ಅರಿವು, ಆಚಾರ ಒಂದಾದರೆ ಜಾತಿಯೆಂಬ ಭೂತ ದೂರ

"ಮತ್ತೆ ಕಲ್ಯಾಣ', ಉಡುಪಿ ಬಸವ ಸಮಿತಿಯನ್ನು ಉದ್ಘಾಟಿಸಿ ಸಾಣೆಹಳ್ಳಿ ಸ್ವಾಮೀಜಿ

Team Udayavani, Aug 3, 2019, 5:04 AM IST

0208UDTP01

ಉಡುಪಿ: ಇಂದಿನ ಮನುಕುಲ ಜಾತಿ, ಧರ್ಮ, ಆಚಾರ, ಅಸ್ಪೃಶ್ಯತೆ, ಮೌಡ್ಯಗಳೆಂಬ ಹತ್ತು ಹಲವು ರೋಗಗಳಿಂದ ಬಳಲುತ್ತಿದೆ. ಅವುಗಳಿಂದ ಮುಕ್ತಿ ಪಡೆದು ಆರೋಗ್ಯಯುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ “ಮತ್ತೆ ಕಲ್ಯಾಣ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಾಣೆಹಳ್ಳಿ ಶ್ರೀ ತರಳಬಾಳು ಜಗದ್ಗುರು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಪಾದರು ತಿಳಿಸಿದ್ದಾರೆ.

ಸಾಣೆಹಳ್ಳಿ ಸಹಮತ ವೇದಿಕೆ ಶ್ರೀ ತರಳಬಾಳು ಜಗದ್ಗುರು ಶಾಖಾ ಮಠ ಹಾಗೂ ಉಡುಪಿ ಬಸವ ಸಮಿತಿ ಸಹಯೋಗದಲ್ಲಿ ಶುಕ್ರವಾರ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಿದ್ದ “ಮತ್ತೆ ಕಲ್ಯಾಣ’ ಹಾಗೂ ಉಡುಪಿ ಬಸವ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದರು.

ವ್ಯಕ್ತಿ ಕಲ್ಯಾಣ-ಲೋಕ ಕಲ್ಯಾಣ
ಒಬ್ಬ ವ್ಯಕ್ತಿಯ ಕಲ್ಯಾಣಕ್ಕಿಂತ ಲೋಕ ಕಲ್ಯಾಣ ಮುಖ್ಯವೆಂಬುವುದನ್ನು ಶರಣ ಧರ್ಮ ತಿಳಿಸುತ್ತದೆ. ವಚನವೆಂಬುದು ಸಾಹಿತ್ಯವಲ್ಲ ಇದು ಒಂದು ಅದ್ಭುತವಾದ ಧರ್ಮವಾಗಿದೆ. ಅವುಗಳಲ್ಲಿ ಇಂದಿನ ಬದುಕಿಗೆ ಬೇಕಾದ ಎಲ್ಲ ಅಂಶಗಳಿವೆ. ಧರ್ಮದ ಬಗೆಗಿನ ಪರಿಕಲ್ಪನೆಗಳು ಛಿದ್ರಗೊಂಡಿವೆ. ಯಾವುದು ಧರ್ಮವಲ್ಲವೋ ಅದನ್ನು ಧರ್ಮವೆಂದು ಹೇಳಲಾಗುತ್ತಿದೆ ಎಂದು ಕಾಂತಾವರ ಅಲ್ಲಮಪ್ರಭು ಪೀಠದ ನಿರ್ದೇಶಕ ಡಾ| ನಾ. ಮೊಗಸಾಲೆ ತಿಳಿಸಿದರು.

ಬಾಲಕಿಯರ ಪ.ಪೂ. ಕಾಲೇಜು ಶಿಕ್ಷಕ ನಾಗರಾಜ ಜೆ.ಎಂ. ಹಾಗೂ ಕಡೂರು ಮಾಜಿ ಶಾಸಕ ವೈ.ಎಸ್‌. ವಿ. ದತ್ತ ಅವರು ವಿಶೇಷ ಉಪನ್ಯಾಸ ನೀಡಿದರು.

