ಕನ್ನಡ ಸೇವಾ ಸಂಘದ ಸೇವಾ ಕಾರ್ಯ ಅಭಿನಂದನೀಯ

ಕನ್ನಡ ಸೇವಾ ಸಂಘ ಪೊವಾಯಿ: ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರವೀಣ್‌ ಭೋಜ ಶೆಟ್ಟಿ

Team Udayavani, Aug 19, 2019, 5:07 PM IST

mumbai-tdy-1

ಮುಂಬಯಿ, ಆ. 18: ಸಂಘ ಸಂಸ್ಥೆಗಳ ಮೂಲಕ ಜನಸೇವೆ ಮಾಡುವುದೆಂದರೆ ಅದು ದೇವರ ಸೇವೆ ಮಾಡಿದಂತೆ. ಕಳೆದ 22 ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿ ಕೊಂಡಿರುವ ಕನ್ನಡ ಸೇವಾ ಸಂಘ ಪೊವಾಯಿ ಸ್ಥಳೀಯ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ನೆರವು ನೀಡುತ್ತಿರುವುದು ಅಭಿನಂದನೀಯ ಎಂದು ಮುಂಬಯಿ ಬಂಟರ ಸಂಘದ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ ಅವರು ಹೇಳಿದರು.

ಅವರು ಆ.17ರಂದು ಘಾಟ್ಕೋಪರ್‌ ಪಶ್ಚಿಮದ ಶ್ರೀ ಜಂಗಲೇಶ್ವರ ದೇವಸ್ಥಾನ ಸಭಾಗೃಹ ದಲ್ಲಿ ಕನ್ನಡ ಸೇವಾ ಸಂಘ ಪೊವಾಯಿ ಇದರ 22ನೇ ವರ್ಷದ ವಾರ್ಷಿ ಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 22 ವರ್ಷಗಳ ಹಿಂದೆ ಸದುದ್ದೇಶದಿಂದ ಸ್ಥಾಪಿತವಾದ ಈ ಸಂಸ್ಥೆ ಇಂದು ಉತ್ತಮ ಕಾರ್ಯಕರ್ತರು ಹಾಗೂ ದಾನಿಗಳ ಪ್ರಯತ್ನದಿಂದ ಮುಂಬಯಿ ಮಹಾ ನಗರದಲ್ಲಿ ಒಂದು ಮಾದರಿ ಸಂಸ್ಥೆಯಾಗಿ ಬೆಳೆ ಯುತ್ತಿರುವುದು ಅಭಿನಂದನೀಯ ಎಂದರು.

ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಬಂಟರ ಸಂಘ ಮುಂಬಯಿಯ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಡಾ| ಆರ್‌. ಕೆ. ಶೆಟ್ಟಿ ಅವರು ಮಾತನಾಡಿ, ಈ ಸಂಸ್ಥೆಯು ಮಾಡುತ್ತಿರುವ ಜನಪರ ಕಾರ್ಯ ಗಳನ್ನು ನಾನು ಹತ್ತಿರದಿಂದ ಬಲ್ಲೆನು. ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ಸಂಘವು ಸದಾ ಕಾರ್ಯನಿರತವಾಗಿರುವುದು ಮುನ್ಸಿಪಾಲಿಟಿ ಶಾಲೆ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಮಾಡುತ್ತ ಬಂದಿದೆ. ಇಂತಹ ಕಾರ್ಯಗಳಿಗೆ ನಾವೆಲ್ಲರೂ ಸದಾ ಪ್ರೋತ್ಸಾಹ ವನ್ನು ನೀಡಬೇಕಾದ ಅಗತ್ಯವಿದೆ ಎಂದರು.

ಉಮಾಮಹೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ್‌ ಉಡುಪ ಅವರು ಮಾತನಾಡಿ, ಕನ್ನಡ ಸೇವಾ ಸಂಘದ ಕಾರ್ಯಚಟುವಟಿಕೆಯನ್ನು ಸಂಘವು ಸ್ಥಾಪನೆಯಾದ ದಿನದಿಂದ ನಾನು ಹತ್ತಿರದಿಂದ ಬಲ್ಲೆ. ಈ ಸಂಸ್ಥೆಯಲ್ಲಿ ಅನೇಕ ದಾನಿಗಳು ಸದಾ ಸಕ್ರಿಯರಾಗಿದ್ದು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸಮಾಜ ಸೇವಕರನ್ನು ಗುರುತಿಸುವ ಕೆಲಸವನ್ನು ಈ ಸಂಸ್ಥೆಯು ಮಾಡುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಅಧ್ಯಕ್ಷ ಚಂದ್ರಶೇಖರ್‌ ಪೂಜಾರಿ ಅವರು ಮಾತನಾಡುತ್ತ, ಶ್ರದ್ಧೆಯಿಂದ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದಾಗ ಆ ಸಂಸ್ಥೆಯು ಜನರಿಗೆ ಹತ್ತಿರವಾಗಿ ಬೆಳೆಯುತ್ತದೆ. ನಮ್ಮ ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಸಂಸ್ಥೆಯ ಮೂಲಕ ಸಮಾಜದ ಯುವ ಜನರಿಗೆ ತಿಳಿಯಪಡಿಸುವ ಕೆಲಸವಾಗಬೇಕು ಎಂದರು. ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್ಕೋಪರ್‌ ಇದರ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ ಅವರು ಮಾತನಾಡಿ, ಸಂಘದ ಕಾರ್ಯಚಟುವಟಿಕೆಗಳು ನಿರಂತರವಾಗಿ ಜರಗುತ್ತಿದ್ದು ಸಮಾಜಪರ ಕಾರ್ಯಗಳೊಂದಿಗೆ ಶೈಕ್ಷಣಿಕ ಕ್ಷೇತ್ರದಲ್ಲೂ ಪೊವಾಯಿ ಕನ್ನಡ ಸೇವಾ ಸಂಘದ ಕಾರ್ಯ ಅಭಿನಂದನೀಯ ಎಂದರು. ಮುಲುಂಡ್‌ ಬಂಟ್ಸ್‌ನ ಜತೆ ಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿ ಅವರು ಮಾತನಾಡಿ, ಪ್ರತಿಭಾ ಪುರಸ್ಕಾರ, ಸಾಧಕರನ್ನು ಗೌರವಿಸುವುದು ಹಾಗೂ ಕನ್ನಡದ ಸಂಸ್ಕೃತಿಯನ್ನು ಬೆಳಗಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರನ್ನು ಗೌರವಿಸುವ ಕೆಲಸಗಳನ್ನು ಮಾಡುತ್ತಿರುವ ಈ ಸಂಸ್ಥೆ ಇತರ ಸಂಸ್ಥೆಗಳಿಗೆ ಮಾದರಿ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸೇವಾ ಸಂಘ ಪೊವಾಯಿ ಇದರ ಅಧ್ಯಕ್ಷ ಕರುಣಾಕರ ವಿ. ಶೆಟ್ಟಿ ಅವರು, ಪರಿಸರದ ತುಳು ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಸ್ಥಾಪಿತ ಗೊಂಡು ಇದೀಗ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದೆ. ಗಣ್ಯರು ನೀಡಿದ ಸಹಕಾರ ಹಾಗೂ ಪ್ರೋತ್ಸಾಹದಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಸಹಾಯ ಮಾಡುವುದರೊಂದಿಗೆ ನಮ್ಮ ಸಂಸ್ಥೆಯ ಮಹಿಳಾ ವಿಭಾಗ ಹಾಗೂ ಯುವ ವಿಭಾಗವು ಸಕ್ರಿಯವಾಗಿ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. ದಾನಿಗಳು ತಮ್ಮ ಸಹಕಾರವನ್ನು ಸದಾ ಈ ಸಂಸ್ಥೆಗೆ ನೀಡಿ ಪ್ರೋತ್ಸಾಹಿಸಬೇಕು