ಕಷ್ಟಕಾಲದಲ್ಲಿ ಕೈ ಹಿಡಿದ ಕಂಡಕ್ಟರ್‌

ಮೂರೇ ನಿಮಿಷದ ಮನುಷ್ಯ

Team Udayavani, Aug 27, 2019, 5:47 AM IST

n-8

ಬಳ್ಳಾರಿ ಜಿಲ್ಲೆಯ ಶಿರಗುಪ್ಪದಲ್ಲಿ ಅತಿಥಿ ಉಪನ್ಯಾಸಕರ ಸಂದರ್ಶನ ಏರ್ಪಡಿಸಿದ್ದರು. ನಾನು ಸ್ವಂತ ಊರಿನಿಂದ ಕೊಪ್ಪಳಕ್ಕೆ ಬಂದು ಅಲ್ಲಿಂದ ಬಸ್‌ ಮೂಲಕ ಹೊರಟಿದ್ದೆ. ಹನ್ನೊಂದು ಗಂಟೆಗೆ ಸಂಜರ್ಶನ. ಸರಿಯಾದ ಸಮಯಕ್ಕೆ ಹಾಜರಾದೆ. ನನ್ನೊಂದಿಗೆ ಇನ್ನೂ ಐದಾರು ಜನ ಬಂದಿದ್ದರು. ಹೆಚ್ಚು ಕಡಿಮೆ ಒಂದು ಘಂಟೆಯಲ್ಲಿ ಎಲ್ಲಾ ಪ್ರಕ್ರಿಯೆ ಮುಗಿಯಿತು. ಎರಡು ದಿನ ಬಿಟ್ಟು ಫ‌ಲಿತಾಂಶವನ್ನು ಪ್ರಕಟಿಸುತ್ತೇವೆ. ಆಯ್ಕೆಯಾದವರಿಗೆ ನೇರವಾಗಿ ತಿಳಿಸುತ್ತೇವೆ ಎಂದರು. ಹಾಗಾಗಿ ಎಲ್ಲರೂ ಅಲ್ಲಿಂದ ಹೊರ ಬಿದ್ದೆವು.

ಅಷ್ಟು ಹೊತ್ತಿಗೆಲ್ಲಾ ಆತ್ಮೀಯರಾಗಿದ್ದ ನಾವುಗಳು, ಹೊರಗೆ ಬಂದು ಟೀ ಕುಡಿಯಲೆಂದು ಹೋಟೆಲ್‌ಗೆ ಹೋದೆವು. ಅಪರೂಪದ ಆತಿಥ್ಯಕ್ಕೆ ನಾನೇ ಹಣ ಕೊಡಬೇಕು ಅಂದು ಕೊಳ್ಳುವ ಹೊತ್ತಿಗೆ ಮತ್ಯಾರೋ ಬಿಲ್‌ ಕೊಟ್ಟರು.

ಸರಿ, ಬಸ್ಟ್ಯಾಂಡಿಗೆ ಬಂದು ಕೊಪ್ಪಳದ ಬಸ್‌ ಏರಿದೆ. ಕಂಡಕ್ಟರ್‌ ಟಿಕೆಟ್‌ ಕೊಡುತ್ತಾ ಬಂದಾಗ, ಟಿಕೆಟ್‌ ದುಡ್ಡು ಕೊಡಲು ಜೇಬಿಗೆ ಕೈ ಹಾಕಿದರೆ ಹಣವೇ ಇಲ್ಲ. ನಾನೇ ಕಳೆದುಕೊಂಡಿದ್ದೆನೋ ಅಥವಾ ಯಾರಾದರೂ ಕದ್ದಿದ್ದರೋ ಗೊತ್ತಿಲ್ಲ. ಶಿರಗುಪ್ಪದಿಂದ ಕೊಪ್ಪಳಕ್ಕೆ ನೂರು ರೂ ಬಸ್‌ ಚಾರ್ಜ್‌. ನಾನು ಒಳ್ಳೆಯ ಬಟ್ಟೆ ಧರಿಸಿ ಚೆನ್ನಾಗಿ ಕಾಣುತ್ತಿದ್ದೆ. ಇಂಥದರಲ್ಲಿ ಹಣವಿಲ್ಲ ಅಂದರೆ ಯಾರು ನಂಬ್ತಾರೆ? ಅಲ್ಲಿ ನನಗೆ ಪರಿಚಿತರಾರೂ ಇಲ್ಲ. ಧೈರ್ಯದಿಂದ, ಸಂಕ್ಷೇಪವಾಗಿ ನನ್ನ ಪರಿಸ್ಥಿತಿಯನ್ನು ಕಂಡಕ್ಟರ್‌ಗೆ ಹೇಳಿಕೊಂಡೆ. “ಕೊಪ್ಪಳದಲ್ಲಿ ಇಳಿಯುತ್ತಲೇ ನಿಮಗೆ ಹಣ ಕೊಡುವ ವ್ಯವಸ್ಥೆ ಮಾಡುತ್ತೇನೆ’ ಅಂದೆ. ಕಂಡಕ್ಟರ್‌ ಪ್ರಶ್ನೆಯನ್ನೇ ಕೇಳದೆ, ತಕ್ಷಣ ಟಿಕೆಟ್‌ ಕೊಟ್ಟು ಬಿಟ್ಟ. ನನ್ನ ಸ್ನೇಹಿತನಿಗೆ ಫೋನ್‌ ಮಾಡಿ, ಮುಂದಿನ ವ್ಯವಸ್ಥೆ ಮಾಡಿದ್ದೆ. ಕೊಪ್ಪಳ ಬಸ್‌ ಬಸ್ಟಾಂಡಿಗೆ ಬಂದಾಗ ಅಭಿಮಾನ ಪೂರ್ವಕ ಕಂಡಕ್ಟರನಿಗೆ ಹಣ ಕೊಟ್ಟೆ. ಆತ, “ಯಾರಿಗಾದರೂ ಇಂತಹ ಸಂದರ್ಭ ಎದುರಾಗಬಹುದು. ನಿಮ್ಮ ಮಾತಿನಲ್ಲಿ ಸತ್ಯವಿದೆ ಅನ್ನಿಸಿಯೇ ಟಿಕೆಟ್‌ ಕೊಟ್ಟೆ. ಹುಷಾರು, ಹೋಗಿ ಬನ್ನಿ’ ಎಂದರು. ಅವರಿಗೊಂದು ಕೃತಜ್ಞತೆ ಹೇಳಿ ಹೊರಟೆ. ಈಗ, ಆವತ್ತಿನ ಚಿತ್ರಣ ನೆನಪಿಸಿಕೊಂಡಾಗೆಲ್ಲ, ಕಂಡಕ್ಟರ್‌ ದೇವರಂತೆ ಕಾಣುತ್ತಾರೆ.

ಭೋಜರಾಜ ಸೊಪ್ಪಿಮಠ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.