ಆರ್ಭಟಿಸಿದ ಕೃಷ್ಣಾ ಈಗ ಶಾಂತ

ಬಸವಸಾಗರ ಜಲಾಶಯದಿಂದ ಹೊರ ಹರಿವು ಸ್ಥಗಿತ•ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರ ವಾಸ್ತವ್ಯ

Team Udayavani, Aug 21, 2019, 11:11 AM IST

21-Agust-6

ಲಿಂಗಸುಗೂರು: ಹೊರಹರಿವು ಸ್ಥಗಿತಗೊಳಿಸಿದ್ದರಿಂದ ಮಂಗಳವಾರ ಕಂಡು ಬಂದ ಬಸವಸಾಗರ ಜಲಾಶಯ.

ಶಿವರಾಜ ಕೆಂಭಾವಿ
ಲಿಂಗಸುಗೂರು:
ಕಳೆದ ತಿಂಗಳೊಪ್ಪತ್ತಿನಿಂದ ಕೃಷ್ಣಾ ನದಿ ಆರ್ಭಟಿಸಿ ತೀರದ ಜನರಲ್ಲಿ ಆತಂಕ ಸೃಷ್ಠಿಸಿ ಈಗ ಶಾಂತವಾಗಿದ್ದು, ಪ್ರವಾಹದಲ್ಲಿ ಬದುಕು ಕಳೆದುಕೊಂಡ ಸಂತ್ರಸ್ಥರು ಸರ್ಕಾರದ ನೆರವಿನತ್ತ ಮುಖ ಮಾಡಿದ್ದಾರೆ.

ಜುಲೈ 25ರಂದು ಬಸವಸಾಗರ ಜಲಾಶಯದಿಂದ 10 ಸಾವಿರ ಕ್ಯೂಸೆಕ್‌ ನೀರು ಹೊರ ಹರಿವಿನಿಂದ ಆರಂಭವಾಗಿ 6.30 ಲಕ್ಷ ಕ್ಯೂಸೆಕ್‌ ನೀರು ಹರಿದು ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಅಪಾರ ಹಾನಿಯಾಗಿದೆ. ಜಲಾಶಯದಿಂದ ಹೊರ ಹರಿವು ಮಂಗಳವಾರ ಸಂಪೂರ್ಣ ಬಂದ್‌ ಮಾಡಿದ್ದರಿಂದ ಕೃಷ್ಣಾ ನದಿ ಆರ್ಭಟ ಸಂಪೂರ್ಣ ತಗ್ಗಿದೆ.

ಅನೇಕ ದಶಕಗಳಿಂದ 6.30 ಲಕ್ಷ ಕ್ಯೂಸೆಕ್‌ ನೀರು ಬಸವಸಾಗರ ಜಲಾಶಯಕ್ಕೆ ಬಂದ ಹಾಗೂ ಹೊರಕ್ಕೆ ಹರಿಸಿದ ಉದಾಹರಣೆಗಳು ಇಲ್ಲ. ಆದರೆ ಈ ವರ್ಷ ಪ್ರವಾಹ ಆರ್ಭಟ ಜೋರಾಗಿತ್ತು. ಇದರಿಂದ ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕುಗಳ ನದಿತೀರದ ಗ್ರಾಮಗಳು ಪ್ರವಾಹಕ್ಕೆ ಸಿಲುಕಿ ಅಲ್ಲಿನ ಜನರ ಬದುಕು ಮೂರಾಬಟ್ಟೆಗೊಳಿಸಿ ಈಗ ಕೃಷ್ಣಾ ಮೌನಕ್ಕೆ ಶರಣಾಗಿದೆ.

ಪ್ರವಾಹದಿಂದ ಅನೇಕ ಜನರು ತಮ್ಮ ಹೊಲದಲ್ಲಿ ಬೆಳೆದ ಬೆಳೆ, ಮನೆ, ಮನೆಯಲ್ಲಿನ ಬಟ್ಟೆಬರೆ, ಬೆಲೆಬಾಳುವ ವಸ್ತುಗಳು, ಮೇವು, ಜಾನುವಾರುಗಳನ್ನು ಕಳೆದುಕೊಳ್ಳುವಂತಾಗಿದೆ. ಸಂತ್ರಸ್ತರ ಬದುಕು ಅತಂತ್ರಕ್ಕೆ ಸಿಲುಕಿದಂತಾಗಿದೆ.

