ಮಳೆ ಕೊಯ್ಲಿಗೆ 10 ಕಟ್ಟಡ ಗುರ್ತಿಸಿ

ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ: ಡೀಸಿ ಮಂಜುನಾಥ್‌

Team Udayavani, Aug 7, 2019, 3:13 PM IST

kolar-tdy-3

•ಕೋಲಾರ ಜಿಲ್ಲೆಯಲ್ಲಿ ಜೂನ್‌, ಜುಲೈನಲ್ಲಿ ವಾಡಿಕೆ ಮಳೆಗಿಂತ ಶೇ.20 ಕೊರತೆ: ಜಿಲ್ಲಾಧಿಕಾರಿ ಮಂಜುನಾಥ್‌

ಕೋಲಾರ: ಜಲಶಕ್ತಿ ಅಭಿಯಾನದಡಿ ಮಳೆ ನೀರು ಸಂರಕ್ಷಣೆಗೆ ಒತ್ತು ನೀಡಿ, ಜಿಲ್ಲೆಯ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಇಲಾಖೆ ಅನುದಾನದಲ್ಲಿ ಮಳೆಕೊಯ್ಲು ಅಳವಡಿಸಿಕೊಳ್ಳಬೇಕು ಎಂಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಅನುದಾನ ಲಭ್ಯವಿರದಿದ್ದರೆ ಪಟ್ಟಿಸಿದ್ಧಪಡಿಸಿ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಜಲಶಕ್ತಿ ಅಭಿಯಾನದಡಿ ಮಳೆ ನೀರು ಇಂಗಿಸುವುದು, ಸಸಿ ನೆಡುವುದು, ಕೆರೆ, ಕಲ್ಯಾಣಿ ಪುನಶ್ಚೇತನಕ್ಕೆ ಒತ್ತು ನೀಡಲಾಗುವುದು ಎಂದರು.

ಮಳೆ ನೀರು ಕೊಯ್ಲು ಅಳವಡಿಸಿ: ಜಿಲ್ಲೆಯ ಪ್ರತಿ ತಾಲೂಕಿಲ್ಲೂ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳು ಒಂದು ಕೆರೆ, ಕಾಲುವೆ ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್‌ಗೆ ಸೂಚಿಸಲಾಗಿದ್ದು, ಚಾಲನೆ ನೀಡಲಾಗಿದೆ. ಅಂಗನವಾಡಿಯಿಂದ ಹಿಡಿದು ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳಲ್ಲಿ ಮಳೆ ಕೊಯ್ಲು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

10 ಕಟ್ಟಡ ಗುರುತಿಸಿ: ಯಾವ್ಯಾವ ಕಟ್ಟಡದಲ್ಲಿ ವ್ಯವಸ್ಥೆ ಇದೆ, ಇಲ್ಲ ಎಂಬುದನ್ನು ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಆಯಾ ಇಲಾಖೆಗಳಲ್ಲಿ ಅನುದಾನ ಲಭ್ಯವಿರದಿದ್ದರೆ ವಿಶೇಷ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದ ಅವರು, ಖಾಸಗಿ ಕಟ್ಟಡಗಳಾದ ಕಲ್ಯಾಣ ಮಂಟಪ, ಬೃಹತ್‌ ವಾಣಿಜ್ಯ ಮಳಿಗೆಗಳಲ್ಲಿ ಅಳವಡಿಸಿಕೊಳ್ಳಬೇಕು, ಈ ಬಗ್ಗೆ ಟಾಪ್‌ 10 ಕಟ್ಟಡ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಸಸಿ ಪೂರೈಸಿ: ಕೆಜಿಎಫ್‌ನ ಬೆಮೆಲ್ನಲ್ಲಿ 6500 ಕಾರ್ಮಿಕರಿದ್ದಾರೆ. ಪ್ರತಿ ಇಬ್ಬರು ಒಂದೊಂದು ಸಸಿ ನೆಟ್ಟರೆ 6500 ಸಸಿಗಳನ್ನು ಬೆಳೆಸಬಹುದು. ಈ ದಿಸೆಯಲ್ಲಿ ಅಗತ್ಯ ಸಸಿಗಳನ್ನು ಪೂರೈಸುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಹೇಳಿದರು.

