ಮತ ಹಾಕದವರ ಮನ ಗೆಲ್ಲಿ

ಪಕ್ಷದ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

Team Udayavani, Aug 5, 2019, 5:37 AM IST

c-38

ಹೊಸದಿಲ್ಲಿ: ‘ನಿಮ್ಮಲ್ಲಿರುವ ಎಲ್ಲ ನಕಾರಾತ್ಮಕ ಭಾವನೆಗಳನ್ನು ಬಿಟ್ಟು, ಸಕಾರಾತ್ಮಕ ಮನಸ್ಥಿತಿಯೊಂದಿಗೆ ಕಾರ್ಯನಿರ್ವಹಿಸಿ. ಆ ಮೂಲಕ ನಮ್ಮ ಪಕ್ಷಕ್ಕೆ ಮತ ಹಾಕದವರ ಮನಸ್ಸನ್ನೂ ಗೆಲ್ಲಲು ಪ್ರಯತ್ನಿಸಿ.’

ಇದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ನೂತನ ಸಂಸದರಿಗೆ ಹೇಳಿರುವ ಕಿವಿಮಾತು. ಸುಮಾರು 380 ಜನಪ್ರತಿನಿಧಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ 2 ದಿನಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಈ ಮಾತು ಗಳನ್ನಾಡಿದ್ದಾರೆ. ನಿಮಗೆ ಮತ ಹಾಕಿಲ್ಲ ಎಂಬ ಕಾರಣಕ್ಕೆ ಅಂಥವರನ್ನು ನಿರ್ಲಕ್ಷ್ಯ ಮಾಡಬೇಡಿ. ಅವರೂ ನಿಮ್ಮತ್ತ ಆಕರ್ಷಿತರಾಗುವಂತೆ ಕೆಲಸ ಮಾಡಬೇಕು. ಎಲ್ಲರ ಕ್ಷೇಮಾಭಿವೃದ್ಧಿಗಾಗಿ ರಾಜಕೀಯ ಮಾಡಬೇಕು ಎಂದಿದ್ದಾರೆ.

ಇದೇ ವೇಳೆ, 2024ರ ಲೋಕಸಭೆ ಚುನಾವಣೆ ಕುರಿತೂ ಪ್ರಸ್ತಾವಿಸಿದ ಮೋದಿ, ನಿಮ್ಮ ನಿಮ್ಮ ಕ್ಷೇತ್ರಗಳನ್ನು ಹೇಗೆ ಅಭಿವೃದ್ಧಿಪಡಿಸಬೇಕೆಂದರೆ, ನಿಮ್ಮ ಕೆಲಸಗಳು ಹಾಗೂ ನಡವಳಿಕೆಗಳ ಸಾಮರ್ಥ್ಯದಿಂದಲೇ ನಿಮ್ಮನ್ನು ಜನ ತಮ್ಮ ಸಂಸದರಾಗಿ ಉಳಿಸಿಕೊಳ್ಳಬೇಕು ಎಂದೂ ಹೇಳಿರುವುದಾಗಿ ಸಂಸದ ಪ್ರಹ್ಲಾದ್‌ ಜೋಷಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಯಾವ ಬೂತ್‌ಗಳಲ್ಲಿ ಉತ್ತಮ ಸಾಧನೆ ಮಾಡಿಲ್ಲವೋ, ಅಂಥ ಕಡೆ ನಿಮ್ಮ ಅಸ್ತಿತ್ವವನ್ನು ಬಲಿಷ್ಠಗೊಳಿಸಿ ಎಂದೂ ಮೋದಿ ಸಲಹೆ ನೀಡಿದ್ದಾರೆ.

ರಾಜಕೀಯದ ವಿಚಾರ ಬಂದಾಗ ನಿಮ್ಮ ನಿಮ್ಮ ಕ್ಷೇತ್ರಗಳ ಹಾಗೂ ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ. ಜತೆಗೆ, ಜನರ ಭಾಗೀದಾರಿಕೆ, ಜನ ಪರ ನೀತಿಗಳೇ ನಿಮ್ಮ ಜೀವಾಳವಾಗಬೇಕು ಎಂದು ಮೋದಿ ಕರೆ ನೀಡಿದ್ದಾರೆ. ಒಟ್ಟಿನಲ್ಲಿ ರಾಜಕೀಯ, ಸೈದ್ಧಾಂತಿಕ ಹಾಗೂ ವೈಯಕ್ತಿಕ ಅಂಶಗಳ ಕುರಿತೂ ಸಂಸದರಿಗೆ ಪ್ರಧಾನಿ ಕಿವಿಮಾತುಗಳನ್ನು ಹೇಳಿದ್ದಾರೆ.

ಶಾ ಭಾಷಣದ ಕೃತಿ ಬಿಡುಗಡೆ: ಇದೇ ಸಂದರ್ಭದಲ್ಲಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರ ಭಾಷಣಗಳ ಸಂಗ್ರಹವಾದ ‘ಸಾಂಸ್ಕೃತಿಕ್‌ ರಾಷ್ಟ್ರವಾದ್‌ ಕೆ ಶಿಲ್ಪಿ’ (ಸಾಂಸ್ಕೃತಿಕ ರಾಷ್ಟ್ರೀಯವಾದದ ಶಿಲ್ಪಿ) ಎಂಬ ಕೃತಿಯನ್ನೂ ಬಿಡುಗಡೆಗೊಳಿಸಲಾಯಿತು. ಚಾಣಕ್ಯನಿಂದ ಹಿಡಿದು ಪಕ್ಷದ ಸ್ಥಾಪಕ ಶ್ಯಾಮ್‌ಪ್ರಸಾದ್‌ ಮುಖರ್ಜಿವರೆಗೆ ವಿವಿಧ ಗಣ್ಯರ ಕುರಿತು ಅಮಿತ್‌ ಶಾ ಆಡಿರುವ ಮಾತುಗಳು ಈ ಕೃತಿಯಲ್ಲಿವೆ.

ಪರಿವಾರವಾದ ಬೇಡವೇ ಬೇಡ
ನಿಮ್ಮ ವೈಯಕ್ತಿಕ ನಡವಳಿಕೆ ಮತ್ತು ವೃತ್ತಿಪರ ವರ್ತನೆಯು ಯಾವತ್ತೂ ಉತ್ತಮವಾಗಿರಲಿ ಎಂದು ಹೇಳುವಾಗ ಪ್ರಧಾನಿ ಮೋದಿ ತಮ್ಮದೇ ಶುದ್ಧ ಹಸ್ತ ಹಾಗೂ ವರ್ಚಸ್ಸನ್ನು ಉದಾಹರಣೆಯಾಗಿ ನೀಡಿದರು. ಇದೇ ವೇಳೆ, ನಿಮ್ಮ ನಿಮ್ಮ ಕುಟುಂಬಗಳಿಗೆ ಸಾಕಷ್ಟು ಸಮಯ ಕೊಡಿ. ಆದರೆ, ಯಾವ ಕಾರಣಕ್ಕೂ ಪರಿವಾರವಾದ(ವಂಶಾಡಳಿತ)ಕ್ಕೆ ಇಂಬು ಕೊಡಬೇಡಿ ಎಂದೂ ಸಂಸದರಿಗೆ ಸಲಹೆ ನೀಡಿದರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.