ಮನೆಯಲ್ಲಿ ಮೊಗೆದಷ್ಟು ಮುಗಿಯದ ರಾಡಿ

•ರಾಶಿಗಟ್ಟಲೇ ಬೀಳುತ್ತಿದೆ ಕಸ •ಗಬ್ಬು ನಾರುತ್ತಿವೆ ಗ್ರಾಮಗಳು•ಸಾಂಕ್ರಾಮಿಕ ರೋಗ ಭೀತಿ

Team Udayavani, Aug 18, 2019, 1:13 PM IST

gadaga-tdy-1

ರೋಣ: ತಾಲೂಕಿನ ಹೊಳೆಆಲೂರು, ಮೆಣಸಗಿ ಸೇರಿದಂತೆ ಸುತ್ತಮುತ್ತಲಿನ ನೆರೆ ಪೀಡಿತ ಗ್ರಾಮಗಳಲ್ಲಿ ನೀರಿನಲ್ಲಿ ಕೊಚ್ಚಿಬಂದ ಕಸ ಕಡ್ಡಿ, ರಾಡಿ ಎಷ್ಟು ತೊಳೆದರೂ ಮುಗಿಯುತ್ತಿಲ್ಲ. ಸಂತ್ರಸ್ತರಿಗೆ ಸ್ವಚ್ಛತಾ ಕಾರ್ಯ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪ್ರವಾಹ ಬಂದ ತಕ್ಷಣವೇ ಹಾಕಿದ ಬಟ್ಟೆಯಲ್ಲೇ ಹೋರಬಂದ ಸಂತ್ರಸ್ತರ ಮನೆಯಲ್ಲಿದ್ದ ಆಹಾರ ಪದಾರ್ಥ ಕೊಳೆತು ನಾರುತ್ತಿವೆ. ನದಿ ನೀರು ತಂದು ಬಿಟ್ಟ ಕಸ ವಿಲೇವಾರಿಯಾಗದೇ ಸಾಕ್ರಾಮೀಕ ರೋಗಗಳಿಗೆ ಆಹ್ವಾನ ನೀಡುತ್ತಿವೆ. ರಸ್ತೆ ಹಾಗೂ ಗ್ರಾಮದ ಒಳ ಸಂದಿ ಗೊಂದಿಗಳಲ್ಲಿ ಕಸ ತುಂಬಿ ತುಳುಕುತ್ತಿವೆ. ಗ್ರಾಮಗಳ ಜನತೆ ವಾರದಿಂದ ನಿರಂತರವಾಗಿ ತಮ್ಮ ತಮ್ಮ ಮನೆ ಸ್ವಚ್ಛ ಮಾಡಿ ರಾಡಿ ಹೊರಹಾಕುತ್ತಿದ್ದರೂ ಇನ್ನೂ ಪೂರ್ತಿ ಸ್ವಚ್ಛವಾಗುತ್ತಿಲ್ಲ. ದೊಡ್ಡ ದೊಡ್ಡ ಬಣವೆಗಳು ನೀರಿನಲ್ಲಿ ಮುಳುಗಿದ್ದರಿಂದ ವಟಾರದ ತುಂಬೆಲ್ಲ ನಾರುತ್ತಿದೆ.

ಊರಿನಲ್ಲಿದ್ದ ಎಲ್ಲ ಶುದ್ಧ ನೀರಿನ ಘಟಕಗಳು ಈಗ ಬಂದ್‌ ಆಗಿವೆ. ಪಂಚಾಯತ್‌ ಹಾಗೂ ದಾನಿಗಳಿಂದ ಟ್ಯಾಂಕರ್‌ ಮೂಲಕ ಬರುತ್ತಿರುವ ಕುಡಿಯುವ ನೀರಿಗಾಗಿ ಜನ ಮುಗಿ ಬೀಳುತ್ತಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಹೊಳೆಆಲೂರ ಗ್ರಾಮಕ್ಕೆ ಟ್ರ್ಯಾಕ್ಟರ್‌ ಮೂಲಕ 10 ಟ್ಯಾಂಕರ್‌ ನೀರನ್ನು ನೀಡಿದರೆ ಸಾಲುತ್ತಿಲ್ಲ.

ಕಂದಾಯ ಇಲಾಖೆಯವರು ಪ್ರತಿ ಮನೆಯನ್ನು ಭೇಟಿ ಮಾಡಿ ಸಮೀಕ್ಷೆ ಮಾಡುತ್ತಿದ್ದಾರೆ. ಇಲ್ಲಿನ ಬಹಳಷ್ಟು ಜನ ಬಾಡಿಗೆ ಅಂಗಡಿ ಹಾಗೂ ಮನೆಯಲ್ಲಿ ವಾಸವಾಗಿದ್ದು, ಅವರ ಬೆಲೆಬಾಳುವ ಎಲೆಕ್ಟ್ರಾನಿಕ್‌, ಧಾನ್ಯ, ಪೀಠೊಪಕರಣಗಳು, ಭಾಂಡೆ ಸಾಮಾನುಗಳು ನೀರು ಪಾಲಾಗಿವೆ. ನಮಗೂ ಪರಿಹಾರ ಕೊಡಿ ಎಂದು ಅಂಗಲಾಚುತ್ತಿದ್ದಾರೆ. ಅಲ್ಲದೇ ಕೊಡುವ 10 ಸಾವಿರ ರೂ. ಯಾವೂದಕ್ಕೂ ಸಾಲದು. ಹಾನಿ ಪ್ರಮಾಣ ನೋಡಿ ಪರಿಹಾರ ಮೊತ್ತ ಕೊಡಿ ಎನ್ನುತ್ತಿದ್ದಾರೆ.

ನರೆ ಹಾವಳಿಯಲ್ಲಿ ಹಾನಿಯಾಗಿರುವ ವಸ್ತುಗಳನ್ನು ಸರ್ಕಾರ ಹಾಗೂ ದಾನಿಗಳು ನೀಡುತ್ತಿದ್ದಾರೆ. ಆದರೆ ವಿಧ್ಯಾರ್ಥಿಗಳ ಹಾಗೂ ಉದ್ಯೋಗ ನಿರೀಕ್ಷೆಯಲ್ಲಿರುವವರ ಅಂಕಪಟ್ಟಿ, ವರ್ಗವಣೆ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಚುನಾವಣಾ ಚೀಟಿ ಸೇರಿದಂತೆ ಮುಂತಾದ ಅಗತ್ಯ ದಾಖಲಾತಿಗಳು ಶಾಲಾ ಕಾಲೇಜಿನಲ್ಲಿ ಮತ್ತು ಮನೆಗಳಲ್ಲಿ ನೆರೆ ನೀರಿಗೆ ಹಾಳಾಗಿವೆ.

 

•ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.