![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 16, 2019, 9:33 PM IST
ಮಂಗಳೂರು/ಉಡುಪಿ: ಕರ್ನಾಟಕ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಸ್ಥಿತಿ ಘೋಷಣೆ ಮಾಡಿದೆ. ಅದರಂತೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವ ಕರಾವಳಿ ಭಾಗದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಅದರಂತೆ ಮಂಗಳೂರು ಬಂದರು ಪ್ರದೇಶ, ಬಜ್ಪೆ ವಿಮಾನ ನಿಲ್ದಾಣ, ಇನ್ಫೋಸಿಸ್ ಕ್ಯಾಂಪಸ್, ಕೆ.ಎಸ್. ಹೆಗ್ಡೆ ಮೆಡಿಕಲ್ ಆಸ್ಪತ್ರೆ, ಯನಪೋಯಾ ಆಸ್ಪತ್ರೆ, ಸೋಮೇಶ್ವರ ದೇವಸ್ಥಾನ, ಉಳ್ಳಾಲ ಮಸೀದಿ ಸೇರಿದಂತೆ ಕರಾವಳಿ ಭಾಗದ ಪ್ರಮುಖ ಕಟ್ಟಡಗಳು, ಪ್ರಾರ್ಥಾನಾ ಮಂದಿರಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.
ನಗರದಲ್ಲಿರುವ ಮುಡಿಪು ಇನ್ಫೋಸಿಸ್, ಮಂಗಳ ಗಂಗೋತ್ರಿ ಸೂರ್ಯ ಇನ್ಫೋಟೆಕ್, ಕ್ಷೇಮ ಆಸ್ಪತ್ರೆ, ನಿಟ್ಟೆ ಆಸ್ಪತ್ರೆ, ಕಟೀಲು ದೇವಸ್ಥಾನ, ಎಂ.ಎಸ್.ಇ.ಝಡ್., ಬಜ್ಪೆ ವಿಮಾನ ನಿಲ್ದಾಣ ಸೇರಿದಂತೆ ಹಲವು ಕಡೆಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಆಗಮಿಸಿ ಪರಿಶೀಲನೆ ನಡೆಸಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಕಡಲ ತೀರದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ದೋಣಿ ಅಥವಾ ಇನ್ಯಾವುದೇ ವಸ್ತುಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 100ನ್ನು ಸಂಪರ್ಕಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮೀನುಗಾರ ಸಮುದಾಯದವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮೈ ಬೀಟ್ ಮೈ ಪ್ರೈಡ್ ಅಭಿಯಾನದ ಅಡಿಯಲ್ಲಿ ಈ ತಪಾಸಣೆ ನಡೆಯುತ್ತಿದೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.