ಟ್ಯಾಂಕರ್‌ ನೀರು ಪೂರೈಕೆ: ಜಿಲ್ಲೆಯ 143 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 71 ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನಿತ್ಯ 181 ಟ್ರಿಪ್‌ ನೀರು ಸರಬರಾಜು ಮಾಡಲಾಗುತ್ತಿದೆ. 72 ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನಗರ, ಪುರಸಭೆ ವ್ಯಾಪ್ತಿಯ 28 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಇದ್ದು, 25 ಟ್ಯಾಂಕರ್‌ಗಳಲ್ಲಿ ನಿತ್ಯ 105 ಟ್ರಿಪ್‌ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಖಾಸಗಿ ಬೋರ್‌ವೆಲ್ಗೆ ಅವಕಾಶವಿಲ್ಲ: ಹೊಸ ಬೋರ್‌ವೆಲ್ ಕೊರೆಯಿಸಿದರೂ ಸಫಲತೆ ಪ್ರಮಾಣ ಕಡಿಮೆಯಾದ್ದರಿಂದ ಅವಕಾಶ ಇದ್ದೆಡೆ ಬೋರ್‌ವೆಲ್ ಕೊರೆಯಿಸಲು ಸೂಚಿಸಲಾಗಿದೆ. ಸಾರ್ವಜನಿಕ ಬಳಕೆಗೆ, ಗಂಗಾಕಲ್ಯಾಣ ಯೋಜನೆಯಡಿ ಬೋರ್‌ವೆಲ್ ಕೊರೆಯಿಸಲು ಅನುಮತಿ ನೀಡಲಾಗಿದೆ. ಖಾಸಗಿಯಾಗಿ ಬೋರ್‌ವೆಲ್ ಕೊರೆಯಿಸಲು ಅನುಮತಿ ನೀಡುತ್ತಿಲ್ಲ. ಈ ಬಗ್ಗೆ ರಿಗ್‌ಮಾಲಿಕರಿಗೂ ಸೂಚನೆ ನೀಡಲಾಗಿದೆ ಎಂದರು. ಕಳೆದ ವರ್ಷ ಜಿಲ್ಲೆಯ ಎಲ್ಲ 6 ತಾಲೂಕುಗಳಲ್ಲೂ ಬರಪೀಡಿತವಾಗಿತ್ತು. ಈ ವರ್ಷವೂ ಜೂನ್‌, ಜುಲೈನಲ್ಲಿ ವಾಡಿಕೆ ಮಳೆಗಿಂತ ಶೇ.20 ಕೊರತೆ ಎದುರಾಗಿರುವುದ ರಿಂದ ಬರ ನಿರ್ವಹಣೆ ಮುಂದುವರಿಸುವಂತೆ ಸರ್ಕಾರ ಸೂಚಿಸಿದೆ ಎಂದರು.

ರಾಜ್ಯದ 65 ತಾಲೂಕುಗಳಲ್ಲಿ ತೀವ್ರ ಬರದ ಪರಿಸ್ಥಿತಿ ಇರುವ ತಾಲೂಕುಗಳ ಪೈಕಿ ಜಿಲ್ಲೆಯ ಮಾಲೂರು ಮತ್ತು ಬಂಗಾರ ಪೇಟೆಯನ್ನು ಗುರುತಿಸಲಾಗಿದೆ. ಜಿಲ್ಲೆ ಯಲ್ಲಿ 13 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿದ್ದರೂ ತೊಂದರೆ ಆಗದಂತೆ ಈ ಎರಡು ತಾಲೂಕುಗಳಲ್ಲಿ ಗೋಶಾಲೆ ತೆರೆ ಯುವಂತೆ ಅಥವಾ ಸ್ವಯಂಸೇನಾ ಸಂಸ್ಥೆಗಳು ನಡೆಸುತ್ತಿರುವ ಗೋ ಶಾಲೆಯಲ್ಲಿ ವ್ಯವಸ್ಥೆ ಮಾಡುವಂತೆ ಸರ್ಕಾರ ನಿರ್ದೇಶನ ನೀಡಿದೆ ಎಂದು ಜಿಲ್ಲಾಧಿಕಾರಿ ಮಂಜು ನಾಥ್‌ ತಿಳಿಸಿದರು.

ಮಾಲೂರಿನ ಗಂಗಾಪುರದಲ್ಲಿ ರಾಘ ವೇಂದ್ರ ಗೋ ಆಶ್ರಮ ಹಾಗೂ ಬಂಗಾರ ಪೇಟೆಯ ಬ್ಯಾಟರಾಯನಪುರದಲ್ಲಿನ ನಂದಿ ಗೋಶಾಲೆ ಇರುವುದರಿಂದ ಇವರ ಮೂಲಕ ಸ್ಥಳೀಯ ಗ್ರಾಮಗಳ ರೈತರ ಜಾನುವಾರುಗಳಿಗೆ ಮೇವು, ನೀರು ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ಜಾನು ವಾರಿಗೆ ದಿನಕ್ಕೆ 70 ರೂ.ನಂತೆ ಸರ್ಕಾರ ವೆಚ್ಚ ಭರಿಸುತ್ತದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಿದರು.

