
ಮರಳು ಕಲಾಕೃತಿಯಲ್ಲಿ ಡೆಂಗ್ಯೂ, ಮಲೇರಿಯಾ ಜಾಗೃತಿ
Team Udayavani, Aug 4, 2019, 5:02 AM IST

ಉಡುಪಿ: ಭಯಾನಕ ಡೆಂಗ್ಯೂ, ಮಲೇರಿಯಾ ರೋಗದ ಬಗ್ಗೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಮಣಿಪಾಲದ ಮರಳು ಶಿಲ್ಪ ಕಲಾವಿದರಾದ ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಅವರು ಮರಳು ಕಲಾಕೃತಿ ರಚಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಮನೆಯ ಆವರಣ ಮತ್ತು ಎಲ್ಲಿಯೂ ನೀರು ನಿಂತು ಡೆಂಗ್ಯೂ ಮತ್ತು ಮಲೇರಿಯಾದ ಲಾರ್ವದ ಬೆಳವಣಿಗೆಗೆ ಅವಕಾಶ ಮಾಡಿಕೊಡಬಾರದು ಎಂದು ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಅವರು ಮನವಿ ಮಾಡಿದ್ದಾರೆ. ಎರಡು ದಿನಗಳ ಕಾಲ ವೀಕ್ಷಣೆಗೆ ಲಭ್ಯವಿದ್ದು, ಒಂದೇ ದಿನದಲ್ಲಿ ಸುಮಾರು ನೂರಕ್ಕೂ ಅಧಿಕ ಮಂದಿ ಕಲಾಕೃತಿ ವೀಕ್ಷಣೆ ಮಾಡಿದ್ದಾರೆ. ಕಲಾಕೃತಿಯ ಬದಿಯಲ್ಲಿ ಇಂಗ್ಲಿಷ್ನಲ್ಲಿ ಬಿ ಅಲರ್ಟ್ ಡೆಂಗ್ಯೂ ಹಾಗೂ ಕನ್ನಡದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಬಗ್ಗೆ ಜಾಗರೂಕತೆ ವಹಿಸಿ ಎಂಬ ಸಂದೇಶ ಬರೆಯಲಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.