ಎಂದು ನುಡಿದರು. ಸಮಾರಂಭದಲ್ಲಿ ಸಮಾಜರತ್ನ ಪ್ರಶಸ್ತಿಯನ್ನು ಸಮಾಜಸೇವಕ ಎಲ್ಲೂರು ರಘುವೀರ್‌ ಎ. ಶೆಟ್ಟಿ ಅವರಿಗೆ ಹಾಗೂ ಕನ್ನಡ ಜ್ಯೋತಿ ಪ್ರಶಸ್ತಿಯನ್ನು ಮುಂಬಯಿಯ ಲೇಖಕ ಕರುಣಾಕರ ಶೆಟ್ಟಿ ಪಣಿಯೂರು ಅವರಿಗೆ ನೀಡಿ ಗೌರವಿಸಲಾಯಿತು. ಕಲಾಪೋಷಕ ಅಜಿತ್‌ ಶೆಟ್ಟಿ ಬೆಳ್ಮಣ್‌ ಮತ್ತು ಸಮಾಜಸೇವಕ ಉಮೇಶ್‌ ಜಿ. ಆಚಾರ್ಯ ದಂಪತಿಗಳನ್ನು ಈ ಸಂದರ್ಭ ಸಮ್ಮಾನಿಸಲಾಯಿತು. ಪ್ರಸಕ್ತ ವರ್ಷದ ಸಿಎ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ಅಶ್ಮಿತಾ ಚಂದ್ರಹಾಸ್‌ ರೈ ಬೊಲ್ನಾಡುಗುತ್ತು ಹಾಗೂ ಆಶೀಷ್‌ ಸೀತಾರಾಮ್‌ ಶೆಟ್ಟಿ ಇವರನ್ನು ಗೌರವಿಸಲಾಯಿತು. ಪಾಸ್‌ಪೋಲಿ ಕನ್ನಡ ಶಾಲೆಯ ಮಕ್ಕಳಿಗೆ ಮಹೇಶ್‌ ಶೆಟ್ಟಿ ಅವರ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಾಗರಾಜ್‌ ಗುರುಪುರ ಅವರು ನಿರೂಪಿಸಿದರು. ಪ್ರಶಾಂತಿ ಡಿ. ಶೆಟ್ಟಿ, ಜ್ಯೋತಿ ಆರ್‌. ಶೆಟ್ಟಿ, ಪ್ರವೀಣಾ ಡಿ. ಸಾಲ್ಯಾನ್‌ ಹಾಗೂ ಪ್ರಭಾಕರ್‌ ಶೆಟ್ಟಿ ಪಣಿಯೂರು ಅವರು ಸಮ್ಮಾನ ಪತ್ರವನ್ನು ವಾಚಿಸಿದರು. ವೇದಿಕೆಯಲ್ಲಿ ಗೌರವ ಅತಿಥಿಗಳಾದ ಸಮಾಜಸೇವಕ ರಮೇಶ್‌ ಶೆಟ್ಟಿ ಸಿದ್ಧಕಟ್ಟೆ, ವನಿತಾ ಪಾಂಡುರಂಗ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸವಿತಾ ಕರುಣಾಕರ್‌ ಶೆಟ್ಟಿ, ಸಂಘದ ಉಪಾಧ್ಯಕ್ಷ ಅಶೋಕ್‌ ಶೆಟ್ಟಿ ಸಾಂತೂರ್‌, ಮಹಾಪೋಷಕ ಮಹೇಶ್‌ ಎಸ್‌. ಶೆಟ್ಟಿ, ಸಲಹೆಗಾರರಾದ ನ್ಯಾಯವಾದಿ ಆರ್‌. ಜಿ. ಶೆಟ್ಟಿ, ಕೋಶಾಧಿಕಾರಿ ಸಂದೇಶ್‌ ಆರ್‌. ಶೆಟ್ಟಿ ಮೂಡುಬೆಳ್ಳೆ, ಯುವ ವಿಭಾಗದ ಪ್ರವೀಣ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ವಿಭಾಗದ ವರದಿಯನ್ನು ಕಾರ್ಯಾಧ್ಯಕ್ಷೆ ಕವಿತಾ ಶೆಟ್ಟಿ ಅವರು ವಾಚಿಸಿದರು. ಪ್ರಶಾಂತಿ ಡಿ. ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಅತಿಥಿ ಗಣ್ಯರನ್ನು ಸಂಸ್ಥೆಯ ಪದಾಧಿಕಾರಿಗಳು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ಮನೋರಂಜನಾ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಮತ್ತು ಮಹಿಳಾ ವಿಭಾಗದ ಸದಸ್ಯರಿಂದ ನೃತ್ಯ ವೈಭವ, ಬಿಲ್ಲವರ ಅಸೋಸಿಯೇಶನ್‌ ಸ್ಥಳೀಯ ಕಚೇರಿಯ ಸದಸ್ಯರಿಂದ ಬಾಬಾಪ್ರಸಾದ್‌ ಅರಸ ಕುತ್ಯಾರು ರಚಿಸಿ ನಿರ್ದೇಶಿಸಿದ ಸೋತು ಗೆಂದಿಯೊಲು ಏಕಾಂಕ ನಾಟಕ ಪ್ರದರ್ಶನ ಗೊಂಡಿತು. ಸಂಘದ ಪ್ರಧಾನ ಕಾರ್ಯದರ್ಶಿ ಬಾಬಾಪ್ರಸಾದ ಅರಸ ಕುತ್ಯಾರು ಇವರು ನಿರೂಪಿಸಿ ಕೋಶಾಧಿಕಾರಿ ಸಂದೇಶ್‌ ಆರ್‌. ಶೆಟ್ಟಿ ಮೂಡುಬೆಳ್ಳೆ ಅವರು ವಂದಿಸಿದರು.

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.