ಮತ್ತೂಂದು ಬ್ಲೇಡ್ ಕಂಪನಿ ವಂಚನೆ ಬಯಲಿಗೆ
ಅಧಿಕ ಬಡ್ಡಿ ನೀಡುವ ಆಮಿಷವೊಡ್ಡಿ ವಂಚನೆ | ಟಿಫಾರ್ಫ್ ಟ್ರೇಡಿಂಗ್ ಸರ್ವೀಸ್ ಹೆಸರಿನ ಕಂಪನಿಯಿಂದ ಮೋಸ
Team Udayavani, Aug 6, 2019, 10:09 AM IST
ಬೆಂಗಳೂರು: ಆ್ಯಂಬಿಡೆಂಟ್, ಐಎಂಎ ಬಹುಕೋಟಿ ವಂಚನೆ ಪ್ರಕರಣಗಳ ಮಾದರಿಯಲ್ಲಿಯೇ ಅಧಿಕ ಲಾಭಾಂಶದ ಆಮಿಷವೊಡ್ಡಿ ಗ್ರಾಹಕರಿಂದ ಹಣ ಸಂಗ್ರಹಿಸಿ ಮತ್ತೂಂದು ಕಂಪನಿ ವಂಚಿಸಿರುವುದು ಪತ್ತೆಯಾಗಿದೆ.
ಟಿಫಾರ್ಫ್ ಟ್ರೇಡಿಂಗ್ ಸರ್ವೀಸ್ ಹೆಸರಿನ ಕಂಪನಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದೆ ಎಂದು ಆರೋಪಿಸಿರುವ ಗ್ರಾಹಕರು ತಿಲಕ್ ನಗರ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಾರೆ. ಕಂಪನಿಯಿಂದ ಮೋಸ ಹೋದ ಆಂಧ್ರಮೂಲದ ಸೈಯದ್ ಖಲೀದ್ ಅಹ್ಮದ್ ನೀಡಿರುವ ದೂರಿನ ಅನ್ವಯ, ಟಿಫಾರ್ಫ್ ಟ್ರೇಡಿಂಗ್ ಸರ್ವೀಸ್ನ ನಿರ್ದೇಶಕರುಗಳಾದ ಹಬೀಬುಲ್ಲಾ ಷರೀಫ್, ಆತನ ಸಂಬಂಧಿ ಮಸೀವುಲ್ಲಾ ಷರೀಫ್, ಫಹಾದ್, ಮಂಜುನಾಥ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆರಂಭದಲ್ಲಿ ಶೇ 7ರಷ್ಟು ಲಾಭಾಂಶ!: ಟಿಫಾರ್ಫ್ ಕಂಪನಿಯ ಬಗ್ಗೆ ನಮ್ಮ ಸಹೋದರನಿಂದ ಮಾಹಿತಿ ಗೊತ್ತಾಗಿದ್ದು ಆತನಿಗೆ 1ಲಕ್ಷ ರೂಗಳಿಗೆ ಶೇ 7 ರಷ್ಟು ಲಾಭಾಂಶ ನೀಡಿದ್ದರು. ಅದನ್ನು ನಂಬಿ ನಾನು ನನ್ನ ಕುಟುಂಬ ಒಟ್ಟು 36 ಲಕ್ಷ ರೂ.ಗಳನ್ನು 2017ರಲ್ಲಿ ಹೂಡಿಕೆ ಮಾಡಿದ್ದೆವು. ಆರಂಭದಲ್ಲಿ ಶೇ. 4 ಲಾಭಾಂಶ ನೀಡಿದ್ದರು. ಆದರೆ, ಕಳೆದ 9 ತಿಂಗಳಿನಿಂದ ಲಾಭಾಂಶ ನೀಡದೆ ಏಕಾಏಕಿ ಕಂಪನಿ ಮುಚ್ಚಿದ್ದರು. ಹೀಗಾಗಿ ಹಣ ವಾಪಾಸ್ ನೀಡುವಂತೆ ಕೇಳಿದರೆ ಕೊಡುತ್ತೇವೆ ಎಂದು ನಂಬಿಸುತ್ತಲೇ ಇದ್ದರು ಆದರೆ ಕಡೆಗೂ ಕೊಟ್ಟಿಲ್ಲ ಎಂದು ದೂರುದಾರ ಸೈಯದ್ಖಲೀಲ್ ಅಹ್ಮದ್ ‘ ಉದಯವಾಣಿ’ಗೆ ತಿಳಿಸಿದರು.
ಪೊಲೀಸರಿಗೆ ದೂರು ನೀಡಿದರೆ ಹಣ ವಾಪಾಸ್ ನೀಡುವುದಿಲ್ಲ ಎಂದು ಬೆದರಿಕೆ ಒಡ್ಡಲಾಗಿತ್ತು. ನಮ್ಮಂತೆಯೇ ನೂರಾರು ಮಂದಿ ಹೂಡಿಕೆ ಮಾಡಿದ್ದು, ಅವರೂ ಅವರ ಬೆದರಿಕೆಗೆ ಹೆದರಿದ್ದರು. ಐಎಂಎ ವಂಚನೆ ಬಳಿಕ ಆರೋಪಿಗಳು ಪುನ: ಸಿಕ್ಕಿರಲಿಲ್ಲ. ಹೀಗಾಗಿ ಅಂತಿಮವಾಗಿ ದೂರು ನೀಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.