ಐಎಂಎ: ರೋಷನ್‌ ಬೇಗ್‌ ಮತ್ತೊಮ್ಮೆ ವಿಚಾರಣೆಗೆ ಗೈರು


Team Udayavani, Aug 14, 2019, 3:07 AM IST

Roshan Baig

ಬೆಂಗಳೂರು: ಅನರ್ಹಗೊಂಡಿರುವ ಶಾಸಕ ಆರ್‌.ರೋಷನ್‌ ಬೇಗ್‌ ಬಹುಕೋಟಿ ಐಎಂಎ ವಂಚನೆ ಪ್ರಕರಣ ತನಿಖೆ ಮಂಗಳವಾರ ಮತ್ತೊಮ್ಮೆ ವಿಚಾರಣೆಗೆ ಗೈರಾಗಿದ್ದಾರೆ. ಪ್ರಕರಣ ಸಂಬಂಧ ಎಸ್‌ಐಟಿ ಜು. 31ರಂದು ನೋಟಿಸ್‌ ಜಾರಿ ಆ.13ರಂದು ಹಾಜರಾಗುವಂತೆ ಸೂಚಿಸಿತ್ತು. ಆದರೆ, ರೋಷನ್‌ ಬೇಗ್‌ ಗೈರಾಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕವನ್ನು ಸದ್ಯದಲ್ಲೇ ನಿಗದಿ ಪಡಿಸಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ರೋಷನ್‌ ಬೇಗ್‌ ಅವರಿಗೆ 400 ಕೋಟಿ ರೂ. ಕೊಟ್ಟಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ ತಾನೇ ಬಿಡುಗಡೆ ಮಾಡಿದ ಆಡಿಯೋ ಮತ್ತು ವಿಡಿಯೋಗಳಲ್ಲಿ ಆರೋಪಿಸಿದ್ದ. ಈ ಸಂಬಂಧ ಎಸ್‌ಐಟಿ ಜು. 9ರಂದು ಮೊದಲ ಬಾರಿಗೆ ನೋಟಿಸ್‌ ಕೊಟ್ಟು, 11ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ, ಅನಾರೋಗ್ಯ ಸಮಸ್ಯೆ, ಹಜ್‌ ಯಾತ್ರೆ ಕಾರಣ ಹೇಳಿ ಗೈರಾಗಿದ್ದರು. ಹೀಗಾಗಿ ಎರಡನೇ ಬಾರಿ ನೋಟಿಸ್‌ ಜಾರಿ ಮಾಡಿ ಜು.17ಕ್ಕೆ ಸಮಯ ನಿಗದಿ ಮಾಡಿತ್ತು.

ಜು. 16ರ ತಡರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು, ಒಂದು ದಿನ ವಿಚಾರಣೆ ನಡೆಸಿ, ಮೂರನೇ ನೋಟಿಸ್‌ ಕೊಟ್ಟು ಜು. 19ಕ್ಕೆ ಬರಲು ಸೂಚಿಸಿದ್ದರು. ಅಂದೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ನಾಲ್ಕನೇ ನೋಟಿಸ್‌ ಕೊಟ್ಟ ಜು.29ಕ್ಕೆ ಹಾಜರಲು ಸೂಚಿಸಿತ್ತು. ಆದರೆ, ಬಿ.ಎಸ್‌.ಯಡಿಯೂರಪ್ಪ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಎರಡು ದಿನಗಳ ವಿನಾಯಿತಿ ನೀಡಿದ್ದ ಎಸ್‌ಐಟಿ ಜುಲೈ 31ರಂದು ಹಾಜರಾಗವಂತೆ ಹೇಳಿತ್ತು. ಆದರೆ, ಈ ವೇಳೆ ಅನಾರೋಗ್ಯ ಕಾರಣ ಹೇಳಿ ಗೈರಾಗಿದ್ದ ರೋಷನ್‌ ಬೇಗ್‌ ಎರಡು ವಾರಗಳ ಗಡುವು ಕೇಳಿದ್ದರು. ಐದನೇ ಬಾರಿಗೆ ನೋಟಿಸ್‌ ಜಾರಿ ಮಾಡಿ ಆ.13ರಕ್ಕೆ ನಿಗದಿ ಮಾಡಿತ್ತು. ಆದರೂ ಗೈರಾಗಿದ್ದಾರೆ ಎಂದು ಎಸ್‌ಐಟಿ ತಿಳಿಸಿದೆ.