ನಾವೆಲ್ಲರೂ ಒಂದಾಗುವುದು ಯಾವಾಗ?
ನಾವು ಕುಡಿಯುವ ನೀರಿಗೆ, ಉಸಿರಾಡುವ ಗಾಳಿಗೆ, ನಡೆದಾಡುವ ನೆಲಕ್ಕಿಲ್ಲದ ಜಾತಿ, ಅಸ್ಪೃಶ್ಯತೆ ಮನುಕುಲಕ್ಕೆ ಯಾಕೆ ಬಂತು? ಹೇಗೆ ಬಂತು?. ನಡೆ -ನುಡಿ ಸಿದ್ಧಾಂತವಾದಾಗ ಮಾತ್ರ ಜಾತಿಯೆಂಬ ಭೂತ ಮನುಕುಲದಿಂದ ದೂರ ಹೋಗುತ್ತದೆ. ಆ ಮೂಲಕ ನಾವೆಲ್ಲರೂ ಒಂದೇ ಎನ್ನುವ ಭಾವನೆ ನಮ್ಮಲ್ಲಿ ನೆಲೆಗೊಳ್ಳುತ್ತದೆ. ಎಲ್ಲರ ಹುಟ್ಟು ಒಂದೇ ರೀತಿಯಿದೆ. ಮನುಷ್ಯ ನೀತಿಯಿಂದ ನಡೆದುಕೊಂಡರೆ ಶ್ರೇಷ್ಠ, ದುರಾಚಾರದಿಂದ ನಡೆದುಕೊಂಡರೆ ಆ ವ್ಯಕ್ತಿ ಕನಿಷ್ಠ. ಭಗವಂತನ ಹೆಸರಿನಲ್ಲಿ ಗುಡಿ ಸುತ್ತುವುದು, ನೀರಿನಲ್ಲಿ ಮುಳುಗುವ ಆಚರಣೆಗಳು ಮೌಡ್ಯದ ಸಂಕೇತ. ಬತ್ತಿ ಹೋಗುವ ನದಿ, ಬಾಡಿ ಹೋಗುವ ಮರವನ್ನು ನಂಬುವವರು ನಿಜವಾದ ದೇವರು ನಂಬಲು ಸಾಧ್ಯವೇ ಎಂಬುದನ್ನು ಶರಣರು 12ನೇ ಶತಮಾನದಲ್ಲಿ ಪ್ರಶ್ನಿಸಿದ್ದಾರೆ ಎಂದು ಸಾಣೆಹಳ್ಳಿ ಸ್ವಾಮೀಜಿ ಹೇಳಿದರು.

ಮನುಷ್ಯರಿಗೆ ಬುದ್ಧಿ
ನೀಡಿದ ಭಗವಂತ
ಮೌಡ್ಯಗಳು ಎಲ್ಲೆಡೆ ಪ್ರಸಾರವಾಗುತ್ತಿವೆ. ದೃಶ್ಯ ಮಾಧ್ಯಮಗಳು ಇವುಗಳನ್ನು ಪ್ರಸಾರ ಮಾಡುವಲ್ಲಿ ಸ್ಪರ್ಧೆಗೆ ನಿಂತಿವೆ. ಭಗವಂತ ಮನುಷ್ಯರಿಗೆ ಬುದ್ಧಿಯನ್ನು ನೀಡಿದ್ದಾನೆ. ಅದನ್ನು ಸದ್ಬಳಕೆ ಮಾಡಿಕೊಂಡರೆ ನಾವು ಯಾವ ಮೌಡ್ಯಗಳಿಗೆ ಬಲಿಯಾಗ ಬೇಕಾಗಿಲ್ಲ ಎಂದು ಸ್ವಾಮೀಜಿ ಹೇಳಿದರು.

ಟಾಪ್ ನ್ಯೂಸ್

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.