![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Aug 20, 2019, 12:04 PM IST
ಗುಳೇದಗುಡ್ಡ: ನಮ್ಮ ಮನಿಮಟಾ ಏನ್ ನೀರ್ ಬರ್ತೈತಿ. ಗರ್ಭಿಣಿ ಹೆಣ್ಮಕ್ಕಳನ್ ಕಟ್ಟಗೊಂಡು ಎಲ್ಲಿಗಿ ಹೋಗೂದಂತ ಅಪ್ಪ ಹೇಳ್ತಿದ್ರು. ಬಾಳ್ ನೀರ್ ಬಂದ್ರ ನೋಡೋಣಂತ ಮನೆಯಲ್ಲೇ ಇದ್ದೇವು. ಆದ್ರ ಒಮ್ಮೇ ಮನಿಮಟಾ ನೀರು ಬಂತು. ಮನ್ಯಾನ್ ಮಂದೆಲ್ಲ ಸಾಮಾನ ಜೋಡಸಾಕ್ ಹತ್ತಿದ್ರು. ಅಷ್ಟೊತ್ತಿಗೆ ನೀರು ಬಾಳ್ ಬಂತು. ಇನ್ನೇನು ನಮ್ಮ ಜೀವಾ ಹೋತು ಅನ್ಕೊಂಡಿದ್ವಿ. ಪೊಲೀಸರು, ಸೈನಿಕರು ಸೇರಿ ಬೋಟ್ನಾಗ್ ಬಂದು ಕಾಪಾಡಿದ್ರು. ನನ್ನ ಜೋಡಿ, ನನ್ನ ಹೊಟ್ಯಾನ್ ಜೀವಾನೂ ಉಳಿಸ್ಯಾರಿ. ಅವರಿಗೆ ನಮ್ಮ ಜೀವನ್ದಾಗ ಮರಿಯುದಿಲ್ರಿ..
ಪ್ರವಾಹದಲ್ಲಿ ಸಿಲುಕಿದ್ದ ಲಾದಯಗುಂದಿಯ ಗರ್ಭಿಣಿ ಮಹಿಳೆ ಅಕ್ಷತಾ ಹಿರೇಮಠ ಹೀಗೆ ಹೇಳಿ ಕಣ್ಣೀರಾದರು. ನೀರು ಬರುತ್ತ ಅಂತಾ ಹೇಳಿದಾಗ ಮನೆಯ ಸಾಮಾನು ಖಾಲಿ ಮಾಡುವ ಅವಸರ. ಅದರ ಜೊತೆಗೆ ಗರ್ಭಿಣಿಯರಾದ ನನ್ನ ಮತ್ತು ನಮ್ಮ ಅಕ್ಕನನ್ನು ರಕ್ಷಿಸುವುದು ನಮ್ಮ ಹೆತ್ತವರಿಗೆ ದೊಡ್ಡ ಚಿಂತೆಯಾಗಿತ್ತು. ಆ ದೇವರ ರೂಪದಲ್ಲಿ ಹಲವರು ಬಂದು ಕಾಪಾಡಿದರು ಎಂದು ಅಕ್ಷತಾ ನೆನೆದರು.
ಹೌದು ಲಾಯದಗುಂದಿಗೆ ಇತಿಹಾಸದಲ್ಲಿಯೇ ಇಷ್ಟು ಪ್ರಮಾಣದಲ್ಲಿ ನೀರು ಬಂದಿರಲಿಲ್ಲ. ಇಡೀ ಗ್ರಾಮವೇ ಇಷ್ಟು ನೀರು ನೋಡಿ ಒಂದು ಕ್ಷಣ ದಂಗಾಗಿ ಹೋಗಿದೆ. ಅಷ್ಟರ ಮಟ್ಟಿಗೆ ಗ್ರಾಮಸ್ಥರ ಜೀವನವನ್ನು ಪ್ರವಾಹ ಅಕ್ಷರಶಃ ನೀರಿನಲ್ಲಿಯೇ ಮುಳುಗಿಸಿದೆ.
ಮುಂದಿನ ಜೀವನವೇ ಕತ್ತಲು: ಪ್ರವಾಹವೇನು ಇಳಿಮುಖವಾಗಿದೆ. ಆದರೆ ಅದರಿಂದಾದ ನಷ್ಟ, ಕಷ್ಟವನ್ನು ಎದುರಿಸಿ, ಹೊಸ ಜೀವನ ಕಟ್ಟಿಕೊಳ್ಳುವುದೇ ಆಸಂಗಿ, ಕಟಗಿನಹಳ್ಳಿ, ಲಾಯದಗುಂದಿ ಗ್ರಾಮಸ್ಥರಿಗೆ ಮುಂದಿರುವ ದೊಡ್ಡ ಸವಾಲಾಗಿದೆ. ಕಷ್ಟಪಟ್ಟು ಬೆಳೆದಿದ್ದ ಬೆಳೆ ನೀರಿನಿಂದ ಆವರಿಸಿ, ಹಾಳಾಗಿದೆ. ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಒಲೆ ಹತ್ತುತ್ತಿಲ್ಲ: ಪ್ರವಾಹದಿಂದ ನೀರು ಮನೆಯೊಳಗೆ ನುಗ್ಗಿದ್ದರಿಂದ ಮನೆಯಲ್ಲಿ 4-5ಅಡಿಗಳಷ್ಟು ನೀರು ತುಂಬಿತ್ತು. ಆ ಮನೆಗಳಿದ್ದ ನೀರು ಈಗ ಹೋಗಿದೆ. ಆದರೆ, ಮನೆಗಳಲ್ಲಿನ ಒಲೆಗಳು ಉರಿಯುತ್ತಿಲ್ಲ. ಕಟ್ಟಿಗೆ ಇಟ್ಟು ಬೆಂಕಿ ಹಾಕಿದರು ಒಲೆಗೆ ಬೆಂಕಿ ಹತ್ತುತ್ತಿಲ್ಲ. ಅಷ್ಟರಮಟ್ಟಿಗೆ ಮನೆಗಳಲ್ಲಿ ನೀರು ನುಗ್ಗಿ ಜನರ ಜೀವನವನ್ನೇ ನಲುಗಿಸಿಬಿಟ್ಟಿದೆ. ಅವರಿವರು ಕೊಟ್ಟಿದ್ದು ತಿನ್ನುತ್ತ ಪರಿಹಾರ ಕೇಂದ್ರದಲ್ಲಿ ಮಾಡಿದ ಅನ್ನ, ಸಾರು ಊಟ ಮಾಡುತ್ತ ಜೀವನ ಕಳೆಯುತ್ತಿದ್ದಾರೆ. ಮುಂದಿನ ಜೀವನ ನೆನೆದು ಚಿಂತೆಯಲ್ಲಿದ್ದಾರೆ.