ಮೇವಿನ ಕೊರತೆ ನೀಗಿಸಲು ನೀರಿನ ಸೌಲಭ್ಯವುಳ್ಳ ರೈತರಿಗೆ ಮಿನಿ ಕಿಟ್ ನೀಡಲಾಗುವುದು, ಕೆ.ಸಿ. ವ್ಯಾಲಿ ವ್ಯಾಪ್ತಿಯ ರೈತರಿಗೆ ಮೇವು ಬೆಳೆಸಲು ಪ್ರೋತ್ಸಾಹ ನೀಡಲಾಗುವುದು ಎಂದ ಅವರು, ಈ ಭಾಗದಿಂದ ಹೊರ ರಾಜ್ಯಗಳಿಗೆ ಮೇವು ಸರಬರಾಜು ನಿಷೇಧ ಮುಂದುವರಿದಿದೆ ಎಂದರು.

ಮಾಲೂರು, ಬಂಗಾರಪೇಟೆ ತೀವ್ರ ಬರ ತಾಲೂಕು:

ರಾಜ್ಯದ 65 ತಾಲೂಕುಗಳಲ್ಲಿ ತೀವ್ರ ಬರದ ಪರಿಸ್ಥಿತಿ ಇರುವ ತಾಲೂಕುಗಳ ಪೈಕಿ ಜಿಲ್ಲೆಯ ಮಾಲೂರು ಮತ್ತು ಬಂಗಾರ ಪೇಟೆಯನ್ನು ಗುರುತಿಸಲಾಗಿದೆ. ಜಿಲ್ಲೆ ಯಲ್ಲಿ 13 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿದ್ದರೂ ತೊಂದರೆ ಆಗದಂತೆ ಈ ಎರಡು ತಾಲೂಕುಗಳಲ್ಲಿ ಗೋಶಾಲೆ ತೆರೆ ಯುವಂತೆ ಅಥವಾ ಸ್ವಯಂಸೇನಾ ಸಂಸ್ಥೆಗಳು ನಡೆಸುತ್ತಿರುವ ಗೋ ಶಾಲೆಯಲ್ಲಿ ವ್ಯವಸ್ಥೆ ಮಾಡುವಂತೆ ಸರ್ಕಾರ ನಿರ್ದೇಶನ ನೀಡಿದೆ ಎಂದು ಜಿಲ್ಲಾಧಿಕಾರಿ ಮಂಜು ನಾಥ್‌ ತಿಳಿಸಿದರು. ಮಾಲೂರಿನ ಗಂಗಾಪುರದಲ್ಲಿ ರಾಘ ವೇಂದ್ರ ಗೋ ಆಶ್ರಮ ಹಾಗೂ ಬಂಗಾರ ಪೇಟೆಯ ಬ್ಯಾಟರಾಯನಪುರದಲ್ಲಿನ ನಂದಿ ಗೋಶಾಲೆ ಇರುವುದರಿಂದ ಇವರ ಮೂಲಕ ಸ್ಥಳೀಯ ಗ್ರಾಮಗಳ ರೈತರ ಜಾನುವಾರುಗಳಿಗೆ ಮೇವು, ನೀರು ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ಜಾನು ವಾರಿಗೆ ದಿನಕ್ಕೆ 70 ರೂ.ನಂತೆ ಸರ್ಕಾರ ವೆಚ್ಚ ಭರಿಸುತ್ತದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಿದರು. ಮೇವಿನ ಕೊರತೆ ನೀಗಿಸಲು ನೀರಿನ ಸೌಲಭ್ಯವುಳ್ಳ ರೈತರಿಗೆ ಮಿನಿ ಕಿಟ್ ನೀಡಲಾಗುವುದು, ಕೆ.ಸಿ. ವ್ಯಾಲಿ ವ್ಯಾಪ್ತಿಯ ರೈತರಿಗೆ ಮೇವು ಬೆಳೆಸಲು ಪ್ರೋತ್ಸಾಹ ನೀಡಲಾಗುವುದು ಎಂದ ಅವರು, ಈ ಭಾಗದಿಂದ ಹೊರ ರಾಜ್ಯಗಳಿಗೆ ಮೇವು ಸರಬರಾಜು ನಿಷೇಧ ಮುಂದುವರಿದಿದೆ ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.