ಮುಖ್ಯಮಂತ್ರಿಗಳ ವೈಜ್ಞಾನಿಕ ಸಮೀಕ್ಷೆಗೆ ತಿಮ್ಮಾಪುರ ಲೇವಡಿ


Team Udayavani, Aug 7, 2019, 4:50 PM IST

bk-tdy-4

ಮುಧೋಳ: ನಗರದ ಮುಧೋಳ-ಯಾದವಾಡ ಬ್ರಿಜ್‌ ಬಳಿ ಮಾಜಿ ಸಚಿವ ಆರ್‌.ಬಿ. ತಿಮ್ಮಾಪುರ ನೀರಿನ ಹರಿವು ವೀಕ್ಷಿಸಿದರು.

ಮುಧೋಳ: ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ಜನರ ಕುಂದುಕೊರತೆ, ಕಷ್ಟಕಾರ್ಪಣ್ಯಗಳ ಬಗ್ಗೆ ಖುದ್ದಾಗಿ ಪರಿಶೀಲಿಸದೇ ವೈಮಾನಿಕ ಸಮೀಕ್ಷೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿರುವುದನ್ನು ವಿಧಾನ ಪರಿಷತ್‌ ಸದಸ್ಯ, ಮಾಜಿ ಸಚಿವ ಆರ್‌.ಬಿ. ತಿಮ್ಮಾಪುರ ಲೇವಡಿ ಮಾಡಿದರು.

ತಾಲೂಕಿನ ವಿವಿಧ ಬ್ಯಾರೇಜ್‌ಗಳು, ಪ್ರವಾಹ ಪೀಡಿತವಾಗಲಿರುವ ಗ್ರಾಮಗಳು ಹಾಗೂ ಗಂಜಿ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಅವರು ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆಯ ಗುಂಗಿನಲ್ಲಿರುವ ಮುಖ್ಯಮಂತ್ರಿಗಳಿಗೆ ಜನಸಾಮಾನ್ಯರ ನೋವು ಕಣ್ಣಿಗೆ ಕಾಣುತ್ತಿಲ್ಲ. ತೀವ್ರ ಬರಗಾಲದಿಂದ ಕಂಗೆಟ್ಟಿದ್ದ ಜನತೆ ಈಗ ಪ್ರವಾಹದಿಂದ ಎಲ್ಲವನ್ನೂ ಕಳೆದುಕೊಂಡು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವಾಗ ಮುಖ್ಯಮಂತ್ರಿಗಳು ಪರಿಸ್ಥಿತಿಯ ತೀವ್ರತೆ ಮರೆತು ದೆಹಲಿಗೆ ತೆರಳಿರುವುದು ದುರದೃಷ್ಟಕರ ಸಂಗತಿ ಎಂದರು.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೋಯ್ನಾ ಆಣೆಕಟ್ಟಿನಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹರಿಬಿಡಲಾಗುತ್ತಿದ್ದು, ಇದರಿಂದ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಬೆಳಗಾವಿ

ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯ ತುಂಬಿದೆ. ಹೆಚ್ಚುವರಿ ನೀರನ್ನು ಘಟಪ್ರಭಾ ನದಿಗೆ ಬಿಡಲಾಗಿದೆ. ಈಗ 16 ಗ್ರಾಮಗಳು ನೆರೆಹಾವಳಿಗೆ ತುತ್ತಾಗಲಿವೆ ಎಂದು ಅಂದಾಜಿಸಲಾಗಿದ್ದರೂ ಇನ್ನೂ ಹೆಚ್ಚಿನ ಗ್ರಾಮಗಳು ಪ್ರವಾಹಕ್ಕೀಡಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

ಚನ್ನಾಳ, ಮಿರ್ಜಿ, ಒಂಟಗೋಡಿ, ಮಳಲಿ, ಕಸಬಾಜಂಬಗಿ, ತಿಮ್ಮಾಪುರ, ಢವಳೇಶ್ವರ, ನಂದಗಾಂವ, ಮಲ್ಲಾಪುರ, ಜಾಲಿಬೇರ, ಇಂಗಳಗಿ, ಮಾಚಕನೂರ, ಆಲಗುಂಡಿ ಬಿಕೆ ಸೇರಿದಂತೆ ಅನೇಕ ನದಿಪಾತ್ರದ ಗ್ರಾಮಗಳು ಪ್ರವಾಹಕ್ಕೀಡಾಗಲಿವೆ. ಅಲ್ಲದೇ ಮುಧೋಳ ನಗರದ ಕುಂಬಾರ ಓಣಿ, ಕಾಂಬಳೆ ಗಲ್ಲಿ ಸೇರಿದಂತೆ ಇನ್ನುಳಿದ ತೆಗ್ಗು ಪ್ರದೇಶಗಳಿಗೂ ನೀರು ನುಗ್ಗುವ ಅಪಾಯವಿದೆ ಎಂದು ತಿಳಿಸಿದರು.

ತಾಪಂ ಅಧ್ಯಕ್ಷ ತಿಮ್ಮಣ್ಣ ಬಟಕುರ್ಕಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ ನಾಯಕ, ರಾಜುಗೌಡ ಪಾಟೀಲ, ಉದಯ, ಸದುಗೌಡ ಪಾಟೀಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.