ಪ್ರಮುಖ ರಾಜ್ಯಗಳಲ್ಲಿ ಲಿಂಗಾನುಪಾತ ಕುಸಿತ


Team Udayavani, Aug 13, 2019, 3:04 AM IST

pramukha

ಬೆಂಗಳೂರು: ಲಿಂಗಾನುಪಾತವು ಸಮಾಜದಲ್ಲಿ ಮಹಿಳಾ ಸ್ಥಾನಮಾನದ ಪ್ರತೀಕವಾಗಿದ್ದು, ದೇಶದ ಪ್ರಮುಖ ರಾಜ್ಯಗಳಲ್ಲಿ ಅದರ ಪ್ರಮಾಣ ನಿರಂತರವಾಗಿ ಕುಸಿಯುತ್ತಲೇ ಸಾಗಿದೆ ಎಂದು ಹಿರಿಯ ಪತ್ರಕರ್ತೆ ಪಾರ್ವತಿ ಮೆನನ್‌ ತಿಳಿಸಿದರು.

ಅಖೀಲ ಭಾರತ ಜೀವವಿಮಾ ನೌಕರರ ಸಂಘಟನೆಯು ಲಾಲ್‌ಬಾಗ್‌ ರಸ್ತೆಯ ಗೊಡ್ವಾಡ್‌ ಭವನದಲ್ಲಿ ಹಮ್ಮಿಕೊಂಡಿದ್ದ “4ನೇ ಮಹಿಳಾ ಸಮಾವೇಶ’ದಲ್ಲಿ ಮಾತನಾಡಿದ ಅವರು, ನೀತಿ ಆಯೋಗದ ವರದಿ ಪ್ರಕಾರ 2011ರಲ್ಲಿ ಭಾರತದಲ್ಲಿ ಲಿಂತಾನುಪಾತವು 1000 ಪುರುಷರಿಗೆ 909 ಸ್ತ್ರೀನಷ್ಟು ಇತ್ತು. ಇದರ ಪ್ರಮಾಣ 2015ರಲ್ಲಿ 900ಕ್ಕೆ ಇಳಿದಿದೆ.

ದೇಶದ ಪ್ರಮುಖ ರಾಜ್ಯಗಳಲ್ಲಿಯೇ ಲಿಂಗಾನುಪಾತ ಪ್ರಮಾಣ ಸಾಕಷ್ಟು ಇಳಿಕೆಯಾಗುತ್ತಿದ್ದು, ಪ್ರಧಾನಿ ಪ್ರತಿನಿಧಿಸುವ ಗುಜರಾತ್‌ನಲ್ಲಿಯೇ ಹೀನಾಯವಾಗಿದೆ. ಗುಜರಾತ್‌ನಲ್ಲಿ 2011ರಲ್ಲಿ 911 ಇತ್ತು, 2015ರಲ್ಲಿ 854ಕ್ಕೆ ಇಳಿಕೆಯಾಗಿದೆ. ಉಳಿದಂತೆ ಕರ್ನಾಟಕ, ಮಹಾರಾಷ್ಟ್ರ, ಹರಿಯಾಣ, ರಾಜಸ್ಥಾನದಲ್ಲಿ ಕೆಳಮಟ್ಟದಲ್ಲಿದ್ದು, ಇನ್ನಷ್ಟು ಇಳಿಮುಖವಾಗುತ್ತಿದೆ. ಇನ್ನು ಮುಂದಿನ ಎರಡು ವರ್ಷಗಳಲ್ಲಿ ಜನಗಣತಿ ನಡೆಯಲಿದ್ದು, ಲಿಂಗಾನುಪಾತ ಪ್ರಮಾಣ ಸ್ಥಿತಿ ಇನ್ನಷ್ಟು ಚಿಂತಾಜನಕವಾಗಲಿದೆ ಎಂದರು.

