ಚರ್ಚೆಗೆ ನೀವೇ ಸ್ಥಳ, ದಿನ ಫಿಕ್ಸ್‌ ಮಾಡಿ


Team Udayavani, Aug 7, 2019, 3:00 AM IST

charchege

ಹುಣಸೂರು: ಸಾ.ರಾ.ಮಹೇಶ್‌ ಅವರೇ ಮೈಸೂರು ಅಥವಾ ಬೆಂಗಳೂರು ಪ್ರಸ್‌ಕ್ಲಬ್‌ನಲ್ಲಿ ಚರ್ಚೆಗೆ ವೇಳೆ ನಿಗದಿ ಪಡಿಸಲಿ, ಯಾವುದೇ ಚರ್ಚೆಗೆ ಸಿದ್ಧನಿದ್ದೇನೆ ಎಂದು ಅನರ್ಹಗೊಂಡಿರುವ ಶಾಸಕ ಎಚ್‌.ವಿಶ್ವನಾಥ್‌ ತಿಳಿಸಿದರು.

“ಪಕ್ಷಕ್ಕೆ ದ್ರೋಹ ಎಸಗಿಲ್ಲ, ಯಾವುದೇ ಆಮಿಷಕ್ಕೆ ನಾನು ಒಳಗಾಗಿಲ್ಲ ಎಂದು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲಿ’ ಎಂಬ ಸಾ.ರಾ. ಮಹೇಶ್‌ ಪಂಥಾಹ್ವಾನಕ್ಕೆ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ ಎಚ್‌. ವಿಶ್ವನಾಥ್‌, ನನಗೆ ಆಣೆ ಪ್ರಮಾಣದ ಮೇಲೆ ನಂಬಿಕೆ ಇಲ್ಲ, ಸಂವಿಧಾನದ ಬಗ್ಗೆ ಗೌರವವಿದ್ದು, ಎಲ್ಲಾದರೂ ಸರಿ, ಆತನೇ ಸಮಯ-ಜಾಗ ನಿಗದಿಪಡಿಸಲಿ, ಚರ್ಚೆಗೆ ಸಿದ್ಧನಿದ್ದೇನೆಂದು ಸ್ಪಷ್ಟಪಡಿಸಿದರು.

ಸಾ.ರಾ.ಮಹೇಶ್‌ ಕೊಚ್ಚೆ ಇದ್ದಂತೆ, ಆ ಕೊಚ್ಚೆ ಗುಂಡಿಗೆ ಕಲ್ಲು ಎಸೆದು ನನ್ನ ಬಿಳಿ ಶರ್ಟ್‌ ಕೊಚ್ಚೆ ಮಾಡಿಕೊಳ್ಳುವುದಿಲ್ಲ. ನನ್ನ ಚರಿತ್ರೆ ಬಗ್ಗೆ ಮಾತನಾಡುವ ಮೊದಲು ಆತನ ಹಿಂದಿನ ಚರಿತ್ರೆಯನ್ನು ತಿರುಗಿ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಅಭ್ಯರ್ಥಿ ಎಂಬ ಅಭಿನಯ: ಮಾಜಿ ಸಂಸದ ಸಿ.ಎಚ್‌. ವಿಜಯಶಂಕರ್‌ ಹುಣಸೂರಿನಲ್ಲಿ ಕಚೇರಿ ತೆರೆದಿದ್ದಾರೆ. ಅವರೂ ಅಭ್ಯರ್ಥಿಯಾಗಬಹುದೇ ಎಂಬುದನ್ನು ಪತ್ರಿಕೆಯಲ್ಲಿ ಬಂದಿರುವುದನ್ನು ಗಮನಿಸಿದೆ. ಅವರೇ ಅಭ್ಯರ್ಥಿ ಎಂದು ಅಭಿನಯ ಮಾಡಿ ಮತ್ತೂಬ್ಬರಿಗೆ ನೆರವಾಗುತ್ತರೋ, ಏನೇನು ಕದಿದೆಯೋ ನೋಡಬೇಕೆಂದರು.

370ನೇ ವಿಧಿ ರದ್ದತಿ ಸ್ವಾಗತ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದತಿಯನ್ನು ಸ್ವಾಗತಿಸಿದ ಅವರು, ದೇಶವೆಂದರೆ ಎಲ್ಲವೂ ಒಂದೇ ಎಂಬಂತಾಗಿದ್ದು, ದೇಶದ ಸಂಪತ್ತು ಸಮಾನವಾಗಿ ಹಂಚುವ ಕಾನೂನು ಪುನರಾವರ್ತನೆಯಾಗಲಿದೆ ಎಂದರು.

ಟಿಪ್ಪು ಜಯಂತಿ ರದ್ದು ಸರಿಯಲ್ಲ: ಬಿಜೆಪಿ ಸರ್ಕಾರ‌ ಟಿಪ್ಪು ಜಯಂತಿಯನ್ನು ರದ್ದು ಪಡಿಸಿರುವುದು ಸರಿಯಲ್ಲ, ಆದರೆ ಈ ಹಿಂದೆ ನಡೆದ ಟಿಪ್ಪು ಜಯಂತಿ ವೇಳೆ ಕೊಡಗಿನಲ್ಲಿ ಸಂಭವಿಸಿದ ಇಬ್ಬರ ಸಾವಿನಂತಹ ಅಹಿತಕರ ಘಟನೆಯಿಂದ ರದ್ದು ಮಾಡಿರು ಸಾಧ್ಯತೆ ಇದೆ.

