370ನೇ ವಿಧಿ ರದ್ದು ಬಗ್ಗೆ ಕಿಡಿಕಾರಿದ್ದ ಫೈಸಲ್ ದೆಹಲಿಯಲ್ಲಿ ಪೊಲೀಸ್ ವಶಕ್ಕೆ, ಗೃಹಬಂಧನ
ಐಎಎಸ್ ಹುದ್ದೆ ತೊರೆದು ರಾಜಕೀಯ ಸೇರಿದ್ದ ಯುವಕ ಶಾ ಫೈಸಲ್
Team Udayavani, Aug 14, 2019, 3:16 PM IST
ನವದೆಹಲಿ:ರಾಜಕೀಯಕ್ಕಾಗಿ ಐಎಎಸ್ ಹುದ್ದೆ ತೊರೆದಿದ್ದ ಕಾಶ್ಮೀರದ ಶಾ ಫೈಸಲ್ ಅವರನ್ನು ವಿದೇಶಕ್ಕೆ ತೆರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾಗ ಬುಧವಾರ ಅಧಿಕಾರಿಗಳು ವಶಕ್ಕೆ ಪಡೆದು ಕಾಶ್ಮೀರಕ್ಕೆ ವಾಪಸ್ ಕಳುಹಿಸಿರುವ ವಿದ್ಯಮಾನ ನಡೆದಿದೆ.
ದೆಹಲಿಯಿಂದ ಇಸ್ತಾಂಬುಲ್ ಗೆ ತೆರಳಲು ಶಾ ವಿಮಾನ ನಿಲ್ದಾಣಕ್ಕೆ ಆಗಮಿಸಿರುವುದಾಗಿ ವರದಿ ವಿವರಿಸಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿರುವ ಕ್ರಮಕ್ಕೆ ಶಾ ಸಾಮಾಜಿಕ ಜಾಲತಾಣದಲ್ಲಿ ಕಟುವಾಗಿ ವಿರೋಧ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ನಮ್ಮ(ಕಾಶ್ಮೀರದ) ರಾಜಕೀಯ ಹಕ್ಕುಗಳನ್ನು ಪುನರ್ ಸ್ಥಾಪಿಸಿಕೊಳ್ಳಲು ಹಿಂಸಾರಹಿತವಾದ ರಾಜಕೀಯದ ಚಳವಳಿಯ ಅಗತ್ಯವಿದೆ ಎಮದು ಶಾ ಮಂಗಳವಾರ ಟ್ವೀಟರ್ ನಲ್ಲಿ ಬರೆದುಕೊಂಡಿದ್ದ.
ತಾನು ಈ ಬಾರಿ ಈದ್ ಆಚರಿಸುವುದಿಲ್ಲ. ನಮಗಾದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳುವವರೆಗೂ ಈದ್ ಸಂಭ್ರಮ ಆಚರಿಸುವುದಿಲ್ಲ ಎಂದು ಶಾ ಘೋಷಿಸಿದ್ದ ಎಂದು ವರದಿ ಹೇಳಿದೆ.
ಶ್ರೀನಗರಕ್ಕೆ ಆಗಮಿಸುತ್ತಿದ್ದಂತೆಯೇ ಶಾ ಫೈಸಲ್ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ(ಪಿಎಸ್ ಎ)ಯಡಿ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.