ಮತ್ತೂಂದು ಬ್ಲೇಡ್‌ ಕಂಪನಿ ವಂಚನೆ ಬಯಲಿಗೆ

ಅಧಿಕ ಬಡ್ಡಿ ನೀಡುವ ಆಮಿಷವೊಡ್ಡಿ ವಂಚನೆ | ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಹೆಸರಿನ ಕಂಪನಿಯಿಂದ ಮೋಸ

Team Udayavani, Aug 6, 2019, 10:09 AM IST

bng-tdy-1

ಬೆಂಗಳೂರು: ಆ್ಯಂಬಿಡೆಂಟ್, ಐಎಂಎ ಬಹುಕೋಟಿ ವಂಚನೆ ಪ್ರಕರಣಗಳ ಮಾದರಿಯಲ್ಲಿಯೇ ಅಧಿಕ ಲಾಭಾಂಶದ ಆಮಿಷವೊಡ್ಡಿ ಗ್ರಾಹಕರಿಂದ ಹಣ ಸಂಗ್ರಹಿಸಿ ಮತ್ತೂಂದು ಕಂಪನಿ ವಂಚಿಸಿರುವುದು ಪತ್ತೆಯಾಗಿದೆ.

ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಹೆಸರಿನ ಕಂಪನಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದೆ ಎಂದು ಆರೋಪಿಸಿರುವ ಗ್ರಾಹಕರು ತಿಲಕ್‌ ನಗರ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಾರೆ. ಕಂಪನಿಯಿಂದ ಮೋಸ ಹೋದ ಆಂಧ್ರಮೂಲದ ಸೈಯದ್‌ ಖಲೀದ್‌ ಅಹ್ಮದ್‌ ನೀಡಿರುವ ದೂರಿನ ಅನ್ವಯ, ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ನ ನಿರ್ದೇಶಕರುಗಳಾದ ಹಬೀಬುಲ್ಲಾ ಷರೀಫ್, ಆತನ ಸಂಬಂಧಿ ಮಸೀವುಲ್ಲಾ ಷರೀಫ್, ಫ‌ಹಾದ್‌, ಮಂಜುನಾಥ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆರಂಭದಲ್ಲಿ ಶೇ 7ರಷ್ಟು ಲಾಭಾಂಶ!: ಟಿಫಾರ್ಫ್ ಕಂಪನಿಯ ಬಗ್ಗೆ ನಮ್ಮ ಸಹೋದರನಿಂದ ಮಾಹಿತಿ ಗೊತ್ತಾಗಿದ್ದು ಆತನಿಗೆ 1ಲಕ್ಷ ರೂಗಳಿಗೆ ಶೇ 7 ರಷ್ಟು ಲಾಭಾಂಶ ನೀಡಿದ್ದರು. ಅದನ್ನು ನಂಬಿ ನಾನು ನನ್ನ ಕುಟುಂಬ ಒಟ್ಟು 36 ಲಕ್ಷ ರೂ.ಗಳನ್ನು 2017ರಲ್ಲಿ ಹೂಡಿಕೆ ಮಾಡಿದ್ದೆವು. ಆರಂಭದಲ್ಲಿ ಶೇ. 4 ಲಾಭಾಂಶ ನೀಡಿದ್ದರು. ಆದರೆ, ಕಳೆದ 9 ತಿಂಗಳಿನಿಂದ ಲಾಭಾಂಶ ನೀಡದೆ ಏಕಾಏಕಿ ಕಂಪನಿ ಮುಚ್ಚಿದ್ದರು. ಹೀಗಾಗಿ ಹಣ ವಾಪಾಸ್‌ ನೀಡುವಂತೆ ಕೇಳಿದರೆ ಕೊಡುತ್ತೇವೆ ಎಂದು ನಂಬಿಸುತ್ತಲೇ ಇದ್ದರು ಆದರೆ ಕಡೆಗೂ ಕೊಟ್ಟಿಲ್ಲ ಎಂದು ದೂರುದಾರ ಸೈಯದ್‌ಖಲೀಲ್ ಅಹ್ಮದ್‌ ‘ ಉದಯವಾಣಿ’ಗೆ ತಿಳಿಸಿದರು.

ಪೊಲೀಸರಿಗೆ ದೂರು ನೀಡಿದರೆ ಹಣ ವಾಪಾಸ್‌ ನೀಡುವುದಿಲ್ಲ ಎಂದು ಬೆದರಿಕೆ ಒಡ್ಡಲಾಗಿತ್ತು. ನಮ್ಮಂತೆಯೇ ನೂರಾರು ಮಂದಿ ಹೂಡಿಕೆ ಮಾಡಿದ್ದು, ಅವರೂ ಅವರ ಬೆದರಿಕೆಗೆ ಹೆದರಿದ್ದರು. ಐಎಂಎ ವಂಚನೆ ಬಳಿಕ ಆರೋಪಿಗಳು ಪುನ: ಸಿಕ್ಕಿರಲಿಲ್ಲ. ಹೀಗಾಗಿ ಅಂತಿಮವಾಗಿ ದೂರು ನೀಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ವರ್ಷದ ಹಿಂದೆಯೇ ಕಂಪನಿಗೆ ಬೀಗ:

ಜಯನಗರದ 9ನೇ ಬ್ಲಾಕ್‌ನಲ್ಲಿರುವ ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಕಂಪನಿಯ ಕಚೇರಿ ವರ್ಷದ ಹಿಂದೆಯೇ ಮುಚ್ಚಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಲ್ವರು ಆರೋಪಿಗಳು ಕೂಡ ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಕಂಪನಿ ವಂಚಿಸಿದೆ ಎಂದು ಆರೋಪಿಸಿ ಇದುವರೆಗೂ ನಾಲ್ಕು ದೂರುಗಳು ಬಂದಿದ್ದು, ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ 36 ಲಕ್ಷ ರೂ. ವಂಚಿಸಿದೆ ಎಂಬುದು ಗೊತ್ತಾಗಿದೆ. ಈ ಪ್ರಮಾಣ ಇನ್ನೂ ಹೆಚ್ಚಿರುವ ಸಾಧ್ಯತೆಯಿದೆ. ತನಿಖೆ ಮುಂದುವರಿಸುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ದೂರು ನೀಡಬಹುದು!:

ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಕಂಪನಿಯಿಂದ ವಂಚನೆಗೊಳಗಾದ ಸಾರ್ವಜನಿಕರ ದೂರು ನೀಡಿದರೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.