ಮೈಸೂರಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆ


Team Udayavani, Aug 24, 2019, 3:00 AM IST

mysoralli

ಮೈಸೂರು: ಸ್ಮಾರ್ಟ್‌ ಪವರ್‌ ಗ್ರಿಡ್‌ ಯೋಜನೆಯಡಿ ಮೈಸೂರು ನಗರದಲ್ಲಿ 5 ಲಕ್ಷ ಸ್ಮಾರ್ಟ್‌ ಮೀಟರ್‌ ಅಳವಡಿಸುವ ಗುರಿ ಹೊಂದಲಾಗಿದೆ ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್‌.ಎನ್‌. ಗೋಪಾಲ ಕೃಷ್ಣ ಹೇಳಿದರು.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ, ಕರ್ನಾಟಕ ವಿದ್ಯುತ್‌ತ್ಛಕ್ತಿ ಮಂಡಳಿ ಎಂಜಿನಿಯರುಗಳ ಸಂಘದ ಸಹಯೋಗದಲ್ಲಿ ನಂಜನಗೂಡು ರಸ್ತೆಯಲ್ಲಿರುವ ಕಡಕೊಳದ ಕೆಇಬಿ ಎಂಜಿನಿಯರುಗಳ ಸಂಘದ ಭವನದಲ್ಲಿ ಆಯೋಜಿಸಿದ್ದ ಸ್ಮಾರ್ಟ್‌ ಗ್ರಿಡ್‌ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಗ್ರ ವರದಿ ಸಿದ್ಧ: ವಿದ್ಯುತ್‌ ವಿತರಣೆ ಮತ್ತು ಬಳಕೆಯಲ್ಲಿ ತಂತ್ರಜ್ಞಾನವನ್ನು ಇಂಧನ ಕ್ಷೇತ್ರದಲ್ಲಿ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ಮಾರ್ಟ್‌ ಗ್ರಿಡ್‌ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಇದರ ಭಾಗವಾಗಿ ಇಡೀ ರಾಷ್ಟ್ರದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ವಿದ್ಯುತ್‌ ಬಳಕೆಯನ್ನು ಮಾಪನ ಮಾಡುವ ಸ್ಮಾರ್ಟ್‌ ಮೀಟರ್‌ಗಳನ್ನು ಅಳವಡಿಸಲಾಗುತ್ತಿದೆ. ಈಗಾಗಲೇ 25 ಸಾವಿರ ಸ್ಮಾರ್ಟ್‌ ಮೀಟರ್‌ಗಳನ್ನು ಅಳವಡಿಸಲಾಗಿದ್ದು, ಒಟ್ಟು 5 ಲಕ್ಷ ಮೀಟರ್‌ಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ. 3 ಲಕ್ಷ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಸಮಗ್ರ ವರದಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಅಂಡರ್‌ಗ್ರೌಂಡ್‌ ಕೇಬಲಿಂಗ್‌: ಮೈಸೂರು ನಗರದಲ್ಲಿ ಈಗಾಗಲೇ ಅಂಡರ್‌ಗ್ರೌಂಡ್‌ ವಿದ್ಯುತ್‌ ಕೇಬಲಿಂಗ್‌ ನಡೆಯುತ್ತಿದೆ. ಇದರಿಂದ ವಿದ್ಯುತ್‌ ಸೋರಿಕೆ ತಡೆಗಟ್ಟುವುದರ ಜೊತೆಗೆ, ಒಮ್ಮೆ ಬಂಡವಾಳ ಹೂಡಿಕೆ ಮಾಡಿದರೆ, ಮತ್ತೆ ಬಂಡವಾಳ ಹೂಡಿಕೆ ಮಾಡುವ ಅಗತ್ಯವಿಲ್ಲ. ಸುರಕ್ಷತೆ ದೃಷ್ಟಿಯಿಂದ ಒಳ್ಳೆಯ ಯೋಜನೆ ಇದಾಗಿದೆ ಎಂದು ತಿಳಿಸಿದರು.

