ಒಂದು ರೂ. ಕೊಡದ ಸರ್ಕಾರ: ಡಿಕೆಶಿ

•ಪರಿಹಾರ ಕೇಂದ್ರಗಳಿಗಷ್ಟೇ ಖರ್ಚು ಮಾಡಿದ ಸರ್ಕಾರ•ಕೇಂದ್ರ-ರಾಜ್ಯ ವಿಶೇಷ ಪ್ಯಾಕೇಜ್‌ ಘೋಷಿಸಲಿ

Team Udayavani, Aug 13, 2019, 11:55 AM IST

bg-tdy-2

ಬೆಳಗಾವಿ: ಕರಡಿಗುದ್ದಿಯ ಪ್ರವಾಹ ಪೀಡಿತರ ಪುನರ್ವಸತಿ ಕೇಂದ್ರದಲ್ಲಿ ಮಾಜಿ ಸಚಿವ ಡಿಕೆಶಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಸಂತ್ರಸ್ತರ ಅಹವಾಲು ಆಲಿಸಿದರು.

ಬೆಳಗಾವಿ: ಭಾರೀ ಮಳೆಯಿಂದ ಪ್ರವಾಹದಿಂದ ನಲುಗಿರುವ ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಪರಿಹಾರ ಕೇಂದ್ರ ತೆರೆದಿದ್ದು ಬಿಟ್ಟರೆ ಈವರೆಗೆ ಒಂದು ರೂ. ಚೆಕ್‌ ಸಹ ಕೊಟ್ಟಿಲ್ಲ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ ಆಗ್ರಹಿಸಿದರು.

ತಾಲೂಕಿನಲ್ಲಿ ಪ್ರವಾಹದಿಂದ ನಲುಗಿದ ಕರಡಿಗುದ್ದಿ, ಮೋದಗಾ ಹಾಗೂ ಸಾಂಬ್ರಾ ಗ್ರಾಮದಲ್ಲಿರುವ ಪರಿಹಾರ ಕೇಂದ್ರಗಳಲ್ಲಿರುವ ಸಂತ್ರಸ್ತರನ್ನು ಸೋಮವಾರ ಭೇಟಿಯಾಗಿ , ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕನಾಟಕದ ಅನೇಕ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಎರಡೂ ಕಡೆಗೆ ಬಿಜೆಪಿಯವರದ್ದೇ ಸರ್ಕಾರ ಇರುವುದರಿಂದ ಅನುದಾನ ತರಿಸಿಕೊಂಡು ಇಲ್ಲಿಯ ಜನರ ನೆರವಿಗೆ ಧಾವಿಸಬೇಕು ಎಂದರು.

ಸಮರೋಪಾದಿಯಲ್ಲಿ ಮನೆಗಳನ್ನು ಸಂತ್ರಸ್ತರಿಗೆ ಕಟ್ಟಿಸಿಕೊಡಬೇಕು. ಹಾಳಾದ ರಸ್ತೆ, ಸೇತುವೆ ನಿರ್ಮಿಸಿಕೊಡಬೇಕು. ಇದರಲ್ಲಿ ರಾಜಕಾರಣ ಮಾಡದೇ ಸರ್ಕಾರದ ಬೆನ್ನಿಗೆ ನಿಂತು ಕೆಲಸ ಮಾಡಲಾಗುವುದು. ಸಂತ್ರಸ್ತರಿಗೆ ಕೂಡಲೇ ಸರ್ಕಾರ ಮೊದಲ ಹಂತದಲ್ಲಿ ಪ್ರಥಮ ಪರಿಹಾರ ಘೋಷಿಸಬೇಕು. 40 ಸಾವಿರ ಕೋಟಿ ರೂ. ಅಂದಾಜು ಹಾನಿ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಹಾನಿ ಅಂದಾಜಿನಂತೆ ಹಣ ಬಿಡುಗಡೆ ಮಾಡಬೇಕು. ಈ ಪ್ರವಾಹವನ್ನು ರಾಷ್ಟ್ರೀಯ ವಿಕೋಪವೆಂದು ಘೋಷಿಸುವಂತೆ ಆಗ್ರಹಿಸಿದರು.

