ಬೀದಿಗೆ ಬಂತು ಬದುಕು


Team Udayavani, Aug 17, 2019, 10:34 AM IST

bg-tdy-1

ಚಿಕ್ಕೋಡಿ: ಚಿಕ್ಕೋಡಿ-ಮಿರಜ ರಾಜ್ಯ ಹೆದ್ದಾರಿ ಮೇಲೆ ಹರಿಯುತ್ತಿರುವ ಕೃಷ್ಣಾ ನದಿ ನೀರಿನಲ್ಲಿ ಬಟ್ಟೆ, ಪಾತ್ರೆ ತೊಳೆಯುತ್ತಿರುವ ಸಂತ್ರಸ್ತ ಮಹಿಳೆಯರು.

ಚಿಕ್ಕೋಡಿ: ಬೇಸಿಗೆಯಲ್ಲಿ ನೀರು ಇಲ್ಲದೇ ವನವಾಸ ಅನುಭವಿಸಿದೆವು. ಈಗ ನೀರಿನಲ್ಲಿ ಮುಳುಗಿ ಮನೀ, ಬೆಳಿ ಹಾಳಾಗಿ ಹೋಗಿವೆ. ಪ್ರವಾಹ ನಮ್ಮ ಮಗ್ಗಲು ಮುರಿದ ಮೇಲೆ ಈ ಭೂಮಿ ಮೇಲೆ ಇದ್ದರೇನು ಸತ್ತರೇನು, ಎಲ್ಲ ಬದುಕು ಕೃಷ್ಣಾ ನದಿಯಲ್ಲಿ ಹರಿದು ಹೋಗಿದೆ.

ಚಿಕ್ಕೋಡಿ ತಾಲೂಕಿನ ಮಾಂಜರಿ, ಅಂಕಲಿ ಗ್ರಾಮಗಳು ಪ್ರವಾಹಕ್ಕೆ ಸಿಕ್ಕು ನಲುಗಿ ಹೋಗಿದ್ದವು. ಈಗ ಪ್ರವಾಹ ಕಡಿಮೆಯಾದ ಮೇಲೆ ಗ್ರಾಮಸ್ಥರ ನೋವಿನ ನುಡಿಗಳಿವು. ಕಳೆದ 20 ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆ ಮತ್ತು ಕೊಯ್ನಾ ಹಾಗೂ ವಿವಿಧ ಜಲಾಶಯಗಳಿಂದ ಹರಿದು ಬಂದಿರುವ ಅಪಾರ ಪ್ರಮಾಣದ ನೀರಿನಿಂದ ಮಾಂಜರಿ, ಅಂಕಲಿ ಗ್ರಾಮಗಳಿಗೆ ನೀರು ನುಗ್ಗಿದೆ. ಇದರಿಂದ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಕಳೆದುಕೊಂಡ ನಿರಾಶ್ರಿತರು ಮರಳಿ ಸ್ವಗ್ರಾಮಗಳಿಗೆ ತೆರಳಿ ಪ್ರವಾಹದಿಂದ ಉಂಟಾದ ಹಾನಿಯನ್ನು ನೋಡಿ ಅತೀ ನೋವಿನಲ್ಲಿದ್ದಾರೆ. ಅವರ ಮಾತುಗಳು ನಿಜಕ್ಕೂ ಹೃದಯ ತಟ್ಟುವಂತಿವೆ.

ಪ್ರತಿ ವರ್ಷ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಆಗುತ್ತದೆ. ಸ್ವಲ್ಪ ನದಿಗಳು ಅಪಾಯ ಮಟ್ಟ ಮೀರಿ ಹರಿದು ನಂತರ ಕಡಿಮೆ ಆಗುತ್ತದೆ ಅಂತ ಅಂದು ಕೊಂಡಿದ್ದೆವು. ಆದರೆ ನಮ್ಮ ಬದುಕಿಗೆ ದೇವರು ತುಂಬ ಮೋಸ ಮಾಡಿದ್ದಾನೆ. ಕಳೆದ 2005 ಮತ್ತು 2006ರಲ್ಲಿ ಇದೇ ರೀತಿ ನಮ್ಮ ಬದುಕು ಮೂರಾಬಟ್ಟೆಯಾಗಿತ್ತು. ಅಂದು ಹಾನಿಯಾಗಿದ್ದು ಇಂದಿನವರಿಗೂ ಮರೆಯಲಿಕ್ಕೆ ಆಗಿಲ್ಲ, ಆದರೆ ಈ ರೀತಿ ಪ್ರವಾಹ ಬಂದು ನಮ್ಮ ಹೊಟ್ಟೆ ಮೇಲೆ ಕಲ್ಲು ಹಾಕುತ್ತದೆ ಅಂತ ನಾವು ಕನಸು ಮನಸ್ಸಿನಲ್ಲಿಯೂ ಊಹಿಸಿರಲಿಲ್ಲ ಎನ್ನುತ್ತಾರೆ ಸಂತ್ರಸ್ತ ಮಹಿಳೆಯೊಬ್ಬರು.

