ಆರೋಗ್ಯ ವಿವಿ ಆವರಣ ಪ್ಲಾಸ್ಟಿಕ್‌ ಮುಕ್ತ


Team Udayavani, Aug 19, 2019, 3:08 AM IST

arogya vv

ಬೆಂಗಳೂರು: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳೀಗ ಪ್ಲಾಸ್ಟಿಕ್‌ ಬಳಕೆಯಿಂದ ಮುಕ್ತವಾಗಿವೆ. ವಿದ್ಯಾರ್ಥಿಗಳನ್ನು ಆರೋಗ್ಯ ಕ್ಷೇತ್ರದ ರಾಯಭಾರಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ವಿವಿ ಪಣತೊಟ್ಟಿದೆ. ಆ ಹಿನ್ನೆಲೆಯಲ್ಲಿ ಆರೋಗ್ಯ ವಿವಿ ಮತ್ತು ಅದರ ವ್ಯಾಪ್ತಿಯ ಕಾಲೇಜು ಆವರಣಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗಿದೆ.

ರಾಜ್ಯದಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ ಸೇರಿದಂತೆ ವಿವಿಧ ವೈದ್ಯಕೀಯ ಕೋರ್ಸ್‌ಗಳ ಸುಮಾರು 654 ಕಾಲೇಜುಗಳಿವೆ. ಇಲ್ಲಿನ ವಿವಿಧ ವೈದ್ಯಕೀಯ ಕೋರ್ಸ್‌ಗಳಲ್ಲಿ ಸುಮಾರು 1.40 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಬೆಂಗಳೂರು ನಗರದಲ್ಲೇ ಸುಮಾರು 340 ಕಾಲೇಜುಗಳಿವೆ. ಆಯಾ ಕಾಲೇಜು ಆವರಣಗಳಲ್ಲಿ ಪ್ಲಾಸ್ಟಿಕ್‌ ನಿಷೇಧಿಸುವ ಬಗ್ಗೆ ಈಗಾಗಲೇ ವಿವಿ ಕುಲಪತಿಗಳು, ಕುಲಸಚಿವರ ಮೂಲಕ ಸುತ್ತೋಲೆ ಹೊರಡಿಸಿದ್ದಾರೆ.

ನೀರಿಗೆ ಸ್ಟೀಲ್‌ ಲೋಟ: ಜಯನಗರ ನಾಲ್ಕನೇ ಹಂತದಲ್ಲಿರುವ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಆವರಣಕ್ಕೆ ಭೇಟಿ ನೀಡಿದರೆ ಅಲ್ಲಿ ಪ್ಲಾಸ್ಟಿಕ್‌ ಮುಕ್ತ ಸ್ವಚ್ಛಂದ ವಾತಾವರಣವನ್ನು ನೋಡಬಹುದು. ವಿವಿ ಆವರಣದಲ್ಲಿರುವ ಕುಡಿಯುವ ನೀರಿನ ಘಟಕದತ್ತ ತೆರಳಿದರೆ ಅಲ್ಲಿ ಪ್ಲಾಸ್ಟಿಕ್‌ ಲೋಟ ಕಾಣುವುದಿಲ್ಲ. ವಿವಿ ಸುತ್ತೋಲೆ ಹೊರಡಿಸಿದ ನಂತರ ಕುಡಿಯುವ ನೀರಿನ ಘಟಕದಲ್ಲಿ ಸ್ಟೀಲ್‌ ಲೋಟಗಳನ್ನು ಇರಿಸಲಾಗಿದೆ. ಕಾಲೇಜಿನಲ್ಲಿ ನಡೆಯುವ ಸಮಾರೋಪ ಸಮಾರಂಭಗಳನ್ನು ಕೂಡ ಪ್ಲಾಸ್ಟಿಕ್‌ ಬಳಕೆಯಿಂದ ದೂರವಿರಿಸಲಾಗಿದೆ.

