ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಪತ್ತೆ ದಳದಿಂದ ಪರಿಶೀಲನೆ
Team Udayavani, Aug 7, 2019, 3:37 PM IST
ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಪತ್ತೆ ದಳದ ಸಿಬ್ಬಂದಿ ಶ್ವಾನದೊಂದಿಗೆ ಪರಿಶೀಲನೆ ನಡೆಸಿದರು.
ಶ್ರೀರಂಗಪಟ್ಟಣ: ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಹಿನ್ನೆಲೆ ರೈಲು ನಿಲ್ದಾಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಬಾಂಬ್ ಪತ್ತೆ ತಂಡದ ಸಿಬ್ಬಂದಿ ಶ್ವಾನುನೊಂದಿಗೆ ಪರಿಶೀಲನೆ ಮಾಡಿದರು.
ರೈಲ್ವೆ ನಿಲ್ದಾಣದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಜಾಗೃತಗೊಳಿಸಲು ಮಂಡ್ಯದ ಎಎಸ್ಸಿ ತಂಡ ಶ್ವಾನದೊಂದಿಗೆ ಆಗಮಿಸಿ, ರೈಲ್ವೆ ಹಳಿ, ವಿಶ್ರಾಂತಿ ಕೊಠಡಿ, ಕಸದ ಬುಟ್ಟಿ, ಅನುಮಾನಾಸ್ಪದ ಬ್ಯಾಗ್, ಪ್ರಯಾಣಿಕರು ತರುವ ಬ್ಯಾಗ್ ಸೇರಿದಂತೆ ಇತರ ನಿಲ್ದಾಣದ ಸುತ್ತಲು ಪರಿಶೀಲನೆ ನಡೆಸಿದರು.
ತಂಡದ ಬೆಟ್ಟಸ್ವಾಮಿ ಮಾತನಾಡಿ, ಪ್ರತಿ ತಿಂಗಳು ಅಥವಾ ವಾರದಲ್ಲೊಮ್ಮೆ ಜಿಲ್ಲೆಯ ಎಲ್ಲಾ ರೈಲ್ವೆ ನಿಲ್ದಾಣಗಳಿಗೂ ಭೇಟಿ ನೀಡಿ ಪ್ರಯಾಣಿಕರ ಹಿತಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸಲಾಗುತ್ತದೆ. ಜಿಲ್ಲೆಯ ಎಲ್ಲಾ ನಿಲ್ದಾಣಗಳಲ್ಲೂ ಬಾಂಬ್ ಪತ್ತೆ ಹಾಗೂ ಶ್ವಾನಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತದೆ ಎಂದು ಹೇಳಿದರು. ಈ ವೇಳೆ ರಾಜು, ಮಂಜುನಾಥ್ ಮತ್ತಿತತರ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.