ಸ್ತ್ರೀಯರು ಶಿಕ್ಷಣ ಪಡೆದರೂ ಉದ್ಯೋಗಸ್ಥರಾಗಲು ಹಿಂದೇಟು


Team Udayavani, Aug 28, 2019, 3:00 AM IST

stri

ಹುಣಸೂರು: ಮಹಿಳೆಯರು ಹೆಚ್ಚಿನ ಉದ್ಯೋಗ ಗಿಟ್ಟಿಸುವ ಜೊತೆಗೆ ಎಲ್ಲಾ ಕ್ಷೇತ್ರಗಳಿಗೂ ದಾಪುಗಾಲಿಡಬೇಕು. ಇದು ವಿದ್ಯಾರ್ಥಿ ದಿಸೆಯಿಂದಲೇ ಆಗುವುದು ಒಳಿತು ಎಂದು ಮೈಸೂರು ವಿವಿ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಮುಖ್ಯಸ್ಥೆ ಪ್ರೊ.ಎಂ.ಇಂದಿರಾ ಸಲಹೆ ನೀಡಿದರು.

ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಮೈಸೂರು ವಿವಿಯ ಎನ್‌ಎಸ್‌ಎಸ್‌ ಘಟಕದ ಸಹಯೋಗದಲ್ಲಿ ಎನ್‌ಎಸ್‌ಎಸ್‌ ಸುವರ್ಣ ಸಂಭ್ರಮ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶೇಷ ಉಪನ್ಯಾಸದಲ್ಲಿ “ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ’ ವಿಷಯದ ಕುರಿತು ಅವರು ಮಾತನಾಡಿದರು.

ದೊಡ್ಡ ಹೊಡೆತ: ಹೆಣ್ಣುಮಕ್ಕಳು ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿದ್ದರೂ ಉದ್ಯೋಗಸ್ಥರಾಗುವ ಹಂತದಲ್ಲಿ ಮಹಿಳೆಯರ ಪ್ರಮಾಣ ತೀರ ಕಡಿಮೆಯಿದೆ. ಹೀಗಾಗಿ ಮಹಿಳೆಯರ ಸಬಲೀಕರಣಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಮಹಿಳೆಯರು ಶಿಕ್ಷಣ ಹೊಂದಿದರೂ ಕಡೆಗೆ ಮದುವೆ, ಮಕ್ಕಳು, ಸಂಸಾರವೇ ಅಂತಿಮವೆನ್ನುವಂತೆ ಉದ್ಯೋಗಸ್ಥರಾಗುವುದನ್ನು ಕಡೆಗಣಿಸುತ್ತಿದ್ದಾರೆ ಎಂದು ವಿಷಾದಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತಿತರ ಸಂಸ್ಥೆಗಳ ಮೂಲಕ ಮಹಿಳಾ ಸ್ವಸಹಾಯ ಸಂಘಗಳು ಅಸ್ತಿತ್ವಕ್ಕೆ ಬಂದ ನಂತರ ಮಹಿಳೆಯರಲ್ಲಿ ಉಳಿತಾಯ ಮಹತ್ವ, ಸ್ವ ಉದ್ಯೋಗ, ನಾಯಕತ್ವ ಬೆಳವಣಿಗೆ, ಪ್ರಶ್ನಿಸುವ, ಆರ್ಥಿಕ ಸ್ವಾವಲಂಬನೆ ಮೂಲಕ ಸಬಲೀಕರಣದ ಜೊತೆಗೆ ಹೋರಾಟದ ಮನೋಭಾವ ಬೆಳೆದಿದೆ. ಆದರೂ ಸಹ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯಾಗಿದ್ದು, ಯುವಪಡೆ ಇದನ್ನು ಮೆಟ್ಟಿ ಮುಂದೆ ಬರಬೇಕೆಂದು ಕಿವಿಮಾತು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಸುರೇಶ್‌, ಸ್ವಸಹಾಯ ಸಂಘಗಳ ಸ್ಥಾಪನೆ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಗಣ್ಯರು ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಜ್ಞಾನಪ್ರಕಾಶ್‌, ದೇವರಾಜ ಅರಸು ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶಯ್ಯ, ಎನ್‌ಎಸ್‌ಎಸ್‌ ಘಟಕದ ಸಂಚಾಲಕ ಡಾ.ಕೆ.ಎಸ್‌.ಭಾಸ್ಕರ್‌, ಅಧ್ಯಾಪಕ ಡಾ.ಆನಂದ್‌, ಐಕ್ಯೂಎಸಿ ಸಂಚಾಲಕ ದೀಪುಕುಮಾರ್‌, ಧರ್ಮಸ್ಥಳ ಯೋಜನೆಯ ರಾಣಿ ಸೇರಿದಂತೆ ನಗರದ ಜ್ಞಾನಧಾರ ಕಾಲೇಜು, ಅರಸು ಕಾಲೇಜು, ಹನಗೋಡು ಪ್ರಥಮದರ್ಜೆ ಕಾಲೇಜು, ಸರಗೂರು, ಎಚ್‌.ಡಿ.ಕೋಟೆ, ಕೆ.ಆರ್‌.ನಗರ, ಬೆಟ್ಟದಪುರ, ಕೊಪ್ಪ, ಸಾಲಿಗ್ರಾಮ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎನ್ನೆಸ್ಸೆಸ್‌ಗೆ 50 ವರ್ಷ: 50 ಕಾರ್ಯಕ್ರಮ: ಎನ್‌ಎಸ್‌ಎಸ್‌ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಬಿ.ಚಂದ್ರಶೇಖರ್‌ ಮಾತನಾಡಿ, ಎನ್‌ಎಸ್‌ಎಸ್‌ ಆರಂಭವಾಗಿ 50 ವರ್ಷ ಸಂದ ಹಿನ್ನೆಲೆಯಲ್ಲಿ 50 ಕಾರ್ಯಕ್ರಮ ರೂಪಿಸಲಾಗಿದ್ದು, ಎಲ್ಲಾ ಕಾಲೇಜುಗಳಲ್ಲೂ ಸಹ ವಿಭಿನ್ನ ರೀತಿ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಜಾಗೃತಿಗೊಳಿಸಲಾಗುತ್ತಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಮಹಿಳೆಯರಿಗೆ ರಾಜಕೀಯ ಸಬಲೀಕರಣ ಸಿಕ್ಕಿದೆ. ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದಿಂದ ದೇಶದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವಂತಾಗಬೇಕಿದೆ. ಅಭಿವೃದ್ಧಿ ಎನ್ನುವುದು ಕೇವಲ ಒಂದು ಕೈನಿಂದ ಅಥವಾ ಒಂದು ಸಮುದಾಯದಿಂದ ಮಾತ್ರ ಸಾಧ್ಯವಿಲ್ಲ. ಎಲ್ಲರನ್ನೊಳಗೊಂಡ ಜವಾಬ್ದಾರಿಯುತ ನಡೆಯೇ ಸರ್ವರ ಅಭಿವೃದ್ಧಿಗೆ ಪೂರಕ ಮತ್ತು ಪ್ರೇರಕ ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.