ಮನ್ಸೂರ್‌ ಖಾನ್‌ಗೆ ಚಿಕಿತ್ಸೆ: ಮನ್ಸೂರ್‌ ಖಾನ್‌ ಆ.16ರವರೆಗೆ ಎಸ್‌ಐಟಿ ವಶದಲ್ಲಿದ್ದು, ಆತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಕೊಡಿಸಬೇಕಾಗಿದೆ. ಹೀಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ಹಿರಿಯ ವೈದ್ಯರನ್ನು ನೇಮಿಸಲಾಗಿದ್ದು, ಪ್ರತಿನಿತ್ಯ ಆತನಿಗೆ ಚಿಕಿತ್ಸೆ ಕೊಡುತ್ತಿದ್ದಾರೆ. ಜತೆಗೆ ಒಬ್ಬ ವೈದ್ಯರನ್ನು ಆತನ ಬಳಿಯೇ ಇರಿಸಿಕೊಳ್ಳಲಾಗಿದೆ ಎಂದು ಎಸ್‌ಐಟಿ ಪೊಲೀಸರು ಹೇಳಿದರು.

ಐಎಂಎ ಉದ್ಯೋಗಿಗಳಿಗೆ ದಾಖಲೆಗಳ ವಿತರಣೆ: ಐಎಂಎ ಸಂಸ್ಥೆಯ ಶಿವಾಜಿನಗರ, ಜಯನಗರ ಸೇರಿ ವಿವಿಧ ಶಾಖೆಗಳಲ್ಲಿ ಕೆಲಸ ಮಾಡುತ್ತಿದ್ದ ನೂರಾರು ಮಂದಿ ನೌಕರರ ಅಂಕಪಟ್ಟಿ ಸೇರಿ ಕೆಲ ಮೂಲ ದಾಖಲೆಗಳನ್ನು ಆರೋಪಿ ಮನ್ಸೂರ್‌ ಖಾನ್‌ ತನ್ನ ಬಳಿಯೇ ಇಟ್ಟುಕೊಂಡಿದ್ದ. ಪ್ರಕರಣ ಬೆಳಕಿಗೆ ಬಂದ ನಂತರ ಸಂಸ್ಥೆಯ ಕಚೇರಿಗಳ ಮೇಲೆ ದಾಳಿ ನಡೆಸಿದ ಎಸ್‌ಐಟಿ ಅಧಿಕಾರಿಗಳು ಎಲ್ಲ ನೌಕರರ ದಾಖಲೆಗಳನ್ನು ಜಪ್ತಿ ಮಾಡಿತ್ತು.

ಈ ವೇಳೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ದಾಖಲೆಗಳನ್ನು ಹಿಂದಿರುಗಿಸುವಂತೆ ಸಂಸ್ಥೆಯ ಸಿಬ್ಬಂದಿ ತನಿಖಾಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್‌ ಅನುಮತಿ ಪಡೆದು, ಎಲ್ಲ ಸಿಬ್ಬಂದಿಯ ಅಂಕಪಟ್ಟಿ ಹಾಗೂ ಇತರೆ ಮೂಲ ದಾಖಲೆಗಳನ್ನು ವಾಪಸ್‌ ಕೊಡಲಾಗುತ್ತಿದೆ. ಅದಕ್ಕಾಗಿ ಡಿವೈಎಸ್‌ಪಿ ದರ್ಜೆಯ ಅಧಿಕಾರಿಯೊಬ್ಬರನ್ನು ನೇಮಿಸಿದ್ದು, ದೃಢೀಕೃತ ದಾಖಲೆ ಪರಿಶೀಲಿಸಿ ವಿತರಣೆ ಮಾಡಲಾಗುತ್ತಿದೆ ಎಸ್‌ಐಟಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.