ಕಠಿಣ ಕಾನೂನು ಹಾಗೂ ವಿವಿಧ ಕಾಯ್ದೆಗಳಿದ್ದರೂ ಲೈಂಗಿಕ ದೌರ್ಜನ್ಯ ನಿರಂತರವಾಗಿ ಹೆಚ್ಚುತ್ತಿವೆ. ಮಹಿಳೆಯರು ದೌರ್ಜನ್ಯದ ವಿರುದ್ಧ ಪ್ರತಿಭಟಿಸದಿರುವುದು, ಜತೆಗೆ ಕಾನೂನು, ಕಾಯ್ದೆಗಳ ಮಾಹಿತಿ ಕೊರತೆ ಇದಕ್ಕೆ ಕಾರಣ. ನೌಕರಿ ಸ್ಥಳಗಳಲ್ಲಿ ಬಹುತೇಕ ಮಹಿಳೆಯರು ತಮ್ಮ ವ್ಯಕ್ತಿತ್ವಕ್ಕೆ ಕಳಂಕ ಬರುತ್ತದೆ ಎಂದು ಸಮಾನ ಹಕ್ಕು ಪಡೆಯಲು ಹಾಗೂ ದೌರ್ಜನ್ಯ ವಿರೋಧಿಸಲು ಹಿಂದೇಟು ಹಾಕುತ್ತಿದ್ದು, ಈ ಮನಸ್ಥಿತಿಯಿಂದ ಹೊರಬರಬೇಕಿದೆ. ಈ ನಿಟ್ಟಿನಲ್ಲಿ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಆಯಾ ಹಂತಗಳಲ್ಲಿ ಮಹಿಳಾ ಸಮಿತಿಗಳು ನಿರ್ಮಾಣವಾಗಿ ಹಕ್ಕುಗಳು, ದೌರ್ಜನ್ಯ ವಿರೋಧಿ ಕಾನೂನುಗಳ ಮಾಹಿತಿ, ಮಹಿಳಾ ಸೌಲಭ್ಯಗಳನ್ನು ತಿಳಿಸುವ ಕಾರ್ಯವಾಗಬೇಕಿದೆ ಎಂದು ಸಲಹೆ ನೀಡಿದರು.

ಅಖೀಲ ಭಾರತ ಜೀವವಿಮಾ ನೌಕರರ ಸಂಘಟನೆ ಜಂಟಿ ಕಾರ್ಯದರ್ಶಿ ಎಂ.ಗಿರಿಜಾ ಮಾತನಾಡಿ, ಸಮಾಜದ ಎಲ್ಲಾ ವಲಯಗಳಲ್ಲೂ ಮಹಿಳಾ ಶೋಷಣೆ ನಡೆಯುತ್ತಿದೆ. ಒಂದು ಕಡೆ ಪ್ರಧಾನಿಗಳು “ಬೇಟಿ ಬಜಾವೊ’ ಎಂದು ಹೇಳುತ್ತಿದ್ದರೆ, ಇನ್ನೊಂದೆಡೆ ಮಹಿಳಾ ಶೋಷಣೆ ಹೆಚ್ಚಾಗಿ ಸ್ತ್ರೀ ಸ್ಥಾನಮಾನ ಕುಸಿತುತ್ತಿದೆ. ಇದಕ್ಕೆ ಸಮಾಜದ ಹೀನ ಮನಸ್ಥಿತಿಯೇ ಕಾರಣ ಎಂದರು.

ಸ್ತ್ರೀಯರು ಶಬರಿಮಲೆ ದೇಗುಲ ಪ್ರವೇಶಿಸುವ ವಿಚಾರದಲ್ಲಿ ಸರ್ವೋತ್ಛ ನ್ಯಾಯಾಲಯ ಮಹಿಳೆಯರ ಪರ ನಿಂತಿತು. ಆದರೆ, ಕೆಲ ಸಂಪ್ರದಾಯವಾದಿಗಳು ಪುರಾತನ ಸಂಸ್ಕೃತಿಯ ಹೆಸರಿನಲ್ಲಿ ಇಂದಿಗೂ ಸ್ತ್ರೀಯರ ಪ್ರವೇಶವನ್ನು ವಿರೋಧಿಸುತ್ತಿದ್ದಾರೆ. ಒಂದು ಕಾಲದಲ್ಲಿ ಸಾವಿತ್ರಿಬಾಯಿ ಪುಲೆ ಪುರಾತನ ಸಂಸ್ಕೃತಿ ಮುರಿದು, ಅವಮಾನ ಎದುರಿಸಿ ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡದಿದ್ದರೆ ಅಂದಿನ ಕಾಲದಲ್ಲಿ ಮಹಿಳಾ ಶಿಕ್ಷಣ ಅಸಾಧ್ಯವಾಗಿಯೇ ಉಳಿಯುತ್ತಿತ್ತು.

ಹೀಗಾಗಿ, ಮಹಿಳೆಯರು ದೌರ್ಜನ್ಯವನ್ನು ಪ್ರತಿಭಟಿಸಬೇಕು. ತಮ್ಮ ಹಕ್ಕುಗಳನ್ನು ಕೇಳಿ ಪಡೆಯಬೇಕು ಎಂದು ಸಲಹೆ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಮಹಿಳಾ ನೌಕರರು ಮಹಿಳಾ ಸಬಲೀಕರಣ ಕುರಿತು ವಿಚಾರ ಮಂಡಿಸಿದರು. ಅಖಿಲ ಭಾರತ ಜೀವವಿಮಾ ನೌಕರರ ಸಂಘಟನೆಯ ಅಧ್ಯಕ್ಷ ಅಮಾನುಲ್ಲಾ ಖಾನ್‌, ಕಾರ್ಯದರ್ಶಿ ವಿ.ರಮೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.