ಪ್ರಧಾನಿ ಮೋದಿಯ ವಾರಣಾಸಿ ಇನ್ಮುಂದೆ ಹಣ್ಣು, ತರಕಾರಿ ರಫ್ತು ಕೇಂದ್ರ; ಏನಿದು ಬ್ರ್ಯಾಂಡ್ ಕಾಶಿ


Team Udayavani, Aug 28, 2019, 5:40 PM IST

Export

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುತ್ತಿರುವ ವಾರಣಾಸಿ ಲೋಕಸಭಾ ಕ್ಷೇತ್ರ ಶೀಘ್ರದಲ್ಲಿಯೇ ಹಣ್ಣು-ಹಂಪಲು ಮತ್ತು ತರಕಾರಿ ರಫ್ತು ಮಾಡುವ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಳ್ಳಲಿದೆ.

ಈ ನಿಟ್ಟಿನಲ್ಲಿ ವಾರಣಾಸಿಯ ರೈತರಿಗೆ ಯುರೋಪ್, ಗಲ್ಫ್, ಸಿಂಗಾಪೂರ್ ದೇಶಗಳಿಗೆ ರಫ್ತು ಮಾಡುವ ಹಣ್ಣು ಹಂಪಲು, ತರಕಾರಿ ಗುಣಮಟ್ಟ ಹೇಗಿರಬೇಕು, ಯಾವ ಶ್ರೇಣಿಯಲ್ಲಿ ಬೆಳೆಯಬೇಕು ಎಂಬ ಬಗ್ಗೆ ತರಬೇತಿ ನೀಡುವುದಾಗಿ ವಾಣಿಜ್ಯ ಇಲಾಖೆ ಘೋಷಿಸಿದೆ.

ವಾರಣಾಸಿಯಲ್ಲಿ ಬೆಳೆಯುವ ಹಣ್ಣು ಹಂಪಲು, ತರಕಾರಿ ಇನ್ಮುಂದೆ ಬನಾರಸ್ ಬ್ರ್ಯಾಂಡ್ ಕಾಶಿ ಅಥವಾ ಬ್ರ್ಯಾಂಡ್ ಕಾಶಿ ಎಂದೇ ಪ್ರಸಿದ್ಧಿಯಾಗುವಂತೆ ಎಲ್ಲಾ ಸಿದ್ಧತೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ. ಹಣ್ಣು, ತರಕಾರಿ ರಫ್ತು ಕಾರ್ಯಕ್ರಮ ಕೃಷಿ ರಫ್ತು ನಿಯಮದ ಅನುಸಾರವೇ ನಡೆಯಲಿದೆ. ಇದರಿಂದ ವಿದೇಶದ ಮಾರುಕಟ್ಟೆಗೆ ರಫ್ತು ಮಾಡುವ ರೈತರಿಗೆ ಲಾಭ ಪಡೆಯಲು ಸಹಕಾರಿಯಾಗುತ್ತದೆ ಎಂದು ವರದಿ ವಿವರಿಸಿದೆ.

ರಫ್ತು ನೀತಿಯ ಮುಖ್ಯ ಉದ್ದೇಶವೇನೆಂದರೆ ಭಾರತದ ರಫ್ತು ಮಾರುಕಟ್ಟೆಯನ್ನು ವಿಶ್ವದಲ್ಲಿಯೇ ದ್ವಿಗುಣಗೊಳಿಸುವುದು ಈ ಮೂಲಕ ಜಾಗತಿಕ ಮಾರುಕಟ್ಟೆಯಲ್ಲಿ ಭಾರತದ ರಫ್ತು ಪ್ರಮಾಣವನ್ನು ಆದಷ್ಟು ಶೀಘ್ರವಾಗಿ ಹೆಚ್ಚಿಸುವುದಾಗಿದೆ ಎಂದು ಹೇಳಿದೆ.

