ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ದೇಶ್ವರ ಶ್ರೀ ಮೆಚ್ಚುಗೆ

33 ಕೋಟಿ ರೂ. ವೆಚ್ಚದಲ್ಲಿ ಮೆಗಾ ಮಾರುಕಟ್ಟೆ ಕಾಮಗಾರಿ

Team Udayavani, Aug 27, 2019, 2:41 PM IST

vp-tdy-2

ಬಸವನಬಾಗೇವಾಡಿ: ಬಸವ ಭವನದ ಕಾಮಗಾರಿ ನೀಲನಕ್ಷೆಯನ್ನು ಶಾಸಕ ಶಿವಾನಂದ ಪಾಟೀಲ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ತೋರಿಸಿದರು.

ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಮಾರುಕಟ್ಟೆ ಕಾಮಗಾರಿ, ವಿಜಯಪುರ ರಸ್ತೆಯಲ್ಲಿ ನಡೆಯುತ್ತಿರುವ ಬಸವ ಭವನ ಕಾಮಗಾರಿಯನ್ನು ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ವೀಕ್ಷಿಸಿ ಶುಭಾಶೀರ್ವಾದ ನೀಡಿದರು.

ಈ ವೇಳೆ ಶಾಸಕ ಶಿವಾನಂದ ಪಾಟೀಲ ಅವರು, ಮೆಗಾ ಮಾರುಕಟ್ಟೆ ಕಾಮಗಾರಿ ಮೊದಲ ಹಂತದಲ್ಲಿ 33 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಕೆಳ ಭಾಗದಲ್ಲಿ ವಾಹನಗಳ ಪಾರ್ಕಿಂಗ್‌ ಮಾಡಲು ಅವಕಾಶ ಕಲ್ಪಿಸಲಾಗುವುದು. ಇದು ಐದು ಅಂತಸ್ತಿನ ಮೆಗಾ ಮಾರುಕಟ್ಟೆ ನಿರ್ಮಾಣವಾಗಲಿದೆ. ಸದ್ಯ ಮೊದಲ, ಎರಡನೇ ಅಂತಸ್ತಿನ ಕಟ್ಟಡ ಕಾಮಗಾರಿ ಆರಂಭವಾಗಿದೆ. ಮೆಗಾ ಮಾರುಕಟ್ಟೆಯ ಮೇಲಿನ ಅಂತಸ್ತಿನ ಅಂಗಡಿಗಳಿಗೆ ಹೋಗಲು ಲಿಪ್ಟ್ ವ್ಯವಸ್ಥೆ ಮಾಡಲಾಗುವದು. ಇದು ಒಟ್ಟು 57 ಕೋಟಿ ವೆಚ್ಚದ ಕಾಮಗಾರಿಯಾಗಿದೆ. ಪಟ್ಟಣದಲ್ಲಿರುವ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ ಎಂದು ಶ್ರೀಗಳಿಗೆ ವಿವರಿಸಿದರು.

ಪಟ್ಟಣದ ವಿಜಯಪುರ ರಸ್ತೆಯಲ್ಲಿ ಅಂದಾಜು 9 ಕೋಟಿ ವೆಚ್ಚದಲ್ಲಿ ಭವ್ಯವಾದ ಬಸವ ಭವನ ನಿರ್ಮಾಣವಾಗುತ್ತಿದೆ. ಇದರಲ್ಲಿ ಮದುವೆ ಸೇರಿದಂತೆ ವಿವಿಧ ಸಮಾರಂಭಗಳನ್ನು ಮಾಡಲು ಜನರಿಗೆ ಬೇಕಾದ ಸೌಲಭ್ಯಗಳನ್ನು ಒಳಗೊಂಡಂತೆ ಬಸವ ಭವನ ನಿರ್ಮಾಣವಾಗುತ್ತಿದೆ. ಮೇಲ್ಭಾಗದಲ್ಲಿ ದೊಡ್ಡ ಪ್ರಮಾಣದ ಹಾಲ್ ವ್ಯವಸ್ಥೆಯಿದೆ. ಕೆಳ ಭಾಗದಲ್ಲಿ ಊಟದ ವ್ಯವಸ್ಥೆಗೆ ಜಾಗೆ ಕಲ್ಪಿಸಲಾಗಿದೆ. ಅಡುಗೆ ತಯಾರಿಸಲು ಅಡುಗೆ ಕೋಣೆ, ಜನರು ಕೈ ತೊಳೆಯಲು ಬೇಕಾದ ನಲ್ಲಿ ವ್ಯವಸ್ಥೆ ಸೇರಿದಂತೆ ಸಕಲ ಸೌಲಭ್ಯಗಳನ್ನು ಒಳಗೊಂಡ ಭವ್ಯವಾದ ಬಸವ ಭವನ ನಿರ್ಮಾಣವಾಗುತ್ತಿದೆ.

