![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 1, 2019, 3:05 AM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋ ತ್ಸವಕ್ಕೆ ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಲು ರೂಪಿಸಿರುವ “ದಸರಾ ಮಹೋ ತ್ಸವ-2019’ರ ವೆಬ್ಸೈಟ್ ಹಾಗೂ ಭಿತ್ತಿಚಿತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಬಿಡುಗಡೆ ಮಾಡಿದರು. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ವೆಬ್ಸೈಟ್ www.mysore dasara.gov.in ಅನಾವರಣ ಹಾಗೂ ಭಿತ್ತಿಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಈ ವೇಳೆ ಮಾತನಾಡಿದ ಸಚಿವ ಸೋಮಣ್ಣ, ದಸರಾ ಮಹೋತ್ಸವದ ವೆಬ್ಸೈಟ್ನಲ್ಲಿ ಕನ್ನಡ, ಇಂಗ್ಲಿಷ್ ಮಾತ್ರ ವಲ್ಲದೆ ಇತರ ಹತ್ತು ಭಾಷೆಗಳಲ್ಲಿ ಮಾಹಿತಿ ಲಭ್ಯ ವಿರುತ್ತದೆ. ವೆಬ್ಸೈಟ್ ಕಂಪ್ಯೂಟರ್, ಮೊಬೈಲ್, ಟ್ಯಾಬ್ಗಳಲ್ಲಿ ಪುಶ್ ನೋಟಿಫಿ ಕೇಶನ್ ವ್ಯವಸ್ಥೆ ಹೊಂದಿದ್ದು, ಅಲರ್ಟ್ ಸೌಲಭ್ಯ ಕಲ್ಪಿಸಲಾಗಿದೆ. ವೆಬ್ಸೈಟ್ನಲ್ಲಿ ದಸರಾ ಪೋಲ್ಆಯ್ಕೆಯಿದ್ದು ಪ್ರವಾಸಿಗರು ತಮಗೆ ಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಬಹುದು.
ದಸರಾ ಕಾರ್ಯಕ್ರಮಗಳಿಗೆ ಗೂಗಲ್ ಕ್ಯಾಲೆಂಡರ್ ಜತೆ ಇಂಟಿಗ್ರೇಟ್ ಮಾಡ ಲಾಗಿದೆ ಎಂದು ತಿಳಿಸಿದರು. ಈ ಬಾರಿಯ ದಸರಾದಲ್ಲಿ 5 ಆನ್ಲೈನ್ ರಸ ಪ್ರಶ್ನೆ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಪ್ರತಿ ಕ್ವಿಜ್ನಿಂದ 5 ಮಂದಿ ವಿಜೇತರನ್ನು ಆಯ್ಕೆ ಮಾಡಿ, ದಸರಾ ನೆನಪಿನ ಕಾಣಿಕೆಯನ್ನು ಬಹುಮಾನವಾಗಿ ನೀಡಲಾಗುವುದು. ದಸರಾ ಮಹೋ ತ್ಸವದ ಎಲ್ಲ ಕಾರ್ಯಕ್ರಮಗಳ ಬಗ್ಗೆ ನಿರಂತರವಾಗಿ ಮಾಹಿತಿ ನೀಡಲಾಗುವುದು ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.