ಅಂಗಡಿ ಮಾಲೀಕರು ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಿ


Team Udayavani, Aug 22, 2019, 3:00 AM IST

angadi-malika

ಸಂತೆಮರಹಳ್ಳಿ: ಪ್ರತಿ ಅಂಗಡಿಯಲ್ಲೂ ಸಿ.ಸಿ. ಕ್ಯಾಮೆ ರಾಗಳನ್ನು ಅಳವಡಿಸಿಕೊಂಡರೆ ವರ್ತಕರಿಗೆ ಹೆಚ್ಚಿನ ಉಪಯೋಗ ವಾಗುವ ಜೊತೆಗೆ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರಿಗೂ ಸಹಾಯವಾಗಲಿದೆ ಎಂದು ಸಿಪಿಐ ಎ.ಕೆ.ರಾಜೇಶ್‌ ಹೇಳಿದರು. ಯಳಂದೂರು ಪಟ್ಟಣದ ಪೊಲೀಸ್‌ ಠಾಣೆಯ ಆವರಣದಲ್ಲಿ ಬುಧವಾರ ಕರೆದಿದ್ದ ವರ್ತಕರ ಸಂಘದ ಸದಸ್ಯರ ಸಭೆಯಲ್ಲಿ ಮಾತನಾಡಿದರು.

ಕಡ್ಡಾಯವಾಗಿ ಕ್ಯಾಮೆರಾ ಅಳವಡಿಸಿ: ಕರ್ನಾಟಕ ಪಬ್ಲಿಕ್‌ ಸೇಫ್ಟಿ ಕಾಯ್ದೆ 2018 ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇದನ್ನು ಉಲ್ಲಂ ಸಿದ್ದಲ್ಲಿ ದಂಡ ವಿಧಿಸುವ ಅಧಿಕಾರವೂ ಇದೆ. ಹಾಗಾಗಿ ಆದಷ್ಟು ಬೇಗ ಎಲ್ಲರೂ ತಮ್ಮ ಅಂಗಡಿ ಮುಂಗಟ್ಟೆಗಳಿಗೆ ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದರು.

ಎಲ್ಲರೂ ಸಹಕರಿಸಿ: ಇತ್ತೀ ಚೆಗೆ ಅಪರಾಧಗಳ ಸಂಖ್ಯೆ ಅಧಿಕವಾಗುತ್ತಿದೆ. ಇದನ್ನು ಕಂಡುಹಿಡಿಯುವುದು ಸವಾಲಿನ ಕೆಲಸವಾಗಿದೆ. ಇದಕ್ಕೆ ಸಾರ್ವಜನಿಕರ ಬೆಂಬಲ ಸಿಕ್ಕರೆ ನಮ್ಮ ಕೆಲಸ ಸುಲಭವಾಗುವ ಜೊತೆಗೆ ಒಂದು ಸಾಮಾಜಿಕ ಕಾರ್ಯವನ್ನು ಮಾಡಿದ ಆತ್ಮತೃಪ್ತಿ ಇರುತ್ತದೆ ಹಾಗಾಗಿ ಎಲ್ಲರೂ ಸಹಕರಿಸಬೇಕು ಎಂದರು.

ಖೋಟಾ ನೋಡು ಹಾವಳಿ ತಡೆಗೆ ಸಹಕರಿಸಿ: ಪಿಎಸ್‌ಐ ಡಿ.ಆರ್‌.ರವಿಕುಮಾರ ಮಾತನಾಡಿ, ಇತ್ತೀಚೆಗೆ ಖೋಟಾ ನೋಟುಗಳ ಚಲಾವಣೆ ಹೆಚ್ಚಾಗಿದೆ. ಇದನ್ನು ಬೇಧಿಸುವಲ್ಲಿ ಪೊಲೀಸರಿಗೆ ವರ್ತಕರ ನೆರವು ಅಧಿಕವಾಗಿ ಬೇಕಾಗುತ್ತದೆ. ಇಂತಹ ನೋಟುಗಳು ಕಂಡು ಬಂದಲ್ಲಿ ತಕ್ಷಣವೇ ಪೊಲೀಸ್‌ ಇಲಾಖೆಗೆ ಕರೆ ಮಾಡಿ ಅವರನ್ನು ಹಿಡಿಯಲು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಕುಡಿದ ಮತ್ತಿನಲ್ಲಿ ನಡೆಯುವ ಪ್ರಕರಣಗಳನ್ನು ಬೇಧಿಸಲು ನಮಗೆ ಸಿ.ಸಿ. ಕ್ಯಾಮೆರಾಗಳು ನೆರವಾಗುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪಟ್ಟಣದ ಅಗ್ರಹಾರ ಬೀದಿ ಹಾಗೂ ಸಂತೆಮಾಳದಲ್ಲಿ ಅನೇಕ ಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು. ಬಸ್‌ ನಿಲ್ದಾಣದಲ್ಲೂ ಸಿ.ಸಿ. ಕ್ಯಾಮೆರಾ ಅಳವಡಿಸಬೇಕು ಎಂದು ಕೆಲ ವರ್ತಕರು ಆಗ್ರಹಿಸಿದರು.

ಪೊಲೀಸರ ಭರವಸೆ: ಇದಕ್ಕೆ ಸ್ಪಂದಿಸಿದ ಪೊಲೀಸ್‌ ಅಧಿಕಾರಿಗಳು ಆದಷ್ಟು ಬೇಗ ಪಪಂನ ನೆರವಿನೊಂದಿಗೆ ಬಸ್‌ ನಿಲ್ದಾಣದಲ್ಲಿ ಕ್ಯಾಮೆರಾ ಅಳವಡಿಸಲು ಈಗಾಗಲೇ ಮಾತುಕತೆ ನಡೆದಿದ್ದು ಶೀಘ್ರದಲ್ಲೇ ಇದು ನೆರವೇರಲಿದೆ. ಇದರೊಂದಿಗೆ ಕಳ್ಳತನದ ಅಪರಾಧ ತಡೆಗಟ್ಟುವಲ್ಲಿ ಪೊಲೀಸ್‌ ಗಸ್ತನ್ನು ಹೆಚ್ಚಿಸಲಾಗಿದೆ. ಆದಷ್ಟು ಬೇಗ ಇದನ್ನು ಬೇಧಿಸಲಾಗುವುದು ಎಂದು ಭರವಸೆ ನೀಡಿದರು. ವರ್ತಕರ ಸಂಘದ ಅಧ್ಯಕ್ಷ ನಯಾಜ್‌ಖಾನ್‌, ವೈ.ಜಿ. ನಿರಂಜನ್‌, ಶ್ರೀನಿವಾಸ, ನಾಸೀರ್‌ಷರೀಫ್, ಮಹೇಂದ್ರ, ಶ್ರೀನಿವಾಸ, ರವಿ ಇತರರು ಇದ್ದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.