ಪ್ರವಾಹ ಪರಿಹಾರ ನಿಯಮಾವಳಿಯಲ್ಲಿ ಬದಲಾವಣೆ ಮಾಡಬೇಕು. ಈವರೆಗೆ ಕೇಂದ್ರ ಮತ್ತು ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳಿದ್ದುದರಿಂದ ಅದು ಆಗಿರಲಿಲ್ಲ. ತಕ್ಷಣ ಸಂತ್ರಸ್ತರಿಗೆ ತಲಾ 10 ಸಾವಿರ ರೂ. ನೀಡಬೇಕು. ಸಾವಿರಾರು ಮನೆಗಳು ಬಿದ್ದಿವೆ. ಜಮೀನು ಕೊಚ್ಚಿಹೋಗಿದೆ. ಅನೇಕರು ಜೀವ ಕಳೆದುಕೊಂಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಪರಿಹಾರಕ್ಕೆ ಹೆಚ್ಚಿನ ಒತ್ತು ನೀಡಬೇಕು. ನಷ್ಟ ತುಂಬುವ ಕೆಲಸ ಮಾಡಬೇಕು ಎಂದು ಶಿವಕುಮಾರ ಆಗ್ರಹಿಸಿದರು.

ಶಾಸಕಿ ಲಕ್ಷ್ಮೀ ಹೆಬ್ಟಾಳಕರ, ಪ್ರಕಾಶ ರಾಠೊಡ, ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಚನ್ನರಾಜ ಹಟ್ಟಿಹೊಳಿ, ನಾನಪ್ಪ ಪಾರ್ವತಿ, ಇಸ್ಮಾಯಿಲ್ ತಿಗಡಿ ಸೇರಿದಂತೆ ಇತರರು ಇದ್ದರು.

ಮನೆ ಕುಸಿದು ನಿರಾಶ್ರಿತರಾಗಿರುವ ತಾಲೂಕಿನ ದೊಡವಾಡ ಹಾಗೂ ಸಂಗ್ರೇಶಕೊಪ್ಪ ಗ್ರಾಮಗಳ ವಿವಿಧ ಬಡವಾಣೆ ನಿವಾಸಿಗರನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪನವರು 40 ಸಾವಿರ ಕೋಟಿಯಷ್ಟು ಹಾನಿಯಾಗಿದೆ ಎಂದು ಹೇಳಿದ್ದಾರೆ. ಆ 40 ಸಾವಿರ ಕೋಟಿ ಹಣವನ್ನು ಕೇಂದ್ರ ಸರಕಾರದಿಂದ ತಂದು ಪ್ರವಾಹ ಪೀಡಿತ ಜನರಿಗೆ ವಿತರಿಸಬೇಕು ಎಂದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳನ್ನು ಆಕಾಶದಲ್ಲಿ ಕುಳಿತು ಸರ್ವೇ ಮಾಡುತ್ತಿದ್ದಾರೆ. ಎಷ್ಟು ಪರಿಹಾರ ಕೊಡುತ್ತಾರೋ ಕಾದು ನೋಡೋಣ ಎಂದು ಅಮಿತ ಶಾ ಅವರ ವೈಮಾನಿಕ ಸಮೀಕ್ಷೆ ಬಗ್ಗೆ ವ್ಯಂಗ್ಯವಾಡಿದರು.

ಈ ವೇಳೆ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಶಾಸಕ ಮಹಾಂತೇಶ ಕೌಜಲಗಿ, ಡಾ| ವಿ.ಎಸ್‌. ಸಾಧುನವರ, ಬಸವರಾಜ ಕೌಜಲಗಿ, ಮಹಾಂತೇಶ ಮತ್ತಿಕೊಪ್ಪ, ಜಿಪಂ ಸದಸ್ಯ ಅನಿಲ ಮ್ಯಾಕಲಮರಡಿ ಅವರು ಡಿಕೆಶಿಗೆ ಸಾಥ್‌ ನೀಡಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.