ಸಹಕಾರ: ಕರ್ನಾಟಕ ವಿದ್ಯುತ್‌ತ್ಛಕ್ತಿ ಮಂಡಳಿ ಎಂಜಿನಿಯರುಗಳ ಸಂಘದ ಅಧ್ಯಕ್ಷ ಟಿ.ಎಂ. ಶಿವಪ್ರಕಾಶ್‌ ಮಾತನಾಡಿ, ಸ್ಮಾರ್ಟ್‌ ಸಿಟಿ ಪ್ರಾಜೆಕ್ಟ್ ಹಾಗೂ ಸ್ಮಾರ್ಟ್‌ ಪವರ್‌ ಗ್ರಿಡ್‌ ಈ ಎರಡೂ ಯೋಜನೆಗಳು ಸಾರ್ವಜನಿಕರು ಮತ್ತು ನಗರಾಭಿವೃದ್ಧಿಗೆ ಅನುಕೂಲವಾಗಲಿದೆ. ಎಂಜಿನಿಯರ್‌ಗಳ ಸಂಘವು ಸರ್ಕಾರ ಹಾಗೂ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೂ ಸಹಕಾರ ನೀಡುತ್ತಾ ಬಂದಿದೆ ಎಂದರು.

ಕಾರ್ಯಕ್ರಮದಲ್ಲಿ ಇಂಧನ ಸಚಿವಾಲಯದ ಎನ್‌ಎಸ್‌ಜಿಎಂ ನಿರ್ದೇಶಕ ಅರುರ್‌ ಮಿಶ್ರಾ, ಕೆಇಬಿಇಎ ಪ್ರಧಾನ ವ್ಯವಸ್ಥಾಪಕ ಕೆ. ತಿಪ್ಪೆಸ್ವಾಮಿ, ಸೆಸ್ಕ್ ತಾಂತ್ರಿಕ ವಿಭಾಗದ ನಿರ್ದೇಶಕ ಆಫ‌¤ಬ್‌ ಅಹಮದ್‌, ಎನ್‌ಎಸ್‌ಜಿಎಂ ಪ್ರಧಾನ ವ್ಯವಸ್ಥಾಪಕಿ ಕುಮುದ್‌ ವಧ್ವಾ, ಶಿವಕುಮಾರ್‌, ಶಿವಣ್ಣ ಸೇರಿದಂತೆ ಮತ್ತಿತರರು ಉಪಸ್ಥತರಿದ್ದರು.

ಸ್ಮಾರ್ಟ್‌ ಮೀಟರ್‌ನಿಂದ ವಿದ್ಯುತ್‌ ಸೋರಿಕೆ ತಡೆ: ಸ್ಮಾರ್ಟ್‌ ಮೀಟರ್‌ ಅಳವಡಿಕೆಯಿಂದ ಮಾನವ ಶಕ್ತಿ ಬಳಕೆಯನ್ನು ಕಡಿಮೆಗೊಳಿಸುವುದಲ್ಲದೇ, ವಿದ್ಯುತ್‌ ಸೋರಿಕೆಯನ್ನು ಕಡಿತಗೊಳಿಸಬಹುದಾಗಿದೆ ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್‌.ಎನ್‌. ಗೋಪಾಲ ಕೃಷ್ಣ ತಿಳಿಸಿದರು. ಗ್ರಾಹಕರು ಎಷ್ಟು ವಿದ್ಯುತ್‌ ಬಳಕೆ ಮಾಡಿದ್ದಾರೆ ಎಂಬುದನ್ನು ಮನೆ ಮನೆಗೆ ಮಾಪನ ಮಾಡುವ ಅಗತ್ಯವಿಲ್ಲ.

ಈ ತಂತ್ರಜ್ಞಾನದ ಮೂಲಕ ವಿತರಣೆ ಮಾಡುವವರಿಗೆ ಹಾಗೂ ಬಳಕೆ ಮಾಡುವವರಿಗೆ ನೇರವಾಗಿ ಮಾಹಿತಿ ಲಭ್ಯವಾಗುತ್ತದೆ. ಈಗಿರುವ ಹಳೆ ಮೀಟರ್‌ನ ಬೆಲೆ 800 ರೂಪಾಯಿಯಾದರೆ, ಸ್ಮಾರ್ಟ್‌ ಮೀಟರ್‌ನ ಬೆಲೆ 6 ಸಾವಿರ ರೂ. ಇದೆ. ಮೈಸೂರು ನಗರದಲ್ಲಿ ಕೈಗೆತ್ತಿಕೊಂಡಿರುವ ಈ ಯೋಜನೆಗೆ ಸಾಕಷ್ಟು ಅನುದಾನದ ಅಗತ್ಯವಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತವ ಸಲ್ಲಿಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.