ಭಾರತದಲ್ಲಿ ಬೆಳೆದ ಹಣ್ಣುಗಳನ್ನು ಹೆಚ್ಚಾಗಿ ರಫ್ತು ಮಾಡುವ ದೇಶಗಳಲ್ಲಿ ನೆದರ್ಲ್ಯಾಂಡ್, ಅಮೆರಿಕ, ಜಪಾನ್ ಮತ್ತು ಯುಎಇ ಸೇರಿದೆ. 2018-19ರಲ್ಲಿ ಭಾರತದಿಂದ ರಫ್ತಾಗುವ ಪ್ರಮಾಣ ಶೇ.8ರಷ್ಟಿದೆ. ಹಣ್ಣುಗಳ ರಫ್ತು ಪ್ರಮಾಣ ಶೇ.12ರಷ್ಟಿದೆ ಎಂಬುದು ವಾಣಿಜ್ಯ ಸಚಿವಾಲಯದ ಅಂಕಿ-ಅಂಶವಾಗಿದೆ. ಅದೇ ರೀತಿ ಈ ಹಿಂದಿನ ವರ್ಷದಲ್ಲಿ ಭಾರತದಿಂದ ರಫ್ತಾಗುವ ತರಕಾರಿ ಶೇ.0.3ರಷ್ಟು ಎಂದು ತಿಳಿಸಿದೆ.

ಹಣ್ಣು ಹಂಪಲು, ತರಕಾರಿ ರಫ್ತು ಮಾಡುವ ಮೂಲಕ ದೇಶದ ತರಕಾರಿ, ಹಣ್ಣು ಹಂಪಲು ಉತ್ಪಾದನೆಯ ಪ್ರಮಾಣವನ್ನೂ ಹೆಚ್ಚಿಸಬಹುದಾಗಿದೆ. ಆ ನಿಟ್ಟಿನಲ್ಲಿ ರೈತರು ತಮ್ಮ ಬೆಳೆಯನ್ನು ಲಾಭದಾಯಕವಾಗುವ ನಿಟ್ಟಿನಲ್ಲಿ ಬೆಳೆಸಬೇಕೇ ವಿನಃ, ಸಬ್ಸಿಡಿಗಳ ಮೇಲೆ ಅವಲಂಬಿತರಾಗಬಾರದು ಎಂದು ಕೃಷಿ ಸಚಿವರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವಾರಣಾಸಿ ತರಕಾರಿ ರಫ್ತು; 2 ಹಂತದಲ್ಲಿ ಯೋಜನೆ ಜಾರಿ

ವಾರಣಾಸಿಯನ್ನು ತರಕಾರಿ ಮತ್ತು ಹಣ್ಣುಹಂಪಲು ರಫ್ತು ಕೇಂದ್ರವನ್ನಾಗಿ ಮಾಡಲು ಸರಕಾರ ಎರಡು ಹಂತಗಳಲ್ಲಿ ಯೋಜನೆ ಜಾರಿ ಮಾಡಲಿದೆ ಎಂದು ಹೇಳಿದೆ. ಮೊದಲ ಹಂತದಲ್ಲಿ ರೈತರಿಗೆ ರಫ್ತು ಮಾಡುವ ಹಣ್ಣು, ತರಕಾರಿ ಪ್ಯಾಕೇಜ್ ಮಾಡುವ ಪ್ರಾಥಮಿಕ ತರಬೇತಿ ಹಾಗೂ ಜಿಲ್ಲೆಗಳಲ್ಲಿರುವ ರೈತರು ಗುಣಮಟ್ಟದ ರಫ್ತು ತರಕಾರಿ, ಹಣ್ಣು ಹೇಗೆ ಬೆಳೆಸಬೇಕೆಂಬ ಬಗ್ಗೆ ಅರಿವು ಮೂಡಿಸಲಾಗುತ್ತದೆ.

ಎರಡನೇ ಹಂತದಲ್ಲಿ ರಫ್ತು ಮಾಡುವ ತರಕಾರಿ, ಹಣ್ಣುಗಳ ಕುರಿತು ಪ್ರಚಾರ ಮಾಡುವ ಬಗ್ಗೆ ತಿಳಿಸಲಾಗುವುದು. ಅಲ್ಲದೇ ವಿಮಾನ ನಿಲ್ದಾಣದ ಸಮೀಪ ಆ್ಯಗ್ರೋ ಪ್ರೋಸೆಸಿಂಗ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.