ವಿಪತ್ತು ನಿರ್ವಹಣೆ ನಿಭಾವಣೆಗೆ ಡೀಸೆಲ್, ಸಿಬಂದಿ ಕೊರತೆ


Team Udayavani, Aug 8, 2019, 5:17 AM IST

p-12

ಸುಬ್ರಹ್ಮಣ್ಯ: ಮಳೆ ತೀವ್ರಗೊಂಡಂತೆ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿ ಸನ್ನದ್ಧ ಸ್ಥಿತಿಯಲ್ಲಿರಲು ಅಧಿಕಾರಿಗಳಿಗೆ, ನಾಗರಿಕರಿಗೆ ಸೂಚಿಸಿದೆ.

ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ವಿಪತ್ತು ನಿರ್ವಹಣೆಯ ತುರ್ತು ಘಟಕ, ಸಹಾಯವಾಣಿ ತೆರೆದಿದೆ. ಆದರೆ ಗ್ರಾಮೀಣ ಭಾಗದ ಅನೇಕ ಕಡೆಗಳಲ್ಲಿ ಮೊಬೈಲ್ ಸಿಗ್ನಲ್ ಸಿಗುತ್ತಿಲ್ಲ. ಹೀಗಾಗಿ ತುರ್ತು ಸಂದರ್ಭಕ್ಕೆ ನಾಗರಿಕರ ಸಹಿತ ನಿಯೋಜಿತ ಅಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ.

ಸಂಪರ್ಕ ಸಾಧ್ಯವಾಗುತ್ತಿಲ್ಲ
ಗ್ರಾಮೀಣ ಪ್ರದೇಶದಲ್ಲಿ ಮಳೆ ತೀವ್ರತೆಯಿಂದ ಪ್ರಾಕೃತಿಕ ವಿಕೋಪ ಸಂಭವಿಸಿ ವಿದ್ಯುತ್‌ ವ್ಯತ್ಯಯಗಳಿಂದ ಸಮಸ್ಯೆ ಒಂದೆಡೆಯಾದರೆ, ಮತ್ತೂಂದೆಡೆ ಮೊಬೈಲ್ ಸಿಗ್ನಲ್ ಸಿಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ತುರ್ತು ಸಂದರ್ಭಕ್ಕೆ ಯಾವುದೇ ಸಂಪರ್ಕ ಸಾಧ್ಯವಾಗುತ್ತಿಲ್ಲ. ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್ ಅಧಿಕಾರಿಗಳು ಬಿಎಸ್ಸೆನ್ನೆಲ್ ಸೇವೆ ಮಾತ್ರ ಇರುವ ಕಡೆಗಳಲ್ಲೂ ಮಳೆಗಾಲದ ಬಗ್ಗೆ ಪೂರ್ವ ತಯಾರಿ ಮಾಡಿಲ್ಲ. ಹೀಗಾಗಿ ಬಿಎಸ್ಸೆನ್ನೆಲ್ ಅವಲಂಬಿತ ಗ್ರಾಮೀಣ ಜನತೆ ತುರ್ತು ಸಂದರ್ಭಗಳಲ್ಲಿ ಸಂಪರ್ಕ ಸಾಧ್ಯವಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಜಿಲ್ಲಾಡಳಿತ ಗಮನಹರಿಸಲಿ
ಆಪತ್ತು ಎದುರಿಸಲು ನಿರ್ಜೀವ ಬಿಎಸ್ಸೆನ್ನೆಲ್ ಮೊಬೈಲ್ ಸ್ಥಾವರಗಳ ಕೇಂದ್ರಗಳಿಗೆ ಸಿಬಂದಿ ಮತ್ತು ಅಗತ್ಯ ಡೀಸೆಲ್ ಪೂರೈಕೆ ಮಾಡಿ ತುರ್ತು ಸಂದರ್ಭಕ್ಕೆ ಇದರ ಪ್ರಯೋಜನ ಪಡೆಯಬೇಕಿತ್ತು. ಆದರೆ ಈ ಬಗ್ಗೆ ಬಿಎಸ್ಸೆನ್ನೆಲ್ ಗಮನವನ್ನೇ ನೀಡಿಲ್ಲ. ಆರ್ಥಿಕ ನಷ್ಟ, ಡೀಸೆಲ್ ಪೂರೈಕೆ ಇಲ್ಲ ಎನ್ನುತ್ತಿದ್ದಾರೆ. ಕೆಲವು ದಿನಗಳ ಮಟ್ಟಿಗಾದರೂ ಈ ವ್ಯವಸೆಯನ್ನು ನಿಗಮದ ಅಧಿಕಾರಿಗಳು ಮಾಡಿಕೊಳ್ಳಬೇಕಿತ್ತು. ಜಿಲ್ಲಾಡಳಿತವಾದರೂ ಸಿಬಂದಿ, ಡೀಸೆಲ್ ಒದಗಿಸಿ ಮಳೆಗಾಲದ ನಿರ್ವಹಣೆ ನಡೆಸದೇ ಇದ್ದಲ್ಲಿ ಗ್ರಾಮೀಣ ಭಾಗದಲ್ಲಿ ಕಷ್ಟವಾಗಬಹುದು.