ಇದಕ್ಕೆ ಪಕ್ಕದಲ್ಲಿರುವ ಉರ್ದು ಪ್ರಾಥಮಿಕ ಶಾಲೆಯ ಜಾಗೆಯನ್ನು ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ವಿಚಾರವಿದೆ. ಉರ್ದು ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಲಾಗುವದು. ಇಂಗಳೇಶ್ವರ ರಸ್ತೆಯಲ್ಲಿ ಪುರಸಭೆಯಿಂದ ಕಡು ಬಡವರಿಗೆ ಅನುಕೂಲವಾಗುವ 500 ಜಿ ಪ್ಲಸ್‌ ಮಾದರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ ಎಂದು ಶ್ರೀಗಳ ಗಮನಕ್ಕೆ ತಂದ ಅವರು, ಬಸವ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಶ್ರೀಗಳಿಗೆ ಆಗಮಿಸಬೇಕೆಂದು ಮನವಿ ಮಾಡಿಕೊಂಡರು.

ಪಟ್ಟಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿ ಹರ್ಷಿಸಿದರು. ಈ ಸಂದರ್ಭದಲ್ಲಿ ಸಿದ್ದಲಿಂಗ ಸ್ವಾಮೀಜಿ, ಅಕ್ಕಅನ್ನಪೂರ್ಣತಾಯಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ತಹಸೀಲ್ದಾರ ಎಂ.ಎನ್‌.ಚೋರಗಸ್ತಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಕರೂರ, ಅಭಿಯಂತರರಾದ ಜಿ.ಸಿ.ವಂದಾಲ, ವಿಲಾಸ ರಾಠೊಡ, ಮುಖ್ಯಾಧಿಕಾರಿ ಬಿ.ಎ.ಸೌದಾಗರ, ಮುಖಂಡರಾದ ಬಸವರಾಜ ಕೋಟಿ, ಸಂಗಮೇಶ ಓಲೇಕಾರ, ಬಸವರಾಜ ರಾಯಗೊಂಡ, ಅಶೋಕ ಹಾರಿವಾಳ, ದೇವೇಂದ್ರ ಚವ್ಹಾಣ, ಶಿವಾನಂದ ತೋಳನೂರ, ವಿನುತ ಕಲ್ಲೂರ, ಸಂಜೀವ ಕಲ್ಯಾಣಿ, ನೀಲಪ್ಪ ನಾಯಕ, ಜಗದೇವಿ ಗುಂಡಳ್ಳಿ, ರುಕ್ಮಿಣಿ ರಾಠೊಡ, ಸುನೀಲ ಚಿಕ್ಕೊಂಡ, ಸುರೇಶ ಮಣ್ಣೂರ, ದೀಲಿಪ್‌, ಬಸವರಾಜ ಗಚ್ಚಿನವರ, ನಜೀರ ಗಣಿ, ರಾಜು ಬೂತನಾಳ, ಪಿಎಸ್‌ಐ ಗುರುಶಾಂತ ದಾಶ್ಯಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.