ಇದೇ ರೀತಿ ಇನ್ನು 36 ಜಯಂತಿಗಳು ನಡೆಯುತ್ತಿದ್ದು, ಇದರಿಂದ ಮಾನವ ಶಕ್ತಿ, ಸಂಪನ್ಮೂಲಗಳು ಹಾಳಾಗುತ್ತಿದ್ದು, ಈ ಬಗ್ಗೆ ಜಯಂತಿಗಳನ್ನೇ ರದ್ದು ಪಡಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಶಿವಕುಮಾರ್‌, ಮುಖಂಡರಾದ ಹರಿಹರ ಆನಂದಸ್ವಾಮಿ, ಕುನ್ನೇಗೌಡ, ಶಿವಶೇಖರ್‌ ಇತರರಿದ್ದರು.

ಮತ್ತಷ್ಟು ಶಾಸಕರು ಹೊರಬರಲಿದ್ದಾರೆ: ಮತ್ತಷ್ಟು ಮಂದಿ ಶಾಸಕರು ಕಾಂಗ್ರೆಸ್‌-ಜೆಡಿಎಸ್‌ ಪಕ್ಷದಿಂದ ಹೊರಬರುವರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಚ್‌.ವಿಶ್ವನಾಥ್‌, ಹಿಂದಿನ ಸರ್ಕಾರದ ಅವಧಿ ಯಲ್ಲಿ ಕೊನೆಯ ಆರು ತಿಂಗಳು ಸರಕಾರವೇ ಇರಲಿಲ್ಲ, ಬಹಳಷ್ಟು ಮಂದಿಗೆ ಬೇಗುದಿ ಇದೆ. ಕಾವು ಹೆಚ್ಚಾಗಿ ಮತ್ತಷ್ಟು ಮಂದಿ ಹೊರಬರಬಹುದೆಂದು ತಿಳಿಸಿದರು.

ಮಾಜಿ ಸಚಿವ ಜಿ.ಟಿ.ದೇವೇಗೌಡರು ಹೇಳಿರುವುದರಲ್ಲಿ ಸತ್ಯವಿದೆ. ಅವರು ಕೆಳಸ್ತರದಿಂದ ರಾಜಕೀಯದ ನೋವು ನಲಿವು ಕಂಡವರು. ಗಾಡ್‌ಫಾದರ್‌ ಇರಲಿಲ್ಲ, ನಾಮಕಾವಸ್ತೆಗೆ ಜಿಟಿಡಿ ಜಿಲ್ಲಾ ಮಂತ್ರಿಯಾಗಿದ್ದರು. ಅವರು ಕೂಡ ಬೇಸತ್ತಿದ್ದರು. ಇದೀಗ ಸಾರ್ವಜನಿಕವಾಗಿ ವಸ್ತುಸ್ಥಿತಿ ಹೇಳಿಕೊಳ್ಳುತ್ತಿದ್ದಾರೆಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಧಿಕಾರಿಗಳ ಸಭೆಗೆ ವಿಶ್ವನಾಥ್‌ ಸಮರ್ಥನೆ: ಸಂವಿಧಾನದ ಚೌಕಟ್ಟಿನಲ್ಲೇ ತಾವು ಅಧಿಕಾರಿಗಳ ಸಭೆ ನಡೆಸಿದ್ದು, ತಪ್ಪೆಂದು ಭಾವಿಸುವ ಅಗತ್ಯವಿಲ್ಲ. ತಾನೊಬ್ಬ ಮಾಜಿ ಮಂತ್ರಿ, ಸಂಸದ, ಶಾಸಕನಾಗಿದ್ದು, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಕರೆದು ಚರ್ಚಿಸಿದ್ದೇನೆ. ಇದೇನು ತಪ್ಪಲ್ಲ. ಮಾಜಿ ಶಾಸಕರೂ ಕೂಡ ಅಧಿಕಾರಿಗಳ ಸಭೆ ನಡೆಸಬಹುದೆಂದು ಎಚ್‌.ವಿಶ್ವನಾಥ್‌ ಸಮರ್ಥಿಸಿಕೊಂಡರು.

ತಾವು ಹಿರಿಯ, ಅನುಭವಿಯಾಗಿದ್ದು, ಯಾವುದೇ ಸರ್ಕಾರವಿದ್ದರೂ ಸಾಕಷ್ಟು ಕೆಲಸ ಮಾಡುವ ಶಕ್ತಿ ಇದೆ. ಈ ಹಿಂದೆ ಮಂಜೂರಾಗಿದ್ದ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ, ಸೆಸ್ಕ್ ಎಸ್‌ಇ ಕಚೇರಿಗಳ ಮಂಜೂರಾತಿ ರಾಜಕೀಯ ಕಾರಣಕ್ಕಾಗಿ ರದ್ದು ಪಡಿಸಿದ್ದು, ಮುಂದೆ ಮರು ಮಂಜೂರು ಮಾಡಿಸುತ್ತೇನೆಂದು ತಿಳಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.