ಮನೆಗಳ ಸ್ವಚ್ಛತೆಯೆ ನಿತ್ಯದ ಕೆಲಸ: ಲಾಯದಗುಂದಿ, ಆಸಂಗಿ ಗ್ರಾಮಗಳ ಮನೆಗಳಲ್ಲಿ ನೀರು ಹೊಕ್ಕಿದ್ದರಿಂದ ಕೆಸರು ತುಂಬಿದೆ. ಅದನ್ನು ಕಳೆದ ಮೂರ್ನಾಲ್ಕು ದಿನಗಳಿಂದ ಸ್ವಚ್ಛ ಮಾಡುವುದರಲ್ಲಿಯೇ ಜನರು ಹೈರಾಣಾಗಿದ್ದಾರೆ. ಮನೆಗಳ ಸ್ವಚ್ಛತೆ ಕೆಲಸಕ್ಕೆ ಮುಂದಾದ ಗ್ರಾಮಸ್ಥರಿಗೆ ಮನೆಗಳಲ್ಲಿ ಹಾವು ಚೇಳುಗಳ ಸಹ ಕಾಣಿಸಿಕೊಂಡಿವೆ. ಲಾಯದಗುಂದಿ ಗ್ರಾಮದಲ್ಲಂತೂ ಅನೇಕ ಮನೆಗಳು ಬಿದ್ದಿವೆ. ರಾಡಿ ತುಂಬಿದ ಮನೆಯಲ್ಲಿ ಕಾಲಿಡದ ಸ್ಥಿತಿ ನಿರ್ಮಾಣಗೊಂಡಿದೆ. ಆದರೆ, ಮುಂದಿನ ಬದುಕಿಗಾಗಿ ಮನೆಗಳ ಸ್ವಚ್ಛತೆಯಲ್ಲಿ ತೊಡಗಿದ್ದಾರೆ.
ಕುಸಿದ ಗೋಡೆಗಳು: ಲಾಯದಗುಂದಿ, ಅಲ್ಲೂರ, ಆಸಂಗಿ ಗ್ರಾಮಗಳಲ್ಲಿ ಅನೇಕ ಮನೆಗಳ ಸುತ್ತಲು ನೀರು ಆವರಿಸಿದ್ದರಿಂದ ಮನೆಯ ಗೋಡೆಗಳು ಕುಸಿದು ಬಿದ್ದಿವೆ. ಕೆಲವರ ಮನೆಗಳ ಮೇಲ್ಛಾವಣಿಗಳು ಕುಸಿದಿವೆ. ಇದರಿಂದ ಮನೆಗಳನ್ನು ಸ್ವಚ್ಛಗೊಳಿಸದೇ ಹಾಗೇ ಬಿಟ್ಟಿದ್ದಾರೆ. ಸರ್ಕಾರ ಕೊಡುವ ಪರಿಹಾರದಲ್ಲಿ ಮನೆ ಕಟ್ಟಿಕೊಳ್ಳುವ ಚಿಂತನೆಯಲ್ಲಿದ್ದಾರೆ.
ಹಾಳಾದ ಮನೆಯ ವಸ್ತುಗಳು: ನೀರು ಬರುತ್ತದೆ ಎಂಬ ಭಯದಲ್ಲಿ ಮನೆ ಬಿಟ್ಟು ಹೊರಗೆ ಬಂದ ಗ್ರಾಮಸ್ಥರ ಮನೆಗಳಲ್ಲಿ ವಸ್ತುಗಳು ಹಾಳಾಗಿವೆ. ಸಂತ್ರಸ್ತರ ಬದುಕು ನೀರು ಪಾಲಾಗಿದೆ. ಮನೆಯಲ್ಲಿನ ಟಿವಿ, ಟ್ರೇಜುರಿ, ಊರುವಲು ಸಂಗ್ರಹಿಸಿದ್ದ ಕಟ್ಟಿಗೆಗಳು ಸೇರಿದಂತೆ ಮನೆಯಲ್ಲಿನ ಅನೇಕ ವಸ್ತುಗಳು ನೀರಿನಲ್ಲಿ ಹರಿದುಕೊಂಡು ಹೋಗಿವೆ.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.