ಸಸಿ ನೀಡುವ ಸಂಸ್ಕೃತಿ: ಈ ಹಿಂದೆ ವಿವಿಯಲ್ಲಿ ನಡೆಯುತ್ತಿದ್ದ ಸಭೆ, ಸಮಾರಂಭಗಳಿಗೆ ಆಗಮಿಸುತ್ತಿದ್ದ ಅತಿಥಿಗಳಿಗೆ ಪುಷ್ಪಗುತ್ಛ ನೀಡುವ ಸಂಸ್ಕೃತಿ ಇತ್ತು. ಆದರೆ ಪುಷ್ಪ ಗುತ್ಛಗಳಿಗೆ ಪ್ಲಾಸ್ಟಿಕ್‌ ಹೊದಿಕೆ ಇರುವುದರಿಂದ ಗಣ್ಯರಿಗೆ ಬೊಕೆ ನೀಡುವುದನ್ನು ಕೈಬಿಡಲಾಗಿದೆ. ಬೊಕೆ ಬದಲಿಗೆ ಅತಿಥಿಗಳಿಗೆ ವಿವಿಧ ಜಾತಿಯ ಸಸಿಗಳನ್ನು ನೀಡುವ ಹೊಸ ಸಂಸ್ಕೃತಿಯನ್ನು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹುಟ್ಟುಹಾಕಿದೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮಣ್ಣಿನಲ್ಲಿ ಕರಗುವ ವಸ್ತುಗಳಿಗೆ ಆದ್ಯತೆ: ಆರೋಗ್ಯ ಮತ್ತು ಪರಿಸರ ಜಾಗೃತಿ ಕುರಿತ ಅನುಪಮ ಕಾರ್ಯಕ್ರಮಗಳನ್ನು ವಿವಿ ರೂಪಿಸಿದೆ. ವಿದ್ಯಾರ್ಥಿ ಸಮೂಹವನ್ನು ಆರೋಗ್ಯ ಕ್ಷೇತ್ರದ ರಾಯಭಾರಿಗಳನ್ನಾಗಿ ರೂಪಿಸಲು ಪಣ ತೊಡಲಾಗಿದ್ದು, ಪ್ಲಾಸ್ಟಿಕ್‌ ಬಳಕೆ ಬದಲಾಗಿ ಮಣ್ಣಿನಲ್ಲಿ ಕರಗುವ ವಸ್ತುಗಳನ್ನು ಬಳಕೆ ಮಾಡುವಂತೆ ವಿದ್ಯಾರ್ಥಿಗಳಲ್ಲಿ ವಿನಂತಿ ಮಾಡಲಾಗಿದೆ.

ಇದು ಫ‌ಲ ನೀಡುತ್ತಿದೆ ಎಂದು ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ಉಪಕುಲಸಚಿವ ಡಾ.ಬಿ.ವಸಂತ ಶೆಟ್ಟಿ “ಉದಯವಾಣಿ’ಗೆ ತಿಳಿಸಿದ್ದಾರೆ. ಈ ಹಿಂದೆ ಕಾಲೇಜು ಕ್ಯಾಂಟೀನ್‌ಗಳಲ್ಲೂ ಅಧಿಕ ಪ್ರಮಾಣದಲ್ಲಿ ಪ್ಲಾಸ್ಟಿಕ್‌ ಬಳಕೆಯಾಗುತ್ತಿತ್ತು. ಆದರೆ, ಪ್ರಸ್ತುತ ಅದಕ್ಕೂ ಕಡಿವಾಣ ಹಾಕಲಾಗಿದೆ ಎಂದು ಮಾಹಿತಿ ನೀಡಿದರು.

ಪ್ಲಾಸ್ಟಿಕ್‌ ಬಳಕೆ ಅನೇಕ ರೀತಿಯ ದುಷ್ಪರಿಣಾಮಗಳಿಗೆ ಕಾರಣವಾಗಲಿದೆ. ಆ ಹಿನ್ನೆಲೆಯಲ್ಲಿ ವಿವಿ ವ್ಯಾಪ್ತಿಯ ಕಾಲೇಜುಗಳ ಆವರಣಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ನಿಷೇಧ ಹೇರಲಾಗಿದೆ.
-ಡಾ.ಎಸ್‌. ಸಚ್ಚಿದಾನಂದ ಆರೋಗ್ಯ ವಿವಿ ಕುಲಪತಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.