ನಲುಗುತ್ತಿವೆ ದನ ಕರು


Team Udayavani, Aug 31, 2019, 10:46 AM IST

bg-tdy-1

ಚಿಕ್ಕೋಡಿ: ಭೀಕರ ಮಹಾ ಪ್ರವಾಹ ಜನರ ಬದುಕು ಕಸಿದುಕೊಂಡು ಹೋಗಿದೆ. ಜೀವನ ಕಟ್ಟಿಕೊಳ್ಳಲು ಹೆಣಗುತ್ತಿರುವ ಸಂತ್ರಸ್ತರಿಗೆ ಜಾನುವಾರುಗಳ ಮೇವಿನ ಸಮಸ್ಯೆ ತಲೆ ದೋರಿದೆ. ಜಮೀನುಗಳಲ್ಲಿದ್ದ ಮೇವು ಮಹಾಪೂರದಲ್ಲಿ ಕೊಚ್ಚಿ ಹೋಗಿದೆ. ಕಬ್ಬಿನ ಬೆಳೆ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ ಜಾನುವಾರು ಹೊಟ್ಟೆ ತುಂಬಿಸುವುದು ಸಂತ್ರಸ್ತರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಹಿಂದೆಂದೂ ಕಂಡು ಕೇಳರಿಯದ ಭೀಕರ ಪ್ರವಾಹ ಬಂದು ಚಿಕ್ಕೋಡಿ ಕೊಚ್ಚಿ ಹೋಗಿದೆ. ಲಕ್ಷಾಂತರ ಜನ ಮನೆ, ಮಠ, ತೋಟ, ರಸ್ತೆ, ಆಸ್ತಿ ಪಾಸ್ತಿ, ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿ ಧ್ವಂಸವಾಗಿದೆ. ಲಕ್ಷಾಂತರ ಹೆಕ್ಟೇರ್‌ದಲ್ಲಿ ಬೆಳೆದ ಕಬ್ಬಿನ ಬೆಳೆ ನೀರು ಪಾಲಾಗಿ ಕೊಳೆತು ಹೋಗುತ್ತಿದೆ. ಅಲ್ಪಸ್ವಲ್ಪ ಇದ್ದ ಕಬ್ಬು ಕಟಾವು ಮಾಡಿ ಜಾನುವಾರುಗಳಿಗೆ ಹಾಕಬೇಕು ಎಂದರೆ ಮೇವು ದುರ್ನಾತ ಬೀರುತ್ತಿವುದರಿಂದ ದನಕರುಗಳು ತಿನ್ನುತ್ತಿಲ್ಲ, ಹೊಸ ಮೇವು ಬರುವ ತನಕ ಆಯಾ ತಾಲೂಕಾಡಳಿತ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಬೇಕೆನ್ನುವುದು ನದಿ ತೀರದ ಸಂತ್ರಸ್ತರ ಬೇಡಿಕೆಯಾಗಿದೆ. ಸರಕಾರ ಶೀಘ್ರ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಬೇಕೆಂದು ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ನಿವಾಸಿ ಡಾ. ಅಜಿತಕುಮಾರ ಚಿಗರೆ ಒತ್ತಾಯಿಸಿದ್ದಾರೆ.

ಕೃಷ್ಣಾ ನದಿ ತೀರದ ಚಿಕ್ಕೋಡಿ ತಾಲೂಕಿನ ಚೆಂದೂರ, ಯಡೂರ, ಕಲ್ಲೋಳ, ಅಂಕಲಿ, ಮಾಂಜರಿ, ಇಂಗಳಿ, ಯಡೂರವಾಡಿ, ಸದಲಗಾ, ಮಲಿಕವಾಡ, ಜನವಾಡ, ರಾಯಬಾಗ ತಾಲೂಕಿನ ಜುಗುಳ, ಮಂಗಾವತಿ, ಶಹಾಪುರ, ಕುಸನಾಳ, ಮಳವಾಡ, ಸತ್ತಿ, ಸಪ್ತಸಾಗರ, ನದಿ-ಇಂಗಳಗಾಂವ, ಮಹಿಷವಾಡಗಿ, ನಂದೇಶ್ವರ ಮುಂತಾದ ಹಳ್ಳಿಗಳು, ರಾಯಬಾಗ ತಾಲೂಕಿನ ಬಾ. ಸವದತ್ತಿ, ದಿಗ್ಗೇವಾಡಿ, ಜಲಾಲಪೂರ, ಚಿಂಚಲಿ, ನಸಲಾಪುರ, ಬಿರಡಿ, ದೂಧಗಂಗಾ ಮತ್ತು ವೇದಗಂಗಾ ನದಿ ತೀರದ ನಿಪ್ಪಾಣಿ ತಾಲೂಕಿನ ಕಾರದಗಾ, ಭೋಜ, ಹುನ್ನರಗಿ, ಜತ್ರಾಟ, ಭೀವಸಿ, ಯಮಗರ್ಣಿ, ಕೊಗನ್ನೋಳ್ಳಿ, ಬಾರವಾಡ, ಮುಂತಾದ ಗ್ರಾಮಗಳ ನಿರಾಶ್ರಿತರ ಪರಿಸ್ಥಿತಿ ಚಿಂತಾಜನಕವಾಗಿದೆ.