ತಾಲೂಕಿನ ಕೆಲವು ನದಿ ತೀರದ ಗ್ರಾಮಗಳಲ್ಲಿ ಸಂತ್ರಸ್ತರಾಗಿರುವ ಜನರಿಗೆ ಪರಿಹಾರ ಕೇಂದ್ರದಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಿಸಲಾಗಿದೆ. ಆದರೆ ಸಂತ್ರಸ್ತರು ಬೆಳೆ ಪರಿಹಾರ, ಮನೆ ಪುನರ್‌ ನಿರ್ಮಾಣ, ಜಾನುವಾರು ಕಳೆದ ಕೊಂಡುವವರಿಗೆ ಪರಿಹಾರ ಹಾಗೂ ನಡುಗಡ್ಡೆ ಗ್ರಾಮಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆ ಗ್ರಾಮಗಳ ಸ್ಥಳಾಂತರ. ಗೋನವಾಟ್ಲ-ಕಡದರಗಡ್ಡಿ ಸೇತುವೆ ನಿರ್ಮಾಣ ಮಾಡುತ್ತೇವೆ ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಂದಲ್ಲ ಹತ್ತಾರು ಭರವಸೆಗಳನ್ನು ಸಂತ್ರಸ್ತರಿಗೆ ನೀಡಿದ್ದಾರೆ. ಈ ಎಲ್ಲ ಭರವಸೆಗಳು ಈಡೇರಿಕೆಯತ್ತ ಸಂತ್ರಸ್ತರು ಮುಖ ಮಾಡಿ ಕಾತರರಾಗಿದ್ದಾರೆ. 2009ರಲ್ಲಿ ಉಂಟಾಗಿದ್ದ ಪ್ರವಾಹಕ್ಕೆ ಸಿಲುಕಿದ್ದ ಚಿಕ್ಕ ಉಪ್ಪೇರಿ, ಸುಣಕಲ್ ಗ್ರಾಮಗಳ ಸಂತ್ರಸ್ತರಿಗಾಗಿ 367 ಮನೆಗಳನ್ನು ಗ್ರಾಮಗಳ ಹೊರಭಾಗದಲ್ಲಿ ಹಟ್ಟಿ ಚಿನ್ನದ ಗಣಿ ಸಹಯೋಗದಲ್ಲಿ ನಿರ್ಮಿಸಲಾಗಿತ್ತು. ಆದರೆ ಇಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದಾಗಿದೆ. ಸುಣಕಲ್ ಗ್ರಾಮದ ಆಸರೆ ಮನೆಗಳಲ್ಲಿ ಕೆಲವೇ ಕೆಲವು ಕುಟಂಬಗಳು ಹರುಕು-ಮುರುಕು ಆಸರೆ ಮನೆಗಳಲ್ಲಿ ಕ್ರಿಮಿಕಿಟ, ವಿಷಜಂತುಗಳ ಮಧ್ಯೆ ಅನಿವಾರ್ಯವಾಗಿ ವಾಸ ಮಾಡುತ್ತಿದ್ದಾರೆ. ಇನ್ನೂ ಚಿಕ್ಕ ಉಪ್ಪೇರಿ ಗ್ರಾಮಗಳಲ್ಲಿ ಆಸರೆ ಮನೆಗಳ ಇನ್ನೂ ಸಂತ್ರಸ್ತರಿಗೆ ಹಸ್ತಾಂತರಿಸಿಲ್ಲ. ಮನೆಗಳು ಸಂಪೂರ್ಣವಾಗಿ ಹಾಳಾಗಿವೆ. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸದೇ ಇರುವುದು ರ್ದುದೈವದ ಸಂಗತಿಯಾಗಿದೆ.

2009ರಲ್ಲಿನ ಹಾಗೂ ಈ ವರ್ಷದ ಪ್ರವಾಹ ಸಂತ್ರಸ್ತರ ಅನುಭವಿಸಿದ ಯಾತನೆಯನ್ನು ದೂರ ಮಾಡಲು ತಾಲೂಕಿನ ಅಧಿಕಾರಿಗಳು ಕಾಳಜಿ ವಹಿಸಿ ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯ ಮಾಡಬೇಕಾಗಿದೆ ಎಂಬ ಆಗ್ರಹ ಕೇಳಿ ಬಂದಿದೆ.

ಟಾಪ್ ನ್ಯೂಸ್

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.