ಮನುಷ್ಯನಿಗೆ ಜನರ ಮಧ್ಯೆ ಬದುಕುವ ಕಲೆ ಗೊತ್ತಿರಬೇಕು: ನರೇಶ್
ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸಮಿತಿಯಿಂದ ಶೈಕ್ಷಣಿಕ ನೆರವು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ
Team Udayavani, Aug 14, 2019, 4:56 PM IST
ಮುಂಬಯಿ, ಆ. 13: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಭಾಯಂದರ್ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ಆರ್ಥಿಕವಾಗಿ ಹಿಂದುಳಿದವರಿಗೆ ಶೈಕ್ಷಣಿಕವಾಗಿ ನೆರವು ವಿತರಣೆ, ಆಟಿಡೊಂಜಿ ಆಟಿಲ್, ಸಾಂಸ್ಕೃತಿ ಕಾರ್ಯಕ್ರಮವು ಆ. 10 ರಂದು ಭಾಯಂದರ್ ಪೂರ್ವದ ಗೊಡ್ಡೇವ್ನಾಕಾದಲ್ಲಿರುವ ತೇಜ್ ಭವನ್ ಸಭಾಗೃಹದಲ್ಲಿ ನೇರವೇರಿತು.
ಭಾಯಂದರ್ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನರೇಶ್ ಕೆ. ಪೂಜಾರಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ಸಿಗುವ ಶಿಕ್ಷಣ ಪದವಿಗೆ ಮಾತ್ರ ಸೀಮಿತವಾಗುರುತ್ತದೆ. ಪರಿಪೂರ್ಣ ಬದುಕಿನಲ್ಲಿ ಆಳವಾದ ಅಧ್ಯಾಯನ, ಹೊಂದಾಣಿಕೆ, ಜನರ ಮಧ್ಯೆ ಜೀವಿಸುವ ಕಲೆ ಗೊತ್ತಿರಬೇಕು. ನೈತಿಕ ಸಿದ್ದಾಂತದೊಂದಿಗೆ ಆಚರಿಸುವ ಆಚರಣೆಗಳಿಂದ ತುಳುನಾಡಿನ ಸಂಸ್ಕೃತಿ-ಸಂಸ್ಕಾರ, ಆಚಾರ-ವಿಚಾರಗಳು ಶಾಶ್ವತವಾಗಿ ನೆಲೆಗೊಳ್ಳುಲು ಸಾಧ್ಯವಿದೆ ಎಂದರು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ವಿದ್ಯಾ ಉಪಸಮಿತಿಯ ಸದಸ್ಯ ಧರ್ಮಪಾಲ ಅಂಚನ್ ಅವರು ಮಾತನಾಡಿ, 15 ಎಕರೆಯಲ್ಲಿರುವ ಉಡುಪಿ ಪಡುಬೆಳ್ಳೆಯ ಶ್ರೀ ನಾರಾಯಣ ಗುರು ಪ್ರೌಢ ಶಾಲೆ, ಮುಂಬಯಿಯ ಗುರುನಾರಾಯಾಣ ರಾತ್ರಿ ಪ್ರೌಢ ಶಾಲೆ, ನಗರ ಹಾಗೂ ಉಪನಗರದಲ್ಲಿ ಸ್ವಜಾತಿ ಸಮಾಜದ ಆರ್ಥಿಕವಾಗಿ ಹಿಂದುಳಿದವರ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಮುಂತಾದ ಜನಪರ ಯೋಜನೆಗಳನ್ನು ಅಸೋಸಿಯೇಶನ್ ಅನುಷ್ಠಾನಗೊಳಿಸಿದೆ. ಇಂತಹ ಸಮಾಜ ಮುಖೀ ಚಿಂತನೆಗೆ ಎಲ್ಲರು ಕೈಜೋಡಿಸಿ ಸಹಕರಿಸಬೇಕು ಎಂದು ನುಡಿದು ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಲೇಖಕಿ ಲತಾ ಸಂತೋಷ್ ಶೆಟ್ಟಿ, ಸಂಘಟಕ ಚೇತನ್ ಶೆಟ್ಟಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾತನಾಡಿದರು. ಗೌರವ ಕಾರ್ಯದರ್ಶಿ ರಘುನಾಥ್ ಜಿ. ಹಳೆಯಂಗಡಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಮಾಜ ಸೇವಕರಾದ ಸುಮಿತ್ರಾ ಕರ್ಕೇರ, ರಮೇಶ್ ಶೆಟ್ಟಿ ಸಿದ್ದಕಟ್ಟೆ, ಶಿವಾನಂದ ಬಂಗೇರ, ಆರ್. ಕೆ. ಮೂಲ್ಕಿ, ಸೇವಾದಲದ ದಳಪತಿ ಗಣೇಶ್ ಕೆ. ಪೂಜಾರಿ, ವಿದ್ಯಾ ಉಪಸಮಿತಿಯ ಸದಸ್ಯ ಗಣೇಶ್ ಎಚ್. ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮಹಿಳಾ ಸದಸ್ಯೆಯರು ಆಟಿ ತಿಂಗಳಿನಲ್ಲಿ ಸೇವಿಸುವ ಆಹಾರ ಪದಾರ್ಥಗಳನ್ನು ಉಣಬಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ದ ಅಂಗವಾಗಿ ಜನಪದ ಗೀತೆ, ಆಟಿ ಕಳಂಜೆ, ವೈವಿಧ್ಯಮಯ ನೃತ್ಯ ಪ್ರದರ್ಶನ ಗೊಂಡಿತು. ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ ಪ್ರಮೋದ್ ಕೆ. ಕೋಟ್ಯಾನ್, ಉಪ ಕಾರ್ಯಾಧ್ಯಕ್ಷರಾದ ಉದಯ ಡಿ. ಪೂಜಾರಿ ಮತ್ತು ವಾಸುದೇವ ಪೂಜಾರಿ, ಜತೆ ಕಾರ್ಯದರ್ಶಿ ಮಾಲತಿ ಆರ್. ಬಂಗೇರ, ಕೋಶಾಧಿಕಾರಿ ಆಶೋಕ್ ಎಸ್. ಪೂಜಾರಿ, ಜತೆ ಕೋಶಾಧಿಕಾರಿ ಕೃಷ್ಣ ಬಂಗೇರ, ಸ್ಥಳೀಯ ನಗರ ಸೇವಕ ಗಣೇಶ್ ಶೆಟ್ಟಿ, ರಾಜಕೀಯ ನೇತಾರ ಶೇಖರ ಪೂಜಾರಿ, ಉದ್ಯಮಿ ಸುರೇಶ್ ಪೂಜಾರಿ, ಟಿ. ಎಂ. ಪೂಜಾರಿ ಮೊದಲಾದವರು ಸಹಕರಿಸಿದರು. ಪರಿಸರದ ಸಮೂದಯ ಸಂಘಟನೆಗಳ ಪ್ರತಿನಿಗಳು, ತುಳು ಕನ್ನಡಿಗರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.