ಪ್ರವಾಹ ಸಂದರ್ಭದಲ್ಲಿ ಪರಿಹಾರ ಕೇಂದ್ರದಲ್ಲಿ ಇರುವ ತನಕ ಆಯಾ ತಾಲೂಕಾಡಳಿತ ಸಂತ್ರಸ್ತರ ಜಾನುವಾರುಗಳಿಗೆ ಸಮರ್ಪಕವಲ್ಲದ್ದಿದ್ದರೂ ಅಲ್ಪ ಸ್ವಲ್ಪವಾದರೂ ಮೇವು ಒದಗಿಸಿದ್ದರು. ಈಗ ಪ್ರವಾಹ ಕಡಿಮೆಯಾಗಿ ಸಂತ್ರಸ್ತರು ಮನೆಗೆ ಹೋಗಿ ಬದುಕು ಕಟ್ಟಿಕೊಳ್ಳಲು ಎಲ್ಲ ರೀತಿಯ ಕಸರತ್ತು ನಡೆಸಿದ್ದಾರೆ. ಆದರೆ ಜಾನುವಾರುಗಳಿಗೆ ಮೇವಿನ ಸಮಸ್ಯೆ ಮಾತ್ರ ನೀಗುತ್ತಿಲ್ಲ, ಹೇಗಾದರೂ ಮಾಡಿ ನಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ. ಆದರೆ ಜಾನುವಾರುಗಳ ಪರಿಸ್ಥಿತಿ ಹೇಗೆ ಎಂಬ ಚಿಂತೆಯಲ್ಲಿ ಸಂತ್ರಸ್ತರು ಇದ್ದಾರೆ.

ಒಂದು ತಿಂಗಳ ಹಿಂದೇಯಷ್ಟೇ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿ ತೀರದ ಕಬ್ಬು, ಗೋವಿನಜೋಳ, ಬಿಳಿಜೋಳ ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದವು. ಈಗ ಮಹಾಪೂರ ಬಂದು ಹೋದಾಗಿನಿಂದ ಕಬ್ಬಿನ ಬೆಳೆ ಕೊಳೆತು ಗಬ್ಬೆದ್ದು ನಾರುತ್ತಿದೆ. ನದಿ ತೀರದ ಜಮೀನುಗಳಲ್ಲಿ ಬಹಳಷ್ಟು ಕಡೆಗಳಲ್ಲಿ ನೀರು ಆವರಿಸಿಕೊಂಡಿದೆ. ಕೆಲ ಪ್ರದೇಶಗಳಲ್ಲಿ ಕೆಸರು ತುಂಬಿಕೊಂಡಿದೆ. ಹೀಗಾಗಿ ರೈತರು ಜಮೀನುಗಳ ಕಡೆ ಹೋಗದ ಪರಿಸ್ಥಿತಿ ಇದೆ. ಇಂತಹ ಸನ್ನಿವೇಶದಲ್ಲಿ ದನಕರುಗಳ ಹೊಟ್ಟೆ ಪಾಡೇನು ಎಂಬ ಪ್ರಶ್ನೆ ರೈತರನ್ನು ಕಾಡುತ್ತಿದೆ.

 

•ಮಹಾದೇವ ಪೂಜೇರಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.