ಭಾರತ-ಪಾಕ್ ಯುದ್ಧಕ್ಕೆ ಮುಹೂರ್ತ ನಿಗದಿಪಡಿಸಿದ ಪಾಕಿಸ್ತಾನ! ಸಚಿವ ರಶೀದ್ ಘೋಷಿಸಿದ್ದೇನು?


Team Udayavani, Aug 28, 2019, 5:01 PM IST

Pak-Minister

ರಾವಲ್ಪಿಂಡಿ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ವಿರುದ್ಧ ಕಿಡಿಕಾರುತ್ತಿದ್ದ ಪಾಕಿಸ್ತಾನ ಎಲ್ಲಾ ವಿಧದ ಕಸರತ್ತು ನಡೆಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಇದೀಗ ಪಾಕ್ ಮತ್ತು ಭಾರತದ ನಡುವೆ ಅಕ್ಟೋಬರ್ ಅಥವಾ ಸೆಪ್ಟೆಂಬರ್ ನಲ್ಲಿ ಯುದ್ಧ ನಡೆಯಲಿದೆ ಎಂದು ಪಾಕಿಸ್ತಾನದ ರೈಲ್ವೆ ಸಚಿವ ಶೇಕ್ ರಶೀದ್ ಅಹ್ಮದ್ ಬುಧವಾರ ಭವಿಷ್ಯ ನುಡಿದಿದ್ದಾರೆ.

ತವರು ನಗರ ರಾವಲ್ಪಿಂಡಿಯಲ್ಲಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ರಶೀದ್ ಅಹ್ಮದ್, ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಅಂತಿಮ ಕಾಲಘಟ್ಟ ಬಂದು ಬಿಟ್ಟಿದೆ. ಈ ನಿಟ್ಟಿನಲ್ಲಿ ಭಾರತದ ಜತೆ ಯುದ್ಧ ನಡೆಸುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಫ್ಯಾಸಿಸ್ಟ್ ಪ್ರಧಾನಿ ನರೇಂದ್ರ ಮೋದಿಯ ನಿರ್ಧಾರದಿಂದಾಗಿ ಕಾಶ್ಮೀರ ಸರ್ವನಾಶದ ಅಂಚಿನಲ್ಲಿದೆ. ಈ ವಿಚಾರದಲ್ಲಿ ಪಾಕಿಸ್ತಾನ ಮಾತ್ರ ಮುಂದೆ ನಿಂತು ವಿರೋಧಿಸುತ್ತಿದೆ. ಜಮ್ಮು-ಕಾಶ್ಮೀರದ ವಿಚಾರದಲ್ಲಿ ಭಾರತ ಕೈಗೊಂಡ ನಿರ್ಧಾರದ ಬಗ್ಗೆ ಜಗತ್ತಿನ ಉಳಿದ ಇಸ್ಲಾಂ ರಾಷ್ಟ್ರಗಳು ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ರಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಶಕಗಳ ಹಿಂದೆಯೇ ಭಾರತದ ಮುಸ್ಲಿಂ ವಿರೋಧಿ ಮನಸ್ಥಿತಿಯ ಬಗ್ಗೆ ಮಹಮ್ಮದ್ ಅಲಿ ಜಿನ್ನಾ ವಿಶ್ಲೇಷಿಸಿದ್ದಾರೆ. ಆ ನಿಟ್ಟಿನಲ್ಲಿ ಭಾರತದ ಜತೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಯುತ್ತದೆ ಎಂದು ಈಗಲೂ ಆಲೋಚಿಸುವವರು ಮೂರ್ಖರು ಎಂದು ರಶೀದ್ ವಾಗ್ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.

ಭಾರತ-ಪಾಕ್ ವಾಯು ಮಾರ್ಗ ಆಗಸ್ಟ್ 28ರಿಂದ 30ರವರೆಗೆ ಬಂದ್:

ಕಾಶ್ಮೀರ ವಿಚಾರದಲ್ಲಿ ಒಳಗೊಳಗೆ ಕುದಿಯುತ್ತಿರುವ ಪಾಕಿಸ್ತಾನ ಇದೀಗ ಭಾರತದ ವಿಮಾನ ಸಂಚಾರಕ್ಕೆ ಅಡ್ಡಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಮೂರು ಅಂತಾರಾಷ್ಟ್ರೀಯ ವಾಯು ಮಾರ್ಗವನ್ನು ಆಗಸ್ಟ್ 28ರಿಂದ 30ರವರೆಗೆ ಪೂರ್ಣ ಪ್ರಮಾಣದಲ್ಲಿ ಬಂದ್ ಮಾಡಿರುವುದಾಗಿ ಪಾಕಿಸ್ತಾನ ನಾಗರಿಕ ವಿಮಾನಯಾನ ಅಧಿಕಾರಿಗಳು ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪಾಕಿಸ್ತಾನ ಸಚಿವ, ಭಾರತ ಅಫ್ಘಾನಿಸ್ತಾನಕ್ಕೆ ವಾಣಿಜ್ಯ ಸರಕು ಸಾಗಣೆಗೆ ಬಳಸುವ ಪಾಕಿಸ್ತಾನದ ರಸ್ತೆ ಮಾರ್ಗವನ್ನೂ ಸಂಪೂರ್ಣ ಬಂದ್ ಮಾಡಿರುವುದಾಗಿ ತಿಳಿಸಿದ್ದು, ಸಚಿವ ಸಂಪುಟದ ಸಲಹೆಯಂತೆ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಇತ್ತೀಚೆಗೆ ಫ್ರಾನ್ಸ್ ಸೇರಿದಂತೆ ವಿದೇಶ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ವಾಯುಮಾರ್ಗವನ್ನು ಬಳಸಿಕೊಂಡಿರುವುದಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.