ನಡೆಯಿತು. ಅಶೋಕ ಸಾರಂಗ ಅವರ ತಂಡದಿಂದ ಗಾಯನ ನಡೆಯಿತು.ಅಧ್ಯಕ್ಷ ಬಿ. ಕಿಶೋರ್‌ ಕುಮಾರ್‌ ಸ್ವಾಗತಿಸಿ, ಪ್ರಸ್ತಾವಿಸಿದರು. ರಾಜೇಶ್‌ ಕಾವೇರಿ ನಿರ್ವಹಿಸಿದರು. ಪ್ರ. ಕಾರ್ಯದರ್ಶಿ ವಿಕ್ರಮ್‌ ಪೈ ವಂದಿಸಿದರು. ಕೌಶಿಕ್‌ ಯಡಿಯಾಳ್‌, ರಾಮಚಂದ್ರ ಪರಿಚಯಿಸಿದರು.

ಟಾಪ್ ನ್ಯೂಸ್

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.