ಕಳೆದ ಬಾರಿ ಭೂಕುಸಿತ ನಡೆದ ಕಲ್ಮಕಾರು ಮತ್ತು ಕೊಲ್ಲಮೊಗ್ರು, ಹರಿಹರದಲ್ಲಿ ಕಾರ್ಯಾಚರಿಸುತ್ತಿರುವ ದೂರವಾಣಿ ಕೇಂದ್ರಗಳ ಮೊಬೈಲ್ ಸಂಪರ್ಕ ಮೂರು ದಿನಗಳಿಂದ ಸ್ತಬ್ಧಗೊಂಡಿವೆ.

ಇನ್ನು ಸುಬ್ರಹ್ಮಣ್ಯ ಸಹಿತ ಪಂಜ, ನಾಲ್ಕೂರು, ಯೇನೆಕಲ್ಲು, ಮಡಪ್ಪಾಡಿ ಮೊದಲಾದ ಗ್ರಾಮಗಳಲ್ಲಿಯೂ ಸಿಗ್ನಲ್ ಸಮಸ್ಯೆಯಿದೆ.

ಅಧಿಕಾರಿಗಳ ಸಂಪರ್ಕವೂ ಸಾಧ್ಯವಿಲ್ಲ
ಕಾಡಿನೊಳ‌ಗೆ ಹಾದು ಹೋದ ವಿದ್ಯುತ್‌ ಮಾರ್ಗಗಳಲ್ಲಿ ಮರ, ಮರದ ಗೆಲ್ಲುಗಳು ಲೈನ್‌ ಮೇಲೆ ಬಿದ್ದು ತಂತಿಗಳು ತುಂಡಾಗಿ ವಿದ್ಯುತ್‌ ಸರಬರಾಜು ಸ್ಥಗಿತಗೊಳ್ಳುತ್ತಿದೆ. ವಿದ್ಯುತ್ತಿಲ್ಲದಿದ್ದರೆ ಮೊಬೈಲ್ ಟವರ್‌ಗಳೂ ಸ್ತಬ್ಧವಾಗುತ್ತಿವೆ. ದಿನಪೂರ್ತಿ ಸಿಗ್ನಲ್ ನಾಪತ್ತೆಯಾಗಿ, ಅವಘಡಗಳು ಸಂಭವಿಸಿ ದಾಗಲೂ ಸಂಪರ್ಕ ಸಾಧ್ಯವಾಗುತ್ತಿಲ್ಲ. ವಿಪತ್ತು ನಿರ್ವಹಣೆಗೆಂದು ನಿಯೋಜಿತ ಬಹುತೇಕ ಅಧಿಕಾರಿಗಳು ಬಿಎಸ್ಸೆನ್ನೆಲ್ ಸಿಮ್‌ ಹೊಂದಿದ್ದಾರೆ. ಅವರು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಬಿಎಸ್ಸೆನ್ನೆಲ್ ಸೇವೆ ಮಾತ್ರವಿದೆ. ಅವರಿಗೂ ಸಿಗ್ನಲ್ ಸಮಸ್ಯೆ ಕಾಡಬಹುದು.ಕೊಲ್ಲಮೊಗ್ರು, ಹರಿಹರ, ಕಲ್ಮಕಾರು, ಬಾಳುಗೋಡು, ಐನಕಿದು, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಬಿಎಸ್ಸೆನ್ನೆಲ್ ಟವರ್‌ ಮಾತ್ರವಿದೆ. ಇಂತಹ ಕಡೆಗಳಲ್ಲಿ ಕರ್ತವ್ಯ ನಿರತ ಅಧಿಕಾರಿ ಗಳು ಸಮಸ್ಯೆಗೆ ಒಳಗಾಗಲಿದ್ದಾರೆ. ಘಟನೆಗಳು ನಡೆದಾಗ ಮತ್ತು ಮಳೆ ತೀವ್ರತೆಯ ಮಾಹಿತಿಗಳನ್ನು ತತ್‌ಕ್ಷಣಕ್ಕೆ ಮೇಲಧಿಕಾರಿಗಳಿಗೆ ನೀಡಲು ಸಾಧ್ಯವಾಗುವುದಿಲ್ಲ.

ಜಿಲ್ಲಾಡಳಿತ ಡೀಸೆಲ್ ಪೂರೈಸಲಿ
ಮೊಬೈಲ್ ಸಿಗ್ನಲೇ ಇಲ್ಲದ ಮೇಲೆ ಬೇರೆ ವ್ಯವಸ್ಥೆ ಮಾಡಿಯೂ ಉಪಯೋಗವಿಲ್ಲ ಎನ್ನುವುದು ಕೊಲ್ಲಮೊಗ್ರು, ಹರಿಹರ ಭಾಗದ ನಾಗರಿಕರ ಅಳಲು. ಮಳೆ ತೀವ್ರವಾಗಿದ್ದು, ಕೆಲವು ದಿನಗಳ ಮಟ್ಟಿಗಾದರೂ ಗ್ರಾಮೀಣ ಭಾಗದ ಮೊಬೈಲ್ ಟವರ್‌ಗಳಿಗೆ ಸಿಬಂದಿ ನೇಮಿಸಿ ಅಂತಹ ಕೇಂದ್ರಗಳಿಗೆ ಡೀಸೆಲ್ ಅನ್ನು ಜಿಲ್ಲಾಡಳಿತದಿಂದ ಪೂರೈಸಿ ಘಟಕಗಳು ಕಾರ್ಯಾಚರಿಸುವಂತೆ ಮಾಡಬೇಕು ಎಂದು ಆ ಭಾಗದ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತುರ್ತು ಸೇವೆಗಳಿಗೆ ಮೊಬೈಲ್ ಸಿಗ್ನಲ್ ದೊರಕದೆ ಭಾರೀ ಸಮಸ್ಯೆಯಾಗುತ್ತಿದೆ. ವಿದ್ಯುತ್‌, ಮೊಬೈಲ್ ಸೇವೆ ಎರಡೂ ಇಲ್ಲದೆ ಜನರನ್ನು ಕತ್ತಲಿನಲ್ಲಿ ಕೂಡಿಟ್ಟಂತಾಗಿದೆ. ಟವರ್‌ಗಳ ಕಾರ್ಯಾಚರಣೆಗೆ ಡೀಸೆಲ್ ಸರಬರಾಜು ಇಲ್ಲದೆ ಸ್ಥಗಿತಗೊಂಡಿರುವ ಕಾರಣ ಸೊತ್ತುಗಳು ಕೂಡ ತುಕ್ಕು ಹಿಡಿಯುತ್ತಿವೆ.

ಎ.ಸಿ. ಗಮನಕ್ಕೆ ತರುವೆ

ವಿಪತ್ತು ನಿರ್ವಹಣೆಗೆ ಸಂಪರ್ಕದ ಸಹಾಯ ಅತ್ಯವಶ್ಯ. ಬಿಎಸ್ಸೆನ್ನೆಲ್ ಮಾತ್ರವೇ ಇರುವ ಗ್ರಾಮಗಳ ಮೊಬೈಲ್ ಟವರ್‌ಗಳಿಗೆ ಡೀಸೆಲ್ ಒದಗಿಸಿ ಮಳೆ ಹತೋಟಿಗೆ ಬರುವ ತನಕ ಪರ್ಯಾಯ ವ್ಯವಸ್ಥೆ ಮಾಡಿ ಪರಿಸ್ಥಿತಿ ಕಾಯ್ದುಕೊಳ್ಳುವ ಸಂಬಂಧ ಎ.ಸಿ.ಯವರ ಗಮನಕ್ಕೆ ತರುತ್ತೇನೆ.
– ಭವಾನಿಶಂಕರ , ಇ.ಒ., ತಾ.ಪಂ. ಸುಳ್ಯ

ಟಾಪ್ ನ್ಯೂಸ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

High-Court

Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

High-Court

Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 

Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್‌ ಇಲ್ಲ

Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್‌ ಇಲ್ಲ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

High-Court

Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.