
ಕರ್ಣಾರ್ಜುನದಲ್ಲಿ ವಕೀಲರ ವಾದ ಮಂಡನೆ
Team Udayavani, Aug 9, 2019, 5:00 AM IST

ಕನ್ಯಾಡಿಯ ಯಕ್ಷಭಾರತಿ 5ನೇ ವರ್ಷದ ಸಂಭ್ರಮಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದು, ತಾಲೂಕಿನ ಹವ್ಯಾಸಿ ಯಕ್ಷಗಾನ ತಂಡಗಳಿಗೆ ತಾಳಮದ್ದಳೆ ಹಾಗೂ ಯಕ್ಷಗಾನ ಪ್ರದರ್ಶನ ನೀಡುವ ಅವಕಾಶ ಕಲ್ಪಿಸಿಕೊಟ್ಟಿದೆ. ಸರಣಿಯ ಮೊದಲ ಕಾರ್ಯಕ್ರಮದಂಗವಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜು.20ರಂದು ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಸದಸ್ಯರು “ಕರ್ಣಾರ್ಜುನ’ (ಕರ್ಣಪರ್ವ) ತಾಳಮದ್ದಳೆಯನ್ನು ನಡೆಸಿಕೊಟ್ಟರು.
ನ್ಯಾಯಾಲಯದಲ್ಲಿ ತಮ್ಮ ಕಕ್ಷಿದಾರರ ಪರವಾಗಿ ವಾದಿಸುವ ನ್ಯಾಯವಾದಿಗಳು ಯಕ್ಷಗಾನದ ವೇದಿಕೆಯಲ್ಲಿ ಅರ್ಥಧಾರಿಗಳಾಗಿ ತಮ್ಮ ಪಕ್ಷಕ್ಕೆ ನ್ಯಾಯ ದೊರಕಿಸಿ ಕೊಡಲು ವಾದಿಸುವುದರಲ್ಲಿ ತಾವು ಕಡಿಮೆಯಿಲ್ಲವೆಂಬುದನ್ನು ಶ್ರುತಪಡಿಸಿದ್ದಾರೆ. ಕರ್ಣಾರ್ಜುನರ ನಡುವಿನ ಯುದ್ಧದ ಸನ್ನಿವೇಶವನ್ನು ಯಾವ ಯಕ್ಷಗಾನ ಅರ್ಥದಾರಿಗೂ ಸರಿಗಟ್ಟುವ ರೀತಿಯಲ್ಲಿ ಪಾತ್ರದ ಘನತೆ, ಗಾಂಭೀರ್ಯವನ್ನು ಎತ್ತಿ ತೋರಿಸಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿಯೂ ಯಕ್ಷಗಾನವನ್ನು ಪ್ರವೃತ್ತಿಯಾಗಿ ಬೆಳೆಸಿ ಪಾತ್ರಕ್ಕೆ ಸಮರ್ಪಕವಾಗಿ ಜೀವ ತುಂಬಿ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ. ಸುಬ್ರಹ್ಮಣ್ಯ ಕುಮಾರ್ ಅಗರ್ತ ಕರ್ಣನಾಗಿ ಆರಂಭದಿಂದ ಅಂತ್ಯದವರೆಗೂ ಒಂದೇ ವಾಗ್ಝರಿಯಲ್ಲಿ ತನ್ನ ದೃಢ ನಿಲುವನ್ನು ಸಮರ್ಥಿಸುತ್ತ ಬದ್ಧತೆಯನ್ನು ಪ್ರತಿಪಾದಿಸಿ ಭೇಷ್ ಎನಿಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಕುಮಾರ್ ಪಡಂಗಡಿ ಅರ್ಜುನನ ಸಾರಥಿ ಕೃಷ್ಣನಾಗಿ ಕರ್ಣನ ಶೌರ್ಯವನ್ನು ಶ್ಲಾ ಸಿ ಅರ್ಜುನನನ್ನು ಹುರಿದುಂಬಿಸುತ್ತಾರೆ. ಕರ್ಣನ ಸಾರಥಿ ಶಲ್ಯನಾಗಿ ಕೇಶವ ಬೆಳಾಲು ಪ್ರಖರವಾದ ಮಾತುಗಳಿಂದ ಮತ್ತೆ ಅರ್ಜುನನೆಡೆಗೆ ಅಸ್ತ್ರ ಪ್ರಯೋಗಿಸುವಂತೆ ಕರ್ಣನನ್ನು ಉತ್ತೇಜಿಸುತ್ತಾರೆ. ಅರ್ಜುನನಾಗಿ ಶೈಲೇಶ್ ಠೊಸರ್ ಪ್ರತ್ಯಸ್ತ್ರ ಪ್ರಯೋಗದಲ್ಲಿ ತನ್ನ ಮಾತಿನ ಚಾಟಿಯಿಂದ ಕರ್ಣನನ್ನು ಬಡಿದೆಬ್ಬಿಸುತ್ತಾರೆ. ಪುಟ್ಟ ಪಾತ್ರವಾದರೂ ಸರ್ಪಾಸ್ತ್ರ ಅಶ್ವಸೇನನಾಗಿ ಪ್ರತಾಪ ಸಿಂಹ ನಾಯಕ್ ಮತ್ತೆ ಅಸ್ತ್ರ ಪ್ರಯೋಗಿಸುವಂತೆ ಪ್ರಚೋದಿಸುವ ಮಾತಿನ ವೈಖರಿ ಗಮನ ಸೆಳೆದಿತ್ತು.
ಭಾಗವತರಾಗಿ ಗಿರೀಶ ಮುಳಿಯಾಲ ಮತ್ತು ಪ್ರಕಾಶ ಅಭ್ಯಂಕರ್, ಚೆಂಡೆ ಮದ್ದಳೆಯಲ್ಲಿ ಶ್ರೇಯಸ್ ಪಾಳಂದೆ ಮತ್ತು ಆದಿತ್ಯ ಹೊಳ್ಳ ಸಹಕರಿಸಿದ್ದು, ಉತ್ಕೃಷ್ಟ ಮಟ್ಟದ ತಾಳದ್ದಳೆಯಲ್ಲಿ ಎಲ್ಲ ನ್ಯಾಯವಾದಿಗಳೂ ತಮ್ಮ ಪಾತ್ರಗಳಿಗೆ ನ್ಯಾಯ ದೊರಕಿಸಿ ತಾವು ತಾಳಮದ್ದಳೆ ಕೂಟದಲ್ಲೂ ಸೈ ಎನಿಸಿಕೊಂಡಿದ್ದಾರೆ.
ಸಾಂತೂರು ಶ್ರೀನಿವಾಸ ತಂತ್ರಿ
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್ ಜೈಕಾರ !

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್” ನಿಂದ ಕರುನಾಡು!
MUST WATCH
ಹೊಸ ಸೇರ್ಪಡೆ

Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.