ಕೃಷ್ಣಾ ನದಿ ದಡದಲ್ಲಿರುವ ಮಾಂಜರಿ ಗ್ರಾಮವೇ ಭೀಕರ ಪ್ರವಾಹದಲ್ಲಿ ಸಂಪೂರ್ಣ ಮುಳುಗಡೆಯಾಗಿತ್ತು. ಗ್ರಾಮದ ನೂರಾರು ಮನೆಗಳು ಧರೆಗೆ ಉರುಳಿವೆ. ಆರ್‌ಸಿಸಿ ಮನೆಗಳಲ್ಲೂ ನೀರು ಹೊಕ್ಕು ಮನೆ ತುಂಬ ಕೆಸರು, ರಾಡಿ ಆವರಿಸಿಕೊಂಡಿದೆ. ಮನೆಗಳಲ್ಲಿರುವ ದಿನಸಿ ವಸ್ತುಗಳು ನೀರಲ್ಲಿ ತೇಲಾಡುತ್ತಿವೆ. ಕಾಳು ಕಡಿಗಳು ಮೊಳಕೆ ಒಡೆದಿವೆ. ಬಟ್ಟೆ, ಬರೆಗಳು ಕೊಳೆತ ವಾಸನೆ ಬರುತ್ತಿವೆ. ಗ್ರಾಮದ ರಸ್ತೆಗಳೆಲ್ಲ, ಹಾಳಾಗಿವೆ. ಗಟಾರು ಕಿತ್ತು ಹೋಗಿವೆ. ಗ್ರಾಮದಲ್ಲೆಲ್ಲ ಸಹಿಸಲಾರದ ವಾಸನೆ. ಇಂತಹ ಪರಿಸ್ಥಿತಿಯಲ್ಲಿಯೂ ಸಂತ್ರಸ್ತರು ಮರಳಿ ಮನೆಗೆ ಹೋಗಿ ಮನೆಗಳನ್ನು ಸ್ವಚ್ಛ ಮಾಡುವಲ್ಲಿ ತಲ್ಲೀನರಾಗಿ ಮತ್ತೂಮ್ಮೆ ಹೊಸ ಬದುಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿರುವ ದೃಶ್ಯ ಕಣ್ಣಿರು ತರಿಸುವಂತಿದೆ.

ಬೀಗರಿಂದ ಶುದ್ಧ ಕುಡಿಯುವ ನೀರು: ಗ್ರಾಮದ ಪಕ್ಕವೇ ಸಾಗರೋಪಾದಿಯಲ್ಲಿ ಕೃಷ್ಣಾ ನದಿ ನೀರು ಹರಿಯುತ್ತಿದ್ದರೂ ಅದು ಕುಡಿಯಲು ಅಯೋಗ್ಯವಾಗಿದೆ. ಹೀಗಾಗಿ ಪ್ರವಾಹದಿಂದ ಊರು ಬಿಟ್ಟ ಸಂತ್ರಸ್ತರು ಮರಳಿ ಮನೆಗೆ ಹೋಗಿ ಕುಡಿಯಲು ನೀರಿಲ್ಲದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಪರಿಹಾರ ಕೇಂದ್ರದಿಂದ ಮರಳಿ ಮನೆಗೆ ಹೋದವರ ಸಂತ್ರಸ್ತರ ಮನೆಗೆ ಬೀಗರು ಎರಡು ಅಥವಾ ಮೂರು ದಿನಗಳವರಿಗೆ ಸಾಕಾಗುವಷ್ಟು ಶುದ್ಧ ಕುಡಿಯುವ ನೀರು, ದಿನಸಿ ವಸ್ತುಗಳು ಹಾಗೂ ರೇಶನ್‌ ತಂದು ಕೊಡುತ್ತಿದ್ದಾರೆ.

ಮನೆಗಳಲ್ಲಿ ಹೋಗಲು ಭಯ: ಕಂಡರಿಯದ ಭೀಕರ ಪ್ರವಾಹದಿಂದ ಈ ಮಟ್ಟದ ಪ್ರಹಾರವಾಗುತ್ತಿದೆಯೆಂದು ನಮಗೆ ಲೆಕ್ಕವೇ ಸಿಗಲಿಲ್ಲ, ಹೀಗಾಗಿ ನದಿ ನೀರು ಮನೆ ಬಾಗಿಲು ಬಡಿಯುವ ವೇಳೆಯಲ್ಲಿ ರಾತ್ರೋರಾತ್ರಿ ಮನೆ ಬಿಟ್ಟು ಹೋಗಿದ್ದೆವು. ಈಗ ಮನೆಗೆ ಬಂದಿದ್ದೇವೆ. ಆದರೆ ಮನೆಯಲ್ಲಿ ಹೋಗಲು ಭಯವಾಗುತ್ತಿದೆ. ಒಂದು ವಾರದಿಂದ ಮನೆ ನೀರಿನಲ್ಲಿ ನಿಂತುಕೊಂಡಿದೆ. ಹೀಗಾಗಿ ಹಾವು, ಚೇಳು, ಝರಿ ಹೀಗೆ ವಿಷಕಾರಿ ಕೀಟಗಳು ಮನೆಯೊಳಗೆ ಇರಬಹುದು ಹೀಗಾಗಿ ಮನೆಯೊಳಗೆ ಹೋಗಲು ತುಂಬ ಭಯವಾಗುತ್ತಿದೆಯೆಂದು ಮಾಂಜರಿ ಗ್ರಾಮದ ವಿಜಯ ಬಾಬರ ಹೇಳುತ್ತಾರೆ.

ಸ್ವಚ್ಛತೆ ಕಾರ್ಯ ಜೋರು: ಹಿರಿಹೊಳೆ ಪ್ರವಾಹಕ್ಕೆ ಸಿಕ್ಕು ನಲುಗಿ ಹೋಗಿರುವ ಕೃಷ್ಣಾ ನದಿ ತೀರದ ಮಾಂಜರಿ ಮತ್ತು ಅಂಕಲಿ ಗ್ರಾಮದ ಜನರು ಈಗ ಮನೆಗೆ ತೆರಳಿ ಸ್ವಚ್ಛತೆ ನಡೆಸಿದ್ದಾರೆ. ಗ್ರಾಮದ ಕೆಲ ಕಡೆಗಳಲ್ಲಿ ನೀರು ಹರಿಯುತ್ತಿದೆ. ನೀರು ಇದ್ದ ಕಡೆಗೆ ಹೋಗಿ ಭಾಂಡೆ, ಬಟ್ಟೆ, ಹಾಸಿಗೆ ತೊಳೆಯುವ ಕಾರ್ಯ ಭರದಿಂದ ನಡೆದಿದೆ.

ಸ್ವಗ್ರಾಮಕ್ಕೆ ಮರಳುತ್ತಿರುವ ಗ್ರಾಮಸ್ಥರು:

ಮನೆಗಳಲ್ಲಿರುವ ದಿನಸಿ ವಸ್ತುಗಳು ನೀರಲ್ಲಿ ತೇಲಾಡುತ್ತಿವೆ. ಕಾಳು ಕಡಿಗಳು ಮೊಳಕೆ ಒಡೆದಿವೆ. ಬಟ್ಟೆ, ಬರೆಗಳು ಕೊಳೆತ ವಾಸನೆ ಬರುತ್ತಿವೆ. ಗ್ರಾಮದ ರಸ್ತೆಗಳೆಲ್ಲ, ಹಾಳಾಗಿವೆ. ಗಟಾರು ಕಿತ್ತು ಹೋಗಿವೆ.

ಬೇಸಿಗೆಯಲ್ಲಿ ಕುಡಿಯಲು ನೀರು ಸಿಗಲಿಲ್ಲ, ಈಗ ಅದೇ ನೀರಿನಿಂದ ನಮ್ಮ ಬದುಕು ಕೊಚ್ಚಿಕೊಂಡು ಹೋಗಿದೆ. ಕೊಯ್ನಾ ಮತ್ತು ಆಲಮಟ್ಟಿ ಡ್ಯಾಂದಿಂದ ನಮಗೆ ಯಾವುದೇ ಪ್ರಯೋಜನವಿಲ್ಲ, ಬೇಸಿಗೆಯಲ್ಲಿ ನೀರು ಇದ್ದರೂ ಕೊಯ್ನಾದಿಂದ ನೀರು ಬರಲಿಲ್ಲ, ಈಗ ಆಲಮಟ್ಟಿ ಡ್ಯಾಂದಿಂದ ನೀರು ತಡೆಹಿಡಿದಿದ್ದು ಮತ್ತು ಕೊಯ್ನಾದಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ನಮಗೆ ಇಷ್ಟೊಂದು ಪ್ರಮಾಣದ ಹಾನಿಯಾಗಿದೆ.• ಕುಮಾರ ಬಾಬರ, ಮಾಂಜರಿ ಗ್ರಾಮದ ನಿರಾಶ್ರಿತ

 

•ಮಹಾದೇವ